<p>ರಾಮನಗರ: ಹಕ್ಕಿಯಂತೆ ಆಕಾಶದಲ್ಲಿ ಹಾರಾಡಬೇಕು, ವಿಮಾನದಲ್ಲಿ ಪ್ರಯಾಣ ಬೆಳೆಸಿ ಅದರ ಆನಂದವನ್ನು ಆಸ್ವಾದಿಸಬೇಕು ಎಂಬ ನೂರಾರು ಕನಸುಗಳನ್ನು ಹೊಂದಿರುವ ಹಳ್ಳಿಗಾಡಿನ ಮಕ್ಕಳಿಗೆ ಆ ಅವಕಾಶ ಗುರುವಾರ ಒದಗಿ ಬಂತು.<br /> <br /> ಕೇಂದ್ರ ಸರ್ಕಾರದ ನೆರವಿನೊಂದಿಗೆ ಮೈಸೂರಿನ ನ್ಯಾಷನಲ್ ಅಡ್ವೆಂಚರ್ ಫೌಂಡೇಷನ್ ಚನ್ನಪಟ್ಟಣದ ಹೊಂಗನೂರಿನ ವಿಶಾಲ ಕೆರೆಯಲ್ಲಿ ಕೋಡಂಬಳ್ಳಿ ಗ್ರಾಮದ ಶಾಲಾ ಮಕ್ಕಳಿಗೆ ಹಾಗೂ ಯುವ ಜನತೆಗೆ ಸಾಹಸ ಕ್ರೀಡೆ ಆಯೋಜಿಸಲಾಗಿತ್ತು. ಪ್ಯಾರಚ್ಯೂಟ್ನಲ್ಲಿ ಹಾರಾಡುವುದು, ಬೈಕ್ ಸವಾರಿ, ಬೆಟ್ಟ-ಗುಡ್ಡ ಹತ್ತಿ, ಕಾಡಿನಲ್ಲಿ ಚಾರಣ ಮಾಡುವ ಕ್ರೀಡೆಗಳು ಅಲ್ಲಿ ನಡೆದವು. ಕೋಡಂಬಳ್ಳಿಯ ಜ್ಯೋತಿ ವಿದ್ಯಾಸಂಸ್ಥೆ ಈ ಕಾರ್ಯಕ್ರಮಕ್ಕೆ ಸಹಕಾರ ನೀಡಿತ್ತು.<br /> <br /> ಇದರ ಪ್ರಯೋಜನ ಪಡೆದ ಹಳ್ಳಿಗಾಡಿನ ಮಕ್ಕಳು ಸ್ವಚ್ಛಂದವಾಗಿ ಆಕಾಶದಲ್ಲಿ ಹಕ್ಕಿಗಳಂತೆ ಪ್ಯಾರಚ್ಯೂಟ್ನಲ್ಲಿ ಹಾರಾಡಿ ಆಕಾಶ ಮುಟ್ಟಿದಷ್ಟೇ ಸಂತಸಗೊಂಡವು. ರಾಮನಗರ ಜಿಲ್ಲೆಯಲ್ಲಿ ಈ ರೀತಿಯ ಸಾಹಸ ಕ್ರೀಡೆಗಳು ನಡೆದದ್ದು ಇದೇ ಮೊದಲು. ಇಲ್ಲಿ ನಡೆದ ವಿವಿಧ ಬಗೆಯ ಕ್ರೀಡೆಗಳಲ್ಲಿ ಮಕ್ಕಳು ಸೇರಿದಂತೆ ಸುಮಾರು 200 ಜನ ಪಾಲ್ಗೊಂಡಿದ್ದರು.<br /> <br /> ಈ ಸಾಹಸ ಕ್ರೀಡೆಗಳ ಕುರಿತು ಪ್ರತಿಕ್ರಿಯಿಸಿದ ನ್ಯಾಷನಲ್ ಅಡ್ವೆಂಚರ್ ಫೌಂಡೇಷನ್ನ ನಿರ್ದೇಶಕಿ ರುಕ್ಮಿಣಿ ಚಂದ್ರನ್, ಗ್ರಾಮ ಮಟ್ಟದಲ್ಲಿ ಸಾಹಸ ಕ್ರೀಡೆಗಳನ್ನು ಆಯೋಜಿಸಿ ಅವರಲ್ಲಿನ ಕ್ರೀಡಾ ಸ್ಪೂರ್ತಿಯನ್ನು ಬಡಿದೆಬ್ಬಿಸುವ ಕೆಲಸವನ್ನು ಪ್ರತಿಷ್ಠಾನ ಮಾಡುತ್ತಿದೆ. ಕೇವಲ ನಗರ ಪ್ರದೇಶದ ಯುವಕ-ಯುವತಿಯರಿಗೆ ಮಾತ್ರ ಸೀಮಿತವಾಗಿರದೆ, ಹಳ್ಳಿ ಯುವ ಜನತೆಯನ್ನು ಸಾಹಸ ಕ್ರೀಡೆಗಳತ್ತ ಆಕರ್ಷಿಸಲು ಯೋಜಿಸಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದರು.<br /> <br /> ಕ್ರೀಡೆಗಳೆಂದರೆ ಬರೀ ಸೋಲು ಗೆಲುವು ಅಷ್ಟೇ ಅಲ್ಲ. ಯುವಕರಿಗೆ, ಸ್ವಯಂ ಕ್ರೀಡೆಗಳಾದ ಸಾಹಸ ಕ್ರೀಡೆಗಳು ತಮ್ಮ ಮನಸ್ಸಿನ ಹಾಗೂ ದೇಹದ ಬೆಳವಣಿಗೆಗೆ ಸಹಕಾರಿಯಾಗುತ್ತಿವೆ ಎಂಬುದನ್ನು ತಿಳಿಸುವುದೇ ಈ ಕಾರ್ಯಕ್ರಮಗಳನ ಉದ್ದೇಶ ಎಂದ ಅವರು ತಿಳಿಸಿದರು. ಖಾಸಗಿಯಾಗಿ ಈ ಸಾಹಸ ಕ್ರೀಡೆಗಳನ್ನು ನಡೆಸಬೇಕಾದರೆ ಒಬ್ಬರಿಗೆ 600 ರೂಪಾಯಿ ಖರ್ಚಾಗುತ್ತದೆ. <br /> <br /> ಆದರೆ ಕೇಂದ್ರ ಸರ್ಕಾರದ ಸಹಯೋಗದೊಂದಿಗೆ ಹಳ್ಳಿಗಳ ಯುವಕರಿಗಾಗಿ ನಾವು ಕೇವಲ 250 ರೂಪಾಯಿಗೆ ಈ ಸಾಹಸ ಕ್ರೀಡೆಗಳನ್ನು ನಡೆಸಿಕೊಡುತ್ತಿದ್ದೇವೆ ಎಂದು ಅವರು ಮಾಹಿತಿ ನೀಡಿದರು. ಸಿಂಗರಾಜಿಪುರದ ಗವಿರಂಗಸ್ವಾಮಿ ಬೆಟ್ಟದಲ್ಲಿ ಸ್ಥಳೀಯ ಯುವಕರ ಜತೆ ಚಾರಣವನ್ನು ಇದೇ ಸಂದರ್ಭದಲ್ಲಿ ಏರ್ಪಡಿಸಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ರಾಮನಗರ: ಹಕ್ಕಿಯಂತೆ ಆಕಾಶದಲ್ಲಿ ಹಾರಾಡಬೇಕು, ವಿಮಾನದಲ್ಲಿ ಪ್ರಯಾಣ ಬೆಳೆಸಿ ಅದರ ಆನಂದವನ್ನು ಆಸ್ವಾದಿಸಬೇಕು ಎಂಬ ನೂರಾರು ಕನಸುಗಳನ್ನು ಹೊಂದಿರುವ ಹಳ್ಳಿಗಾಡಿನ ಮಕ್ಕಳಿಗೆ ಆ ಅವಕಾಶ ಗುರುವಾರ ಒದಗಿ ಬಂತು.<br /> <br /> ಕೇಂದ್ರ ಸರ್ಕಾರದ ನೆರವಿನೊಂದಿಗೆ ಮೈಸೂರಿನ ನ್ಯಾಷನಲ್ ಅಡ್ವೆಂಚರ್ ಫೌಂಡೇಷನ್ ಚನ್ನಪಟ್ಟಣದ ಹೊಂಗನೂರಿನ ವಿಶಾಲ ಕೆರೆಯಲ್ಲಿ ಕೋಡಂಬಳ್ಳಿ ಗ್ರಾಮದ ಶಾಲಾ ಮಕ್ಕಳಿಗೆ ಹಾಗೂ ಯುವ ಜನತೆಗೆ ಸಾಹಸ ಕ್ರೀಡೆ ಆಯೋಜಿಸಲಾಗಿತ್ತು. ಪ್ಯಾರಚ್ಯೂಟ್ನಲ್ಲಿ ಹಾರಾಡುವುದು, ಬೈಕ್ ಸವಾರಿ, ಬೆಟ್ಟ-ಗುಡ್ಡ ಹತ್ತಿ, ಕಾಡಿನಲ್ಲಿ ಚಾರಣ ಮಾಡುವ ಕ್ರೀಡೆಗಳು ಅಲ್ಲಿ ನಡೆದವು. ಕೋಡಂಬಳ್ಳಿಯ ಜ್ಯೋತಿ ವಿದ್ಯಾಸಂಸ್ಥೆ ಈ ಕಾರ್ಯಕ್ರಮಕ್ಕೆ ಸಹಕಾರ ನೀಡಿತ್ತು.<br /> <br /> ಇದರ ಪ್ರಯೋಜನ ಪಡೆದ ಹಳ್ಳಿಗಾಡಿನ ಮಕ್ಕಳು ಸ್ವಚ್ಛಂದವಾಗಿ ಆಕಾಶದಲ್ಲಿ ಹಕ್ಕಿಗಳಂತೆ ಪ್ಯಾರಚ್ಯೂಟ್ನಲ್ಲಿ ಹಾರಾಡಿ ಆಕಾಶ ಮುಟ್ಟಿದಷ್ಟೇ ಸಂತಸಗೊಂಡವು. ರಾಮನಗರ ಜಿಲ್ಲೆಯಲ್ಲಿ ಈ ರೀತಿಯ ಸಾಹಸ ಕ್ರೀಡೆಗಳು ನಡೆದದ್ದು ಇದೇ ಮೊದಲು. ಇಲ್ಲಿ ನಡೆದ ವಿವಿಧ ಬಗೆಯ ಕ್ರೀಡೆಗಳಲ್ಲಿ ಮಕ್ಕಳು ಸೇರಿದಂತೆ ಸುಮಾರು 200 ಜನ ಪಾಲ್ಗೊಂಡಿದ್ದರು.<br /> <br /> ಈ ಸಾಹಸ ಕ್ರೀಡೆಗಳ ಕುರಿತು ಪ್ರತಿಕ್ರಿಯಿಸಿದ ನ್ಯಾಷನಲ್ ಅಡ್ವೆಂಚರ್ ಫೌಂಡೇಷನ್ನ ನಿರ್ದೇಶಕಿ ರುಕ್ಮಿಣಿ ಚಂದ್ರನ್, ಗ್ರಾಮ ಮಟ್ಟದಲ್ಲಿ ಸಾಹಸ ಕ್ರೀಡೆಗಳನ್ನು ಆಯೋಜಿಸಿ ಅವರಲ್ಲಿನ ಕ್ರೀಡಾ ಸ್ಪೂರ್ತಿಯನ್ನು ಬಡಿದೆಬ್ಬಿಸುವ ಕೆಲಸವನ್ನು ಪ್ರತಿಷ್ಠಾನ ಮಾಡುತ್ತಿದೆ. ಕೇವಲ ನಗರ ಪ್ರದೇಶದ ಯುವಕ-ಯುವತಿಯರಿಗೆ ಮಾತ್ರ ಸೀಮಿತವಾಗಿರದೆ, ಹಳ್ಳಿ ಯುವ ಜನತೆಯನ್ನು ಸಾಹಸ ಕ್ರೀಡೆಗಳತ್ತ ಆಕರ್ಷಿಸಲು ಯೋಜಿಸಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದರು.<br /> <br /> ಕ್ರೀಡೆಗಳೆಂದರೆ ಬರೀ ಸೋಲು ಗೆಲುವು ಅಷ್ಟೇ ಅಲ್ಲ. ಯುವಕರಿಗೆ, ಸ್ವಯಂ ಕ್ರೀಡೆಗಳಾದ ಸಾಹಸ ಕ್ರೀಡೆಗಳು ತಮ್ಮ ಮನಸ್ಸಿನ ಹಾಗೂ ದೇಹದ ಬೆಳವಣಿಗೆಗೆ ಸಹಕಾರಿಯಾಗುತ್ತಿವೆ ಎಂಬುದನ್ನು ತಿಳಿಸುವುದೇ ಈ ಕಾರ್ಯಕ್ರಮಗಳನ ಉದ್ದೇಶ ಎಂದ ಅವರು ತಿಳಿಸಿದರು. ಖಾಸಗಿಯಾಗಿ ಈ ಸಾಹಸ ಕ್ರೀಡೆಗಳನ್ನು ನಡೆಸಬೇಕಾದರೆ ಒಬ್ಬರಿಗೆ 600 ರೂಪಾಯಿ ಖರ್ಚಾಗುತ್ತದೆ. <br /> <br /> ಆದರೆ ಕೇಂದ್ರ ಸರ್ಕಾರದ ಸಹಯೋಗದೊಂದಿಗೆ ಹಳ್ಳಿಗಳ ಯುವಕರಿಗಾಗಿ ನಾವು ಕೇವಲ 250 ರೂಪಾಯಿಗೆ ಈ ಸಾಹಸ ಕ್ರೀಡೆಗಳನ್ನು ನಡೆಸಿಕೊಡುತ್ತಿದ್ದೇವೆ ಎಂದು ಅವರು ಮಾಹಿತಿ ನೀಡಿದರು. ಸಿಂಗರಾಜಿಪುರದ ಗವಿರಂಗಸ್ವಾಮಿ ಬೆಟ್ಟದಲ್ಲಿ ಸ್ಥಳೀಯ ಯುವಕರ ಜತೆ ಚಾರಣವನ್ನು ಇದೇ ಸಂದರ್ಭದಲ್ಲಿ ಏರ್ಪಡಿಸಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>