<p><strong>ಕನಕಪುರ</strong>: ತಾಲ್ಲೂಕಿನ ಕಬ್ಬಾಳು ದೇವಸ್ಥಾನ ಬಳಿ ಕಚ್ಚುವನಹಳ್ಳಿ ಕೆರೆ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದ ವಿದ್ಯಾರ್ಥಿ ಧನುಷ್ ಮೃತ ದೇಹವನ್ನು ಮೂರು ದಿನಗಳ ನಂತರ ಶುಕ್ರವಾರ ಹೊರ ತೆಗೆಯಲಾಯಿತು.</p>.<p>ಬೆಂಗಳೂರಿನ ಜೆಎಸ್ಎಸ್ ಕಾಲೇಜಿನ ಒಂಬತ್ತು ವಿದ್ಯಾರ್ಥಿಗಳು ಬುಧವಾರ ಕಬ್ಬಾಳು ದೇವಸ್ಥಾನಕ್ಕೆ ಬಂದು ಪೂಜೆ ಮುಗಿಸಿ ಸಮೀಪದ ಕಚ್ಚುವನಹಳ್ಳಿ ದೊಡ್ಡ ಕೆರೆಯಲ್ಲಿ ಈಜಾಡಲು ಹೋಗಿ ಸಂತೋಷ ಮತ್ತು ಧನುಷ್ ನೀರಿನಲ್ಲಿ ಮುಳುಗಿ ಸಾವನಪ್ಪಿದ್ದರು.</p>.<p>ಪೊಲೀಸರು ಮತ್ತು ಅಗ್ನಿಶಾಮಕ ದಳ ಮೃತ ದೇಹಗಳನ್ನು ಹೊರತೆಗೆಯುವ ಪ್ರಯತ್ನವನ್ನು ಬುಧವಾರ ರಾತ್ರಿವರೆಗೂ ನಡೆಸಿ ಸಿಗದಿದ್ದಾಗ ಗುರುವಾರ ಹುಡುಕಾಟ ನಡೆಸಿದ್ದರು. ಸಂತೋಷ್ ಮೃತ ದೇಹ ಗುರುವಾರ ಪತ್ತೆಯಾಗಿತ್ತು.</p>.<p>ಧನುಷ್ ಮೃತ ದೇಹಕ್ಕಾಗಿ ಗುರುವಾರ ರಾತ್ರಿವರೆಗೂ ಹುಡುಕಾಟ ನಡೆಸಿ ಸಿಗದಿದ್ದಾಗ ಹುಡುಕಾಟ ನಿಲ್ಲಿಸಿದ್ದರು. ಶುಕ್ರವಾರ ಬೆಳಗ್ಗೆ ನುರಿತ ಈಜುಗಾರರು ಹಾಗೂ ಕ್ಯಾಮೆರಾ ಮೂಲಕ ನೀರಿನಲ್ಲಿ ಶವ ಪತ್ತೆ ಹಚ್ಚುವ ತಂತ್ರಜ್ಞರ ತಂಡ ಕಾರ್ಯಾಚರಣೆ ನಡೆಸಿತ್ತು.</p>.<p>ನುರಿತ ಈಜುಗಾರ ಈಶ್ವರ್ ಮಲ್ಪೆ ನೀರಿನ ಆಳಕ್ಕೆ ಇಳಿದು ಹುಡುಕಾಡಿದಾಗ ಧನುಷ್ ಶವ ಕೆಸರಿನಲ್ಲಿ ಸಿಲುಕಿಕೊಂಡಿತ್ತು. </p>.<p>ಪೊಲೀಸರು ಯುಡಿಆರ್ ಪ್ರಕರಣ ದಾಖಲಿಸಿಕೊಂಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕನಕಪುರ</strong>: ತಾಲ್ಲೂಕಿನ ಕಬ್ಬಾಳು ದೇವಸ್ಥಾನ ಬಳಿ ಕಚ್ಚುವನಹಳ್ಳಿ ಕೆರೆ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದ ವಿದ್ಯಾರ್ಥಿ ಧನುಷ್ ಮೃತ ದೇಹವನ್ನು ಮೂರು ದಿನಗಳ ನಂತರ ಶುಕ್ರವಾರ ಹೊರ ತೆಗೆಯಲಾಯಿತು.</p>.<p>ಬೆಂಗಳೂರಿನ ಜೆಎಸ್ಎಸ್ ಕಾಲೇಜಿನ ಒಂಬತ್ತು ವಿದ್ಯಾರ್ಥಿಗಳು ಬುಧವಾರ ಕಬ್ಬಾಳು ದೇವಸ್ಥಾನಕ್ಕೆ ಬಂದು ಪೂಜೆ ಮುಗಿಸಿ ಸಮೀಪದ ಕಚ್ಚುವನಹಳ್ಳಿ ದೊಡ್ಡ ಕೆರೆಯಲ್ಲಿ ಈಜಾಡಲು ಹೋಗಿ ಸಂತೋಷ ಮತ್ತು ಧನುಷ್ ನೀರಿನಲ್ಲಿ ಮುಳುಗಿ ಸಾವನಪ್ಪಿದ್ದರು.</p>.<p>ಪೊಲೀಸರು ಮತ್ತು ಅಗ್ನಿಶಾಮಕ ದಳ ಮೃತ ದೇಹಗಳನ್ನು ಹೊರತೆಗೆಯುವ ಪ್ರಯತ್ನವನ್ನು ಬುಧವಾರ ರಾತ್ರಿವರೆಗೂ ನಡೆಸಿ ಸಿಗದಿದ್ದಾಗ ಗುರುವಾರ ಹುಡುಕಾಟ ನಡೆಸಿದ್ದರು. ಸಂತೋಷ್ ಮೃತ ದೇಹ ಗುರುವಾರ ಪತ್ತೆಯಾಗಿತ್ತು.</p>.<p>ಧನುಷ್ ಮೃತ ದೇಹಕ್ಕಾಗಿ ಗುರುವಾರ ರಾತ್ರಿವರೆಗೂ ಹುಡುಕಾಟ ನಡೆಸಿ ಸಿಗದಿದ್ದಾಗ ಹುಡುಕಾಟ ನಿಲ್ಲಿಸಿದ್ದರು. ಶುಕ್ರವಾರ ಬೆಳಗ್ಗೆ ನುರಿತ ಈಜುಗಾರರು ಹಾಗೂ ಕ್ಯಾಮೆರಾ ಮೂಲಕ ನೀರಿನಲ್ಲಿ ಶವ ಪತ್ತೆ ಹಚ್ಚುವ ತಂತ್ರಜ್ಞರ ತಂಡ ಕಾರ್ಯಾಚರಣೆ ನಡೆಸಿತ್ತು.</p>.<p>ನುರಿತ ಈಜುಗಾರ ಈಶ್ವರ್ ಮಲ್ಪೆ ನೀರಿನ ಆಳಕ್ಕೆ ಇಳಿದು ಹುಡುಕಾಡಿದಾಗ ಧನುಷ್ ಶವ ಕೆಸರಿನಲ್ಲಿ ಸಿಲುಕಿಕೊಂಡಿತ್ತು. </p>.<p>ಪೊಲೀಸರು ಯುಡಿಆರ್ ಪ್ರಕರಣ ದಾಖಲಿಸಿಕೊಂಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>