‘ಕೆಲವು ಸದಸ್ಯರು ಅಧಿಕಾರಿಗಳು ನಮ್ಮ ಮಾತು ಕೇಳುತ್ತಿಲ್ಲ. ಯಾವುದೇ ಕೆಲಸಕ್ಕೂ ಸ್ಪಂದನೆ ನೀಡುತ್ತಿಲ್ಲ. ನಗರ ಸಭೆಯಲ್ಲಿ ಲಂಚ ತಾಂಡವಾಡುತ್ತಿದೆ ಎಂದು ಆರೋಪಿಸಿದಾಗ, ‘ಎಲ್ಲ ಸಮಸ್ಯೆಗಳನ್ನು ಆಲಿಸಿದ ಸಚಿವರು ಈ ಬಗ್ಗೆ ಕ್ರಮ ವಹಿಸಲಾಗುವುದು, ಅಧಿಕಾ ರಿಗಳು, ಸಿಬ್ಬಂದಿ ಅವ್ಯವಹಾರ ದಲ್ಲಿ ತೊಡಗಿದ್ದ ಬಗ್ಗೆ ತನಿಖೆ ನಡೆಸಿ ಕಾನೂನು ಕ್ರಮ ಕೈಗೊಳ್ಳಲಾಗುವುದು’ ಎಂದು ತಿಳಿಸಿದರು. ನಗರಸಭೆ ಅಧ್ಯಕ್ಷೆ ನಜ್ಮುನ್ನೀಸಾ, ಉಪಾಧ್ಯಕ್ಷೆ ಸರಳ, ಸ್ಥಾಯಿ ಸಮಿತಿ ಅಧ್ಯಕ್ಷ ರಾಮು ಭಾಗವಹಿಸಿದ್ದರು.