<p><strong>ಚನ್ನಪಟ್ಟಣ: </strong>ಬೆಂಗಳೂರು ಹಾಲು ಒಕ್ಕೂಟವು ಹೈನುಗಾರಿಕೆಯಲ್ಲಿ ತೊಡಗಿರುವವರ ಮಕ್ಕಳ ವಿದ್ಯಾಭ್ಯಾಸಕ್ಕೆಂದು 2175 ವಿದ್ಯಾರ್ಥಿಗಳಿಗೆ 26.10 ಲಕ್ಷ ರೂ. ವಿದಾರ್ಥಿ ವೇತನ ನೀಡಲಿದೆ ಎಂದು ಬಮೂಲ್ ನಿರ್ದೇಶಕ ಎಸ್.ಲಿಂಗೇಶ್ಕುಮಾರ್ ತಿಳಿಸಿದರು.<br /> <br /> ತಾಲ್ಲೂಕಿನ ಬಮೂಲ್ ಕಚೇರಿಯಲ್ಲಿ ನಡೆದ ಜನಶ್ರೀ ಭಿಮಾ ವಿಮಾ ಯೋಜನೆಯಡಿ ವಿದ್ಯಾರ್ಥಿ ವೇತನ ಮಂಜೂರಾತಿ ಕಾರ್ಯಕ್ಕೆ ಚಾಲನೆ ನೀಡಿ ಮಾತನಾಡಿದ ಅವರು ಈ ಯೋಜನೆಯ ಮೂಲಕ ಪ್ರತಿಯೊಬ್ಬ ವಿದ್ಯಾರ್ಥಿಗೂ 1200 ರೂ. ವಿದ್ಯಾರ್ಥಿ ವೇತನ ದೊರೆಯಲಿದೆ ಎಂದರು.<br /> <br /> ಹಾಲು ಉತ್ಪಾದನೆಯೇ ಜೀವನಾಧಾರವಾಗಿರುವ ತಾಲ್ಲೂಕಿನ 14,500 ಮಂದಿಯನ್ನು ಜನಶ್ರೀ ಭಿಮಾ ಯೋಜನೆಯಡಿ ಗುಂಪು ವಿಮಾ ಯೋಜನೆಗೆ ಒಳಪಡಿಸಲಾಗಿದೆ. ಕೇಂದ್ರ ಸರಕಾರದ ಈ ಯೋಜನೆಯನ್ನು ಸಮರ್ಪಕವಾಗಿ ಬಳಕೆ ಮಾಡಿಕೊಂಡಿರುವ ಚನ್ನಪಟ್ಟಣ ತಾಲ್ಲೂಕು ಪ್ರಥಮ ಸ್ಥಾನದಲ್ಲಿದೆ. ಮುಂದಿನ ದಿನಗಳಲ್ಲಿ 50 ಸಾವಿರಕ್ಕೆ ತಲುಪುವ ಗುರಿ ಹೊಂದಿ ಎಂದು ವಿವರಿಸಿದರು.<br /> <br /> ಸದಸ್ಯರ ಮಕ್ಕಳಿಗೆ 9ನೇ ತರಗತಿಯಿಂದ ಪಿಯುಸಿವರೆಗೆ ಹಾಗೂ ಐಟಿಐ ವಿದ್ಯಾರ್ಥಿಗಳಿಗೆ ಪ್ರತಿ ವರ್ಷ ವೇತನ ದೊರೆಯಲಿದೆ. ಈಗಾಗಲೇ 7.50 ಲಕ್ಷ ರೂ. ಬಿಡುಗಡೆ ಮಾಡಿರುವುದಾಗಿ ಹೇಳಿದರು. <br /> <br /> ಯೋಜನೆ ವ್ಯಾಪ್ತಿಗೊಳಪಟ್ಟಿರುವ ಫಲಾನುಭವಿಗಳು ಹಾಲು ಉತ್ಪಾದಕ ಸಹಕಾರ ಸಂಘಗಳ ಕಾರ್ಯದರ್ಶಿ ಮೂಲಕ ಅರ್ಜಿ ಸಲ್ಲಿಸಿ ವಿದ್ಯಾರ್ಥಿ ವೇತನ ಪಡೆಯಬಹುದು ಎಂದು ಲಿಂಗೇಶ್ಕುಮಾರ್ ಮಾಹಿತಿ ನೀಡಿದರು.<br /> <br /> ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಕಲ್ಪನಾ ಮಲ್ಲಿಕಾರ್ಜುನಗೌಡ, ಸದಸ್ಯರಾದ ರಘು ಕುಮಾರ್,ನಾಗೇಶ್ವರಿ, ರಮೇಶ್, ನಗರ ಸಭಾಸದಸ್ಯರುಗಳಾದ ವಾಸೀಲ್ ಆಲಿಖಾನ್, ರಾಜು, ಜೆಡಿಎಸ್ ಮುಖಂಡ ಫರೀದ್ ಖಾನ್ ಘೋರಿ, ಶಿಬಿರದ ಉಪ ವ್ಯವಸ್ಥಾಪಕ ನಾಗರಾಜಯ್ಯ, ಡಾ.ಶ್ರೀಧರ್, ವಿಸ್ತರಣಾಧಿಕಾರಿಗಳಾದ ಶಿವ ಪ್ರಸನ್ನ, ಮಹದೇವೇಗೌಡ ಇತರರು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚನ್ನಪಟ್ಟಣ: </strong>ಬೆಂಗಳೂರು ಹಾಲು ಒಕ್ಕೂಟವು ಹೈನುಗಾರಿಕೆಯಲ್ಲಿ ತೊಡಗಿರುವವರ ಮಕ್ಕಳ ವಿದ್ಯಾಭ್ಯಾಸಕ್ಕೆಂದು 2175 ವಿದ್ಯಾರ್ಥಿಗಳಿಗೆ 26.10 ಲಕ್ಷ ರೂ. ವಿದಾರ್ಥಿ ವೇತನ ನೀಡಲಿದೆ ಎಂದು ಬಮೂಲ್ ನಿರ್ದೇಶಕ ಎಸ್.ಲಿಂಗೇಶ್ಕುಮಾರ್ ತಿಳಿಸಿದರು.<br /> <br /> ತಾಲ್ಲೂಕಿನ ಬಮೂಲ್ ಕಚೇರಿಯಲ್ಲಿ ನಡೆದ ಜನಶ್ರೀ ಭಿಮಾ ವಿಮಾ ಯೋಜನೆಯಡಿ ವಿದ್ಯಾರ್ಥಿ ವೇತನ ಮಂಜೂರಾತಿ ಕಾರ್ಯಕ್ಕೆ ಚಾಲನೆ ನೀಡಿ ಮಾತನಾಡಿದ ಅವರು ಈ ಯೋಜನೆಯ ಮೂಲಕ ಪ್ರತಿಯೊಬ್ಬ ವಿದ್ಯಾರ್ಥಿಗೂ 1200 ರೂ. ವಿದ್ಯಾರ್ಥಿ ವೇತನ ದೊರೆಯಲಿದೆ ಎಂದರು.<br /> <br /> ಹಾಲು ಉತ್ಪಾದನೆಯೇ ಜೀವನಾಧಾರವಾಗಿರುವ ತಾಲ್ಲೂಕಿನ 14,500 ಮಂದಿಯನ್ನು ಜನಶ್ರೀ ಭಿಮಾ ಯೋಜನೆಯಡಿ ಗುಂಪು ವಿಮಾ ಯೋಜನೆಗೆ ಒಳಪಡಿಸಲಾಗಿದೆ. ಕೇಂದ್ರ ಸರಕಾರದ ಈ ಯೋಜನೆಯನ್ನು ಸಮರ್ಪಕವಾಗಿ ಬಳಕೆ ಮಾಡಿಕೊಂಡಿರುವ ಚನ್ನಪಟ್ಟಣ ತಾಲ್ಲೂಕು ಪ್ರಥಮ ಸ್ಥಾನದಲ್ಲಿದೆ. ಮುಂದಿನ ದಿನಗಳಲ್ಲಿ 50 ಸಾವಿರಕ್ಕೆ ತಲುಪುವ ಗುರಿ ಹೊಂದಿ ಎಂದು ವಿವರಿಸಿದರು.<br /> <br /> ಸದಸ್ಯರ ಮಕ್ಕಳಿಗೆ 9ನೇ ತರಗತಿಯಿಂದ ಪಿಯುಸಿವರೆಗೆ ಹಾಗೂ ಐಟಿಐ ವಿದ್ಯಾರ್ಥಿಗಳಿಗೆ ಪ್ರತಿ ವರ್ಷ ವೇತನ ದೊರೆಯಲಿದೆ. ಈಗಾಗಲೇ 7.50 ಲಕ್ಷ ರೂ. ಬಿಡುಗಡೆ ಮಾಡಿರುವುದಾಗಿ ಹೇಳಿದರು. <br /> <br /> ಯೋಜನೆ ವ್ಯಾಪ್ತಿಗೊಳಪಟ್ಟಿರುವ ಫಲಾನುಭವಿಗಳು ಹಾಲು ಉತ್ಪಾದಕ ಸಹಕಾರ ಸಂಘಗಳ ಕಾರ್ಯದರ್ಶಿ ಮೂಲಕ ಅರ್ಜಿ ಸಲ್ಲಿಸಿ ವಿದ್ಯಾರ್ಥಿ ವೇತನ ಪಡೆಯಬಹುದು ಎಂದು ಲಿಂಗೇಶ್ಕುಮಾರ್ ಮಾಹಿತಿ ನೀಡಿದರು.<br /> <br /> ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಕಲ್ಪನಾ ಮಲ್ಲಿಕಾರ್ಜುನಗೌಡ, ಸದಸ್ಯರಾದ ರಘು ಕುಮಾರ್,ನಾಗೇಶ್ವರಿ, ರಮೇಶ್, ನಗರ ಸಭಾಸದಸ್ಯರುಗಳಾದ ವಾಸೀಲ್ ಆಲಿಖಾನ್, ರಾಜು, ಜೆಡಿಎಸ್ ಮುಖಂಡ ಫರೀದ್ ಖಾನ್ ಘೋರಿ, ಶಿಬಿರದ ಉಪ ವ್ಯವಸ್ಥಾಪಕ ನಾಗರಾಜಯ್ಯ, ಡಾ.ಶ್ರೀಧರ್, ವಿಸ್ತರಣಾಧಿಕಾರಿಗಳಾದ ಶಿವ ಪ್ರಸನ್ನ, ಮಹದೇವೇಗೌಡ ಇತರರು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>