ಆರ್ಥಿಕವಾಗಿ ಹಿಂದುಳಿದಿರುವ ಜನರು ಚಿಕಿತ್ಸಾ ಶಿಬಿರದಲ್ಲಿ ಚಿಕಿತ್ಸೆ ಪಡೆಯುವಂತಾಗಬೇಕು. ಕೂಲಿ ಕಾರ್ಮಿಕರು, ಬಡಜನರು, ಗ್ರಾಮೀಣ ಪ್ರದೇಶದ ಜನರು ಹಲವು ಕಣ್ಣಿನ ಸಮಸ್ಯೆಗಳಿಂದ ಬಳಲುತ್ತಿದ್ದಾರೆ. ಕಣ್ಣಿನ ಶಸ್ತ್ರಚಿಕಿತ್ಸೆ ಮಾಡಿಸಲು ಸುಮಾರು ₹10 ಸಾವಿರದಿಂದ 15 ಸಾವಿರ ವೆಚ್ಚವಾಗುತ್ತಿದೆ. ಆಸ್ಪತ್ರೆಯಲ್ಲಿ ದುಬಾರಿ ವೆಚ್ಚ ಮಾಡಲು ಕಷ್ಟವಾಗಿದ್ದು, ಇಂತಹ ಆರೋಗ್ಯ ಶಿಬಿರಗಳ ಪ್ರಯೋಜನವನ್ನು ಪಡೆದು ಆರೋಗ್ಯ ಸುಧಾರಿಸಿಕೊಳ್ಳಬೇಕು ಎಂದರು.