ಅದರಂತೆ ಅಧಿಕಾರಿಗಳು ದೂರು ದಾರರು, ಗ್ರಾಮದ ಮುಖಂಡರು, ಜಮೀನಿನ ಮಾಲೀಕರು, ಕಾಮಗಾರಿ ನಿರ್ಮಿಸಿದವರ ಸಮ್ಮುಖದಲ್ಲಿ ಕಾಮಗಾರಿ ನಿರ್ಮಾಣದ ಅಳತೆ ಮತ್ತು ಗುಣಮಟ್ಟದ ಬಗ್ಗೆ ಪರಿಶೀಲನೆ ನಡೆಸಿ ವರದಿ ಪಡೆದುಕೊಂಡರು. ಗುಣಮಟ್ಟದ ಬಗ್ಗೆ ಸವಿವರ ವರದಿ ಸಿದ್ಧಪಡಿಸಿ ಮುಂದಿನ ಕ್ರಮಕ್ಕಾಗಿ ಇಲಾಖೆಗೆ ಕಳಿಸಿಕೊಡುವುದಾಗಿ ತಿಳಿಸಿದ್ದಾರೆ. ದೂರುದಾರರಾದ ಆರ್ಟಿಐ ಕಾರ್ಯಕರ್ತ ಕೆ.ರವಿಕುಮಾರ್, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಹಾಗೂ ಗ್ರಾಮದ ಮುಖಂಡರು ಉಪಸ್ಥಿತರಿದ್ದರು.