<p><strong>ರಾಮನಗರ</strong>: ಜಿಲ್ಲೆಯ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ 2025-26ನೇ ಸಾಲಿನ ಯುವಜನೋತ್ಸವ ಕಾರ್ಯಕ್ರಮವನ್ನು ಅ. 15ರಂದು ನಗರದ ಡಾ.ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಆಯೋಜಿಸಲಾಗಿದೆ. ಕಾರ್ಯಕ್ರಮದ ಪ್ರಯುಕ್ತ ವಿವಿಧ ಸ್ಪರ್ಧೆಗಳನ್ನು ಏರ್ಪಡಿಸಲಾಗಿದ್ದು, ಆಸಕ್ತರು ನೋಂದಣಿ ಮಾಡಿಕೊಳ್ಳಬೇಕು.</p>.<p>ಜನಪದ ನೃತ್ಯ: (ತಂಡ) (ಕನ್ನಡ/ಆಂಗ್ಲ/ಹಿಂದಿ ಭಾಷೆಯಲ್ಲಿ ಮಾತ್ರ (ಕ್ಯಾಸೆಟ್, ಪೆನ್ ಡ್ರೈವ್ ಹಾಗೂ ಸಿ.ಡಿ ಹಾಡುಗಳಿಗೆ ಅವಕಾಶವಿರುವುದಿಲ್ಲ) ಪ್ರಸ್ತುತಪಡಿಸಬೇಕು.</p>.<p>ಜನಪದ ಗೀತೆ: (ತಂಡ)-(ಕನ್ನಡ/ಆಂಗ್ಲ/ಹಿಂದಿ ಭಾಷೆಯಲ್ಲಿ ಮಾತ್ರ) ಯಾವುದೇ ಸಿನಿಮಾ ಹಾಡುಗಳನ್ನು ಪ್ರಸ್ತುತಪಡಿಸುವಂತಿಲ್ಲ. ಹಾಡುಗಳ ಮಿಶ್ರಣಕ್ಕೆ ಅವಕಾಶವಿರುವುದಿಲ್ಲ. ಮೂಲಧಾಟಿಯ ಒಂದು ಹಾಡನ್ನು ಪ್ರಸ್ತುತಪಡಿಸಬೇಕು.</p>.<p>ಕವಿತೆ ಬರೆಯುವುದು: (ವೈಯಕ್ತಿಕ) (1000 ಪದಗಳಿಗೆ ಮೀರದಂತೆ) ಕನ್ನಡ (ಪ್ರಾದೇಶಿಕ) ಆಂಗ್ಲ/ಹಿಂದಿ ಭಾಷೆಯಲ್ಲಿ ಮಾತ್ರ).</p>.<p>ಕಥೆ ಬರೆಯುವುದು: (1000 ಪದಗಳಿಗೆ ಮೀರದಂತೆ) ಕನ್ನಡ(ಪ್ರಾದೇಶಿಕ) ಆಂಗ್ಲ/ಹಿಂದಿ ಭಾಷೆಯಲ್ಲಿರಬೇಕು. ವಿಷಯವು ಆಕ್ರಮಣಕಾರಿಯಾಗಿರಬಾರದು, ಈಗಾಗಲೇ ಪ್ರಕಟವಾಗಿರಬಾರದು, ಸ್ಪಷ್ಟವಾಗಿರಬೇಕು, ಜಾತಿ/ ಪಂಥ/ ಧರ್ಮ/ ವರ್ಣ/ ಜನಾಂಗವನ್ನು ಒಳಗೊಂಡಿರಬಾರದು ಹಾಗೂ ಸೂಕ್ತವಲ್ಲದ ವಿಷಯ ಒಳಗೊಂಡಿರಬಾರದು.</p>.<p>ಚಿತ್ರಕಲೆ: ಪೋಸ್ಟರ್ ಎ3 ಅಳತೆಯ ಶೀಟ್ನಲ್ಲಿ ಚಿತ್ರಕಲೆಯನ್ನು ಶೀರ್ಷಿಕೆ ಸಮೇತ ನೀಡಬೇಕು.</p>.<p>ಘೋಷಣೆ: ಆಂಗ್ಲ ಮತ್ತು ಹಿಂದಿ ಭಾಷೆಯಲ್ಲಿರಬೇಕು. ಸ್ಪರ್ಧಿಗಳು ಸಿದ್ದಪಡಿಸಿಕೊಂಡಿರುವ ಆಯ್ದ ವಿಷಯಗಳ ಬಗ್ಗೆ 7 ನಿಮಿಷಗಳ ಭಾಷಣವನ್ನು ‘ಭಾರತದಲ್ಲಿ ತುರ್ತು ಪರಿಸ್ಥಿತಿಯ ಅವಧಿ’, ‘ಸಂವಿಧಾನದ ಉಲ್ಲಂಘನೆಯಾಗದಂತೆ ಪ್ರಜಾಪ್ರಭುತ್ವ ಕಾಪಾಡುವುದು’, ‘ಪ್ರಜಾಸತ್ತಾತ್ಮಕ ಮೌಲ್ಯಗಳು’ ವಿಷಯ ಕುರಿತು ಮಾಡಬೇಕು.</p>.<p>ವಿಷಯಾಧಾರಿತ ಸ್ಪರ್ಧೆಗಳು: ಪ್ರದರ್ಶನ (ವಿಜ್ಞಾನ ಮತ್ತು ತಂತ್ರಜ್ಞಾನದಲ್ಲಿ ನಾವೀನ್ಯತೆ ವಿಷಯ). ರಾಜ್ಯ ಮಟ್ಟದವರೆಗೆ ಮಾತ್ರ ಆಯೋಜಿಸಲಾಗುವುದು.</p>.<p>ಜಿಲ್ಲೆಯ 15ರಿಂದ 29 ವರ್ಷದೊಳಗಿನ ಯುವಕ/ಯುವತಿಯರು ಸ್ಪರ್ಧೆಗಳಲ್ಲಿ ಭಾಗವಹಿಸಬಹುದಾಗಿದೆ. ಆಸಕ್ತರು ಅ. 14ರ ಸಂಜೆ 5.30ರೊಳಗೆ ತಮ್ಮ ಹೆಸರುಗಳನ್ನು ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಬೆಂಗಳೂರು ದಕ್ಷಿಣ ಜಿಲ್ಲೆ ಈ ಕಚೇರಿಯಲ್ಲಿ ನೋಂದಾಯಿಸಿಕೊಳ್ಳಬೇಕು. ಯುವಕ/ಯುವತಿಯರು ಆಧಾರ್ ಕಾರ್ಡ್ ಜೆರಾಕ್ಸ್ ಮತ್ತು ಬ್ಯಾಂಕ್ ಖಾತೆ ವರದಿಯ ಜೆರಾಕ್ಸ್ ಪ್ರತಿ ಸಲ್ಲಿಸುವುದು ಕಡ್ಡಾಯವಾಗಿರುತ್ತದೆ.</p>.<p>ಹೆಚ್ಚಿನ ಮಾಹಿತಿಗೆ ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಇವರನ್ನು ಖುದ್ದಾಗಿ ಅಥವಾ ಕಚೇರಿ ಅಧೀಕ್ಷಕರು, ದೂ. ಸಂಖ್ಯೆ: 7338149456, 9448153308 ಸಂಪರ್ಕಿಸಬೇಕು ಎಂದು ಪ್ರಕಟಣೆ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಮನಗರ</strong>: ಜಿಲ್ಲೆಯ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ 2025-26ನೇ ಸಾಲಿನ ಯುವಜನೋತ್ಸವ ಕಾರ್ಯಕ್ರಮವನ್ನು ಅ. 15ರಂದು ನಗರದ ಡಾ.ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಆಯೋಜಿಸಲಾಗಿದೆ. ಕಾರ್ಯಕ್ರಮದ ಪ್ರಯುಕ್ತ ವಿವಿಧ ಸ್ಪರ್ಧೆಗಳನ್ನು ಏರ್ಪಡಿಸಲಾಗಿದ್ದು, ಆಸಕ್ತರು ನೋಂದಣಿ ಮಾಡಿಕೊಳ್ಳಬೇಕು.</p>.<p>ಜನಪದ ನೃತ್ಯ: (ತಂಡ) (ಕನ್ನಡ/ಆಂಗ್ಲ/ಹಿಂದಿ ಭಾಷೆಯಲ್ಲಿ ಮಾತ್ರ (ಕ್ಯಾಸೆಟ್, ಪೆನ್ ಡ್ರೈವ್ ಹಾಗೂ ಸಿ.ಡಿ ಹಾಡುಗಳಿಗೆ ಅವಕಾಶವಿರುವುದಿಲ್ಲ) ಪ್ರಸ್ತುತಪಡಿಸಬೇಕು.</p>.<p>ಜನಪದ ಗೀತೆ: (ತಂಡ)-(ಕನ್ನಡ/ಆಂಗ್ಲ/ಹಿಂದಿ ಭಾಷೆಯಲ್ಲಿ ಮಾತ್ರ) ಯಾವುದೇ ಸಿನಿಮಾ ಹಾಡುಗಳನ್ನು ಪ್ರಸ್ತುತಪಡಿಸುವಂತಿಲ್ಲ. ಹಾಡುಗಳ ಮಿಶ್ರಣಕ್ಕೆ ಅವಕಾಶವಿರುವುದಿಲ್ಲ. ಮೂಲಧಾಟಿಯ ಒಂದು ಹಾಡನ್ನು ಪ್ರಸ್ತುತಪಡಿಸಬೇಕು.</p>.<p>ಕವಿತೆ ಬರೆಯುವುದು: (ವೈಯಕ್ತಿಕ) (1000 ಪದಗಳಿಗೆ ಮೀರದಂತೆ) ಕನ್ನಡ (ಪ್ರಾದೇಶಿಕ) ಆಂಗ್ಲ/ಹಿಂದಿ ಭಾಷೆಯಲ್ಲಿ ಮಾತ್ರ).</p>.<p>ಕಥೆ ಬರೆಯುವುದು: (1000 ಪದಗಳಿಗೆ ಮೀರದಂತೆ) ಕನ್ನಡ(ಪ್ರಾದೇಶಿಕ) ಆಂಗ್ಲ/ಹಿಂದಿ ಭಾಷೆಯಲ್ಲಿರಬೇಕು. ವಿಷಯವು ಆಕ್ರಮಣಕಾರಿಯಾಗಿರಬಾರದು, ಈಗಾಗಲೇ ಪ್ರಕಟವಾಗಿರಬಾರದು, ಸ್ಪಷ್ಟವಾಗಿರಬೇಕು, ಜಾತಿ/ ಪಂಥ/ ಧರ್ಮ/ ವರ್ಣ/ ಜನಾಂಗವನ್ನು ಒಳಗೊಂಡಿರಬಾರದು ಹಾಗೂ ಸೂಕ್ತವಲ್ಲದ ವಿಷಯ ಒಳಗೊಂಡಿರಬಾರದು.</p>.<p>ಚಿತ್ರಕಲೆ: ಪೋಸ್ಟರ್ ಎ3 ಅಳತೆಯ ಶೀಟ್ನಲ್ಲಿ ಚಿತ್ರಕಲೆಯನ್ನು ಶೀರ್ಷಿಕೆ ಸಮೇತ ನೀಡಬೇಕು.</p>.<p>ಘೋಷಣೆ: ಆಂಗ್ಲ ಮತ್ತು ಹಿಂದಿ ಭಾಷೆಯಲ್ಲಿರಬೇಕು. ಸ್ಪರ್ಧಿಗಳು ಸಿದ್ದಪಡಿಸಿಕೊಂಡಿರುವ ಆಯ್ದ ವಿಷಯಗಳ ಬಗ್ಗೆ 7 ನಿಮಿಷಗಳ ಭಾಷಣವನ್ನು ‘ಭಾರತದಲ್ಲಿ ತುರ್ತು ಪರಿಸ್ಥಿತಿಯ ಅವಧಿ’, ‘ಸಂವಿಧಾನದ ಉಲ್ಲಂಘನೆಯಾಗದಂತೆ ಪ್ರಜಾಪ್ರಭುತ್ವ ಕಾಪಾಡುವುದು’, ‘ಪ್ರಜಾಸತ್ತಾತ್ಮಕ ಮೌಲ್ಯಗಳು’ ವಿಷಯ ಕುರಿತು ಮಾಡಬೇಕು.</p>.<p>ವಿಷಯಾಧಾರಿತ ಸ್ಪರ್ಧೆಗಳು: ಪ್ರದರ್ಶನ (ವಿಜ್ಞಾನ ಮತ್ತು ತಂತ್ರಜ್ಞಾನದಲ್ಲಿ ನಾವೀನ್ಯತೆ ವಿಷಯ). ರಾಜ್ಯ ಮಟ್ಟದವರೆಗೆ ಮಾತ್ರ ಆಯೋಜಿಸಲಾಗುವುದು.</p>.<p>ಜಿಲ್ಲೆಯ 15ರಿಂದ 29 ವರ್ಷದೊಳಗಿನ ಯುವಕ/ಯುವತಿಯರು ಸ್ಪರ್ಧೆಗಳಲ್ಲಿ ಭಾಗವಹಿಸಬಹುದಾಗಿದೆ. ಆಸಕ್ತರು ಅ. 14ರ ಸಂಜೆ 5.30ರೊಳಗೆ ತಮ್ಮ ಹೆಸರುಗಳನ್ನು ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಬೆಂಗಳೂರು ದಕ್ಷಿಣ ಜಿಲ್ಲೆ ಈ ಕಚೇರಿಯಲ್ಲಿ ನೋಂದಾಯಿಸಿಕೊಳ್ಳಬೇಕು. ಯುವಕ/ಯುವತಿಯರು ಆಧಾರ್ ಕಾರ್ಡ್ ಜೆರಾಕ್ಸ್ ಮತ್ತು ಬ್ಯಾಂಕ್ ಖಾತೆ ವರದಿಯ ಜೆರಾಕ್ಸ್ ಪ್ರತಿ ಸಲ್ಲಿಸುವುದು ಕಡ್ಡಾಯವಾಗಿರುತ್ತದೆ.</p>.<p>ಹೆಚ್ಚಿನ ಮಾಹಿತಿಗೆ ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಇವರನ್ನು ಖುದ್ದಾಗಿ ಅಥವಾ ಕಚೇರಿ ಅಧೀಕ್ಷಕರು, ದೂ. ಸಂಖ್ಯೆ: 7338149456, 9448153308 ಸಂಪರ್ಕಿಸಬೇಕು ಎಂದು ಪ್ರಕಟಣೆ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>