<p>ಚನ್ನಪಟ್ಟಣ: ಪೊಲೀಸರು ತಮ್ಮ ಜೀವದ ಹಂಗು ತೊರೆದು ಕರ್ತವ್ಯ ನಿರ್ವಹಿಸಿ ಸಾರ್ವಜನಿಕ ಆಸ್ತಿ-ಪಾಸ್ತಿ ರಕ್ಷಣೆಯಲ್ಲಿ ತೊಡಗಿದ್ದರೂ ಸಹ ಸಾರ್ವಜನಿಕರಿಂದ ಉತ್ತಮ ಸ್ಪಂದನೆ ದೊರೆಯುತ್ತಿಲ್ಲ ಎಂದು ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಎನ್. ರುದ್ರಮುನಿ ವಿಷಾದಿಸಿದರು.<br /> <br /> ಪಟ್ಟಣದ ಜಿಲ್ಲಾ ಪೊಲೀಸ್ ಸಶಸ್ತ್ರ ಮೀಸಲು ಪಡೆ ಮೈದಾನದಲ್ಲಿ ನಡೆದ ಪೊಲೀಸ್ ಹುತಾತ್ಮರ ದಿನಾಚರಣೆ ಸಂದರ್ಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಅವರು ಮಾತನಾಡಿದರು.<br /> <br /> ವಿಶೇಷ ಆಹ್ವಾನಿತರಾಗಿ ಆಗಮಿಸಿದ್ದ ರಾಮನಗರ ಜಿಲ್ಲಾಧಿಕಾರಿ ಎಸ್. ಪುಟ್ಟಸ್ವಾಮಿ ಮಾತನಾಡಿ, ಸಮಾಜದಲ್ಲಿ ಹೆಚ್ಚಾಗುತ್ತಿರುವ ಸಮಾಜ ಘಾತುಕ ಕೆಲಸಗಳನ್ನು ತಡೆಯಲು ಪೊಲೀಸರ ಸಹಕಾರ ಅತ್ಯಗತ್ಯ, ಸಾರ್ವಜನಿಕರೂ ಸಹ ಅಪರಾಧ ಕೃತ್ಯಗಳ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿ ಸಹಕರಿಸಬೇಕು ಎಂದರು.<br /> ಆರೊಗ್ಯಕರ ಸಮಾಜಕ್ಕೆ ಪೊಲೀಸ್ ಇಲಾಖೆಯ ಕೊಡುಗೆ ಅಪಾರವಾಗಿದ್ದು, ಸಾರ್ವಜನಿಕರು ಪೊಲೀಸರ ಬಗ್ಗೆ ಗೌರವ ಬೆಳೆಸಿಕೊಳ್ಳಬೇಕು ಎಂದರು. <br /> <br /> ಹುತಾತ್ಮರಾದ ಪೊಲೀಸ್ ಸಮಾಧಿಗೆ ಜಿಲ್ಲಾಧಿಕಾರಿ ಪುಟ್ಟಸ್ವಾಮಿ, ನ್ಯಾಯಾಧೀಶ ರುದ್ರಮುನಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿಸನಹಳ್ಳಿ, ರಾಮನಗರ ಡಿವೈಎಸ್ಪ್ ರಾಮಕೃಷ್ಣಪ್ಪ, ಚನ್ನಪಟ್ಟಣ ಡಿವೈಎಸ್ಪಿ ಸಿದ್ದಪ್ಪ, ನಗರಸಭೆ ಅಧ್ಯಕ್ಷೆ ರೇಷ್ಮಾಭಾನು, ಪತ್ರಕರ್ತ ಸು.ತ. ರಾಮೇಗೌಡ ಸೇರಿದಂತೆ ಹಲವರು ಪುಷ್ಪಗುಚ್ಚವಿರಿಸಿ ನಮನ ಸಲ್ಲಿಸಿದರು.<br /> <br /> ಹುತಾತ್ಮ ಸ್ಮರಣಾರ್ಥ ಕವಾಯತು, ವಾಲಿಫೈರಿಂಗ್, ಮೌನಾಚರಣೆ ನಡೆಯಿತು. ರಾಮನಗರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿಸನಹಳ್ಳಿ ಈ ವರ್ಷ ಹುತಾತ್ಮರಾದ ಪೊಲೀಸರ ಪಟ್ಟಿಯನ್ನು ಕಾರ್ಯಕ್ರಮದಲ್ಲಿ ಓದಿ ಸ್ಮರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಚನ್ನಪಟ್ಟಣ: ಪೊಲೀಸರು ತಮ್ಮ ಜೀವದ ಹಂಗು ತೊರೆದು ಕರ್ತವ್ಯ ನಿರ್ವಹಿಸಿ ಸಾರ್ವಜನಿಕ ಆಸ್ತಿ-ಪಾಸ್ತಿ ರಕ್ಷಣೆಯಲ್ಲಿ ತೊಡಗಿದ್ದರೂ ಸಹ ಸಾರ್ವಜನಿಕರಿಂದ ಉತ್ತಮ ಸ್ಪಂದನೆ ದೊರೆಯುತ್ತಿಲ್ಲ ಎಂದು ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಎನ್. ರುದ್ರಮುನಿ ವಿಷಾದಿಸಿದರು.<br /> <br /> ಪಟ್ಟಣದ ಜಿಲ್ಲಾ ಪೊಲೀಸ್ ಸಶಸ್ತ್ರ ಮೀಸಲು ಪಡೆ ಮೈದಾನದಲ್ಲಿ ನಡೆದ ಪೊಲೀಸ್ ಹುತಾತ್ಮರ ದಿನಾಚರಣೆ ಸಂದರ್ಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಅವರು ಮಾತನಾಡಿದರು.<br /> <br /> ವಿಶೇಷ ಆಹ್ವಾನಿತರಾಗಿ ಆಗಮಿಸಿದ್ದ ರಾಮನಗರ ಜಿಲ್ಲಾಧಿಕಾರಿ ಎಸ್. ಪುಟ್ಟಸ್ವಾಮಿ ಮಾತನಾಡಿ, ಸಮಾಜದಲ್ಲಿ ಹೆಚ್ಚಾಗುತ್ತಿರುವ ಸಮಾಜ ಘಾತುಕ ಕೆಲಸಗಳನ್ನು ತಡೆಯಲು ಪೊಲೀಸರ ಸಹಕಾರ ಅತ್ಯಗತ್ಯ, ಸಾರ್ವಜನಿಕರೂ ಸಹ ಅಪರಾಧ ಕೃತ್ಯಗಳ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿ ಸಹಕರಿಸಬೇಕು ಎಂದರು.<br /> ಆರೊಗ್ಯಕರ ಸಮಾಜಕ್ಕೆ ಪೊಲೀಸ್ ಇಲಾಖೆಯ ಕೊಡುಗೆ ಅಪಾರವಾಗಿದ್ದು, ಸಾರ್ವಜನಿಕರು ಪೊಲೀಸರ ಬಗ್ಗೆ ಗೌರವ ಬೆಳೆಸಿಕೊಳ್ಳಬೇಕು ಎಂದರು. <br /> <br /> ಹುತಾತ್ಮರಾದ ಪೊಲೀಸ್ ಸಮಾಧಿಗೆ ಜಿಲ್ಲಾಧಿಕಾರಿ ಪುಟ್ಟಸ್ವಾಮಿ, ನ್ಯಾಯಾಧೀಶ ರುದ್ರಮುನಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿಸನಹಳ್ಳಿ, ರಾಮನಗರ ಡಿವೈಎಸ್ಪ್ ರಾಮಕೃಷ್ಣಪ್ಪ, ಚನ್ನಪಟ್ಟಣ ಡಿವೈಎಸ್ಪಿ ಸಿದ್ದಪ್ಪ, ನಗರಸಭೆ ಅಧ್ಯಕ್ಷೆ ರೇಷ್ಮಾಭಾನು, ಪತ್ರಕರ್ತ ಸು.ತ. ರಾಮೇಗೌಡ ಸೇರಿದಂತೆ ಹಲವರು ಪುಷ್ಪಗುಚ್ಚವಿರಿಸಿ ನಮನ ಸಲ್ಲಿಸಿದರು.<br /> <br /> ಹುತಾತ್ಮ ಸ್ಮರಣಾರ್ಥ ಕವಾಯತು, ವಾಲಿಫೈರಿಂಗ್, ಮೌನಾಚರಣೆ ನಡೆಯಿತು. ರಾಮನಗರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿಸನಹಳ್ಳಿ ಈ ವರ್ಷ ಹುತಾತ್ಮರಾದ ಪೊಲೀಸರ ಪಟ್ಟಿಯನ್ನು ಕಾರ್ಯಕ್ರಮದಲ್ಲಿ ಓದಿ ಸ್ಮರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>