<p><strong>ರಾಮನಗರ :</strong> ಜಿಲ್ಲೆಯಾದ್ಯಂತ ಕುಡಿಯುವ ನೀರಿನ ಸಮಸ್ಯೆ ತಲೆದೋರದಂತೆ ಎಚ್ಚರ ವಹಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಸನಾ ಉಲ್ಲಾ ಅಧಿಕಾರಿಗಳಿಗೆ ಸೂಚಿಸಿದರು. <br /> <br /> ನಗರಸಭೆ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ವಿದ್ಯುತ್ ಕಡಿತದಿಂದ ಚನ್ನಪಟ್ಟಣಕ್ಕೆ ಕುಡಿಯುವ ನೀರಿನ ಪೂರೈಕೆಯಲ್ಲಿ ಸಮಸ್ಯೆ ಉಂಟಾಗಿದೆ. <br /> <br /> ಬೆಸ್ಕಾಂ ಅಧಿಕಾರಿಗಳು ನೀರು ಪೂರೈಕೆಗೆ ಸಮಸ್ಯೆಯಾಗದಂತೆ ವಿದ್ಯುತ್ ಪೂರೈಕೆ ಮಾಡಬೇಕು ಎಂದು ತಾಕೀತು ಮಾಡಿದರು. ಮುಂಬರುವ ದಿನಗಳಲ್ಲಿ ರಾಮನಗರ, ಮಾಗಡಿ, ಕನಕಪುರ ತಾಲ್ಲೂಕುಗಳಲ್ಲಿಯೂ ಕುಡಿಯುವ ನೀರು ಸರಬರಾಜಿಗೆ ತೊಂದರೆಯಾಗದಂತೆ ಎಚ್ಚರ ವಹಿಸಬೇಕು ಎಂದು ಅಧಿಕಾರಿಗಳಿಗೆ ತಿಳಿಸಿದರು. <br /> <br /> ವಿದ್ಯಾರ್ಥಿ ನಿಲಯಗಳಲ್ಲಿ ಶೇ. 100ರಷ್ಟು ದಾಖಲಾತಿ ಇರುವಂತೆ ಸಂಬಂಧಪಟ್ಟ ಅಧಿಕಾರಿಗಳು ನೋಡಿಕೊಳ್ಳಬೇಕು. ಶಿಕ್ಷಕರಿಗೆ ಸಮಯಕ್ಕೆ ಸರಿಯಾಗಿ ವೇತನ ಪಾವತಿಸಬೇಕು.<br /> <br /> ಗ್ರಾಮಾಂತರ ಪ್ರದೇಶಗಳಲ್ಲಿ ಹಾಳಾಗಿರುವ ರಸ್ತೆಗಳನ್ನು ಶೀಘ್ರವಾಗಿ ದುರಸ್ತಿಪಡಿಸಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಜಿಲ್ಲಾ ಆಸ್ಪತ್ರೆಯಲ್ಲಿ ಹೈಟೆಕ್ ಸೌಲಭ್ಯವುಳ್ಳ ರಕ್ತ ಪರೀಕ್ಷಾ ಕೇಂದ್ರವಿದೆ. <br /> <br /> ಡಯಾಲಿಸಿಸ್ ಕೇಂದ್ರ ಕಾರ್ಯನಿರ್ವಹಿಸುತ್ತಿದೆ. ಕಡಿಮೆ ವೆಚ್ಚದಲ್ಲಿ ಈ ಸೌಲಭ್ಯಗಳನ್ನು ನೀಡುತ್ತಿರುವುದರಿಂದ ಜಿಲ್ಲೆಯ ಸಾರ್ವಜನಿಕರು ಹಾಗೂ ಸರ್ಕಾರಿ ನೌಕರರು ಈ ಯೋಜನೆಗಳ ಸದುಪಯೋಗ ಪಡಿಸಿಕೊಳ್ಳಬೇಕು ಎಂದರು. <br /> <br /> ಜಿಲ್ಲಾಧಿಕಾರಿ ಎಸ್.ಪುಟ್ಟಸ್ವಾಮಿ, ಹೆಚ್ಚುವರಿ ಜಿಲ್ಲಾಧಿಕಾರಿ ಎಂ.ಸಿ.ಅರ್ಚನಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಸ್.ಬಿ.ಬಿಸನಳ್ಳಿ, ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಎಸ್.ವೆಂಕಟೇಶಪ್ಪ, ಸಿ.ಪಿ.ಒ. ಬಸವರಾಜು, ಅರಣ್ಯ ಉಪಸಂರಕ್ಷಣಾಧಿಕಾರಿ ಗೀತಾಂಜಲಿ, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಪ್ರಹ್ಲಾದ್ಗೌಡ ಹಾಗು ಜಿಲ್ಲಾ ಮಟ್ಟದ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು. <br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಮನಗರ :</strong> ಜಿಲ್ಲೆಯಾದ್ಯಂತ ಕುಡಿಯುವ ನೀರಿನ ಸಮಸ್ಯೆ ತಲೆದೋರದಂತೆ ಎಚ್ಚರ ವಹಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಸನಾ ಉಲ್ಲಾ ಅಧಿಕಾರಿಗಳಿಗೆ ಸೂಚಿಸಿದರು. <br /> <br /> ನಗರಸಭೆ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ವಿದ್ಯುತ್ ಕಡಿತದಿಂದ ಚನ್ನಪಟ್ಟಣಕ್ಕೆ ಕುಡಿಯುವ ನೀರಿನ ಪೂರೈಕೆಯಲ್ಲಿ ಸಮಸ್ಯೆ ಉಂಟಾಗಿದೆ. <br /> <br /> ಬೆಸ್ಕಾಂ ಅಧಿಕಾರಿಗಳು ನೀರು ಪೂರೈಕೆಗೆ ಸಮಸ್ಯೆಯಾಗದಂತೆ ವಿದ್ಯುತ್ ಪೂರೈಕೆ ಮಾಡಬೇಕು ಎಂದು ತಾಕೀತು ಮಾಡಿದರು. ಮುಂಬರುವ ದಿನಗಳಲ್ಲಿ ರಾಮನಗರ, ಮಾಗಡಿ, ಕನಕಪುರ ತಾಲ್ಲೂಕುಗಳಲ್ಲಿಯೂ ಕುಡಿಯುವ ನೀರು ಸರಬರಾಜಿಗೆ ತೊಂದರೆಯಾಗದಂತೆ ಎಚ್ಚರ ವಹಿಸಬೇಕು ಎಂದು ಅಧಿಕಾರಿಗಳಿಗೆ ತಿಳಿಸಿದರು. <br /> <br /> ವಿದ್ಯಾರ್ಥಿ ನಿಲಯಗಳಲ್ಲಿ ಶೇ. 100ರಷ್ಟು ದಾಖಲಾತಿ ಇರುವಂತೆ ಸಂಬಂಧಪಟ್ಟ ಅಧಿಕಾರಿಗಳು ನೋಡಿಕೊಳ್ಳಬೇಕು. ಶಿಕ್ಷಕರಿಗೆ ಸಮಯಕ್ಕೆ ಸರಿಯಾಗಿ ವೇತನ ಪಾವತಿಸಬೇಕು.<br /> <br /> ಗ್ರಾಮಾಂತರ ಪ್ರದೇಶಗಳಲ್ಲಿ ಹಾಳಾಗಿರುವ ರಸ್ತೆಗಳನ್ನು ಶೀಘ್ರವಾಗಿ ದುರಸ್ತಿಪಡಿಸಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಜಿಲ್ಲಾ ಆಸ್ಪತ್ರೆಯಲ್ಲಿ ಹೈಟೆಕ್ ಸೌಲಭ್ಯವುಳ್ಳ ರಕ್ತ ಪರೀಕ್ಷಾ ಕೇಂದ್ರವಿದೆ. <br /> <br /> ಡಯಾಲಿಸಿಸ್ ಕೇಂದ್ರ ಕಾರ್ಯನಿರ್ವಹಿಸುತ್ತಿದೆ. ಕಡಿಮೆ ವೆಚ್ಚದಲ್ಲಿ ಈ ಸೌಲಭ್ಯಗಳನ್ನು ನೀಡುತ್ತಿರುವುದರಿಂದ ಜಿಲ್ಲೆಯ ಸಾರ್ವಜನಿಕರು ಹಾಗೂ ಸರ್ಕಾರಿ ನೌಕರರು ಈ ಯೋಜನೆಗಳ ಸದುಪಯೋಗ ಪಡಿಸಿಕೊಳ್ಳಬೇಕು ಎಂದರು. <br /> <br /> ಜಿಲ್ಲಾಧಿಕಾರಿ ಎಸ್.ಪುಟ್ಟಸ್ವಾಮಿ, ಹೆಚ್ಚುವರಿ ಜಿಲ್ಲಾಧಿಕಾರಿ ಎಂ.ಸಿ.ಅರ್ಚನಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಸ್.ಬಿ.ಬಿಸನಳ್ಳಿ, ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಎಸ್.ವೆಂಕಟೇಶಪ್ಪ, ಸಿ.ಪಿ.ಒ. ಬಸವರಾಜು, ಅರಣ್ಯ ಉಪಸಂರಕ್ಷಣಾಧಿಕಾರಿ ಗೀತಾಂಜಲಿ, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಪ್ರಹ್ಲಾದ್ಗೌಡ ಹಾಗು ಜಿಲ್ಲಾ ಮಟ್ಟದ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು. <br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>