<p><strong>ರಾಮನಗರ:</strong> ‘ದೇಶಕ್ಕೆ ಉತ್ತಮ ಭವಿಷ್ಯ ನಿರ್ಮಿಸುವ ನಿಟ್ಟಿನಲ್ಲಿ ಶೈಕ್ಷಣಿಕ ವ್ಯವಸ್ಥೆ ಪ್ರಮುಖ ಪಾತ್ರ ವಹಿಸುತ್ತದೆ’ ಎಂದು ಜಿಲ್ಲಾ ಕಾಂಗ್ರೆಸ್ ಸಮಿತಿಯ ಉಪಾಧ್ಯಕ್ಷ ಎಲ್.ಚಂದ್ರಶೇಖರ್ ಹೇಳಿದರು.<br /> <br /> ನಗರದ ಗೌಸಿಯಾ ಎಂಜಿನಿಯರಿಂಗ್ ಕಾಲೇಜಿನಲ್ಲಿ ಎನ್ಎಸ್ಯುಐ ವತಿಯಿಂದ ಹಮ್ಮಿಕೊಂಡಿದ್ದ ಆರ್ಟಿಇ ಜಾಗೃತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.<br /> <br /> ‘ಜಾಗತೀಕ ಪ್ರಪಂಚದಲ್ಲಿ ದೇಶ ತನ್ನದೇ ಆದ ಸ್ಥಾನ ಪಡೆದುಕೊಳ್ಳಬೇಕಾದರೆ ಹಲವು ಸಾಧನೆ ಮಾಡಬೇಕು. ಆದರೆ ಅದರಲ್ಲಿ ವಿದ್ಯಾರ್ಥಿಗಳ ಪಾತ್ರವೂ ಮಹತ್ವದಾಗಿದೆ. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ಗುಣಾತ್ಮಕ ಶಿಕ್ಷಣ ಪಡೆದುಕೊಂಡು ದೇಶದ ಅಭಿವೃದ್ಧಿಗೆ ಸಹಕರಿಸಬೇಕು’ ಎಂದರು.<br /> <br /> ನಿವೃತ್ತ ವಕೀಲ ತಿಮ್ಮೇಗೌಡ ಮಾತನಾಡಿ, ‘ಎಲ್ಲಾ ವರ್ಗದ ಮಕ್ಕಳಿಗೂ ಗುಣಮಟ್ಟದ ಮತ್ತು ಉಚಿತ ಶಿಕ್ಷಣ ನೀಡಬೇಕೆಂಬ ಉದ್ದೇಶದಿಂದ ಕೇಂದ್ರ ಸರ್ಕಾರ ಆರ್ಟಿಇ ಕಾಯ್ದೆ ತಂದಿದೆ. ಇದರ ಸದುಪಯೋಗ ಆಗಬೇಕು. ಅನರ್ಹರು ಈ ಯೋಜನೆಯನ್ನು ಕಬಳಿಸಲು ಬರಬಾರದು’ ಎಂದು ಮನವಿ ಮಾಡಿದರು.<br /> <br /> ಎನ್ಎಸ್ಯುಐ ಜಿಲ್ಲಾಧ್ಯಕ್ಷ ಅನಿಲ್ ಜೋಗಿಂದರ್ ಮಾತನಾಡಿ, ‘ಕೆಲವು ವಿದ್ಯಾಸಂಸ್ಥೆಗಳು ಅರ್ಹರಿಗೆ ನೀಡಬೇಕಿರುವ ಸೀಟನ್ನು ಶ್ರೀಮಂತರಿಗೆ ನೀಡುತ್ತಿರುವುದು ಬೆಳಕಿಗೆ ಬಂದಿದೆ. ಹಾಗಾಗಿಯೇ ರಾಜ್ಯದಾದ್ಯಂತ ಸಾರ್ವಜನಿಕರಿಗೆ ಅರಿವು ಮೂಡಿಸಲು ಆಂದೋಲನ ನಡೆಸಲಾಗುತ್ತಿದೆ’ ಎಂದರು.<br /> <br /> ಈ ವೇಳೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಿ.ಎನ್.ಆರ್.ವೆಂಕಟೇಶ್, ಎನ್ಎಸ್ಯುಐ ಜಿಲ್ಲಾ ಕಾರ್ಯದರ್ಶಿ ಗುರುಪ್ರಸಾದ್, ರಾಜ್ಯ ಕಾರ್ಯದರ್ಶಿ ಶಶಿಕುಮಾರ್, ಲೋಕಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಕಾರ್ಯದರ್ಶಿ ನೇತ್ರಕುಮಾರ್, ಪದಾಧಿಕಾರಿಗಳಾದ ಚೇತನ್, ಸಾಗರ್, ಚಂದು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಮನಗರ:</strong> ‘ದೇಶಕ್ಕೆ ಉತ್ತಮ ಭವಿಷ್ಯ ನಿರ್ಮಿಸುವ ನಿಟ್ಟಿನಲ್ಲಿ ಶೈಕ್ಷಣಿಕ ವ್ಯವಸ್ಥೆ ಪ್ರಮುಖ ಪಾತ್ರ ವಹಿಸುತ್ತದೆ’ ಎಂದು ಜಿಲ್ಲಾ ಕಾಂಗ್ರೆಸ್ ಸಮಿತಿಯ ಉಪಾಧ್ಯಕ್ಷ ಎಲ್.ಚಂದ್ರಶೇಖರ್ ಹೇಳಿದರು.<br /> <br /> ನಗರದ ಗೌಸಿಯಾ ಎಂಜಿನಿಯರಿಂಗ್ ಕಾಲೇಜಿನಲ್ಲಿ ಎನ್ಎಸ್ಯುಐ ವತಿಯಿಂದ ಹಮ್ಮಿಕೊಂಡಿದ್ದ ಆರ್ಟಿಇ ಜಾಗೃತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.<br /> <br /> ‘ಜಾಗತೀಕ ಪ್ರಪಂಚದಲ್ಲಿ ದೇಶ ತನ್ನದೇ ಆದ ಸ್ಥಾನ ಪಡೆದುಕೊಳ್ಳಬೇಕಾದರೆ ಹಲವು ಸಾಧನೆ ಮಾಡಬೇಕು. ಆದರೆ ಅದರಲ್ಲಿ ವಿದ್ಯಾರ್ಥಿಗಳ ಪಾತ್ರವೂ ಮಹತ್ವದಾಗಿದೆ. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ಗುಣಾತ್ಮಕ ಶಿಕ್ಷಣ ಪಡೆದುಕೊಂಡು ದೇಶದ ಅಭಿವೃದ್ಧಿಗೆ ಸಹಕರಿಸಬೇಕು’ ಎಂದರು.<br /> <br /> ನಿವೃತ್ತ ವಕೀಲ ತಿಮ್ಮೇಗೌಡ ಮಾತನಾಡಿ, ‘ಎಲ್ಲಾ ವರ್ಗದ ಮಕ್ಕಳಿಗೂ ಗುಣಮಟ್ಟದ ಮತ್ತು ಉಚಿತ ಶಿಕ್ಷಣ ನೀಡಬೇಕೆಂಬ ಉದ್ದೇಶದಿಂದ ಕೇಂದ್ರ ಸರ್ಕಾರ ಆರ್ಟಿಇ ಕಾಯ್ದೆ ತಂದಿದೆ. ಇದರ ಸದುಪಯೋಗ ಆಗಬೇಕು. ಅನರ್ಹರು ಈ ಯೋಜನೆಯನ್ನು ಕಬಳಿಸಲು ಬರಬಾರದು’ ಎಂದು ಮನವಿ ಮಾಡಿದರು.<br /> <br /> ಎನ್ಎಸ್ಯುಐ ಜಿಲ್ಲಾಧ್ಯಕ್ಷ ಅನಿಲ್ ಜೋಗಿಂದರ್ ಮಾತನಾಡಿ, ‘ಕೆಲವು ವಿದ್ಯಾಸಂಸ್ಥೆಗಳು ಅರ್ಹರಿಗೆ ನೀಡಬೇಕಿರುವ ಸೀಟನ್ನು ಶ್ರೀಮಂತರಿಗೆ ನೀಡುತ್ತಿರುವುದು ಬೆಳಕಿಗೆ ಬಂದಿದೆ. ಹಾಗಾಗಿಯೇ ರಾಜ್ಯದಾದ್ಯಂತ ಸಾರ್ವಜನಿಕರಿಗೆ ಅರಿವು ಮೂಡಿಸಲು ಆಂದೋಲನ ನಡೆಸಲಾಗುತ್ತಿದೆ’ ಎಂದರು.<br /> <br /> ಈ ವೇಳೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಿ.ಎನ್.ಆರ್.ವೆಂಕಟೇಶ್, ಎನ್ಎಸ್ಯುಐ ಜಿಲ್ಲಾ ಕಾರ್ಯದರ್ಶಿ ಗುರುಪ್ರಸಾದ್, ರಾಜ್ಯ ಕಾರ್ಯದರ್ಶಿ ಶಶಿಕುಮಾರ್, ಲೋಕಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಕಾರ್ಯದರ್ಶಿ ನೇತ್ರಕುಮಾರ್, ಪದಾಧಿಕಾರಿಗಳಾದ ಚೇತನ್, ಸಾಗರ್, ಚಂದು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>