<p>ರಾಮನಗರ: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಇದೇ 9ರಂದು ಜಿಲ್ಲೆಯ ಎಲ್ಲ ಮತಗಟ್ಟೆಗಳ ಬಳಿ ವಿಶೇಷ ಆಂದೋಲನ ನಡೆಸಿ ಮತದಾರರು ಹೆಸರು ನೋಂದಾಯಿಸಲು ಅವಕಾಶ ಕಲ್ಪಿಸಲಾಗುವುದು ಎಂದು ಜಿಲ್ಲಾಧಿಕಾರಿಯೂ ಆದ ಚುನಾವಣಾಧಿಕಾರಿ ಡಾ.ಡಿ.ಎಸ್.ವಿಶ್ವನಾಥ್ ತಿಳಿಸಿದರು.<br /> <br /> ಜಿಲ್ಲಾ ಕಂದಾಯ ಭವನದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಒಟ್ಟು 20,76,885 ಮತದಾರರಿದ್ದು, ಈ ಪೈಕಿ 10,76,000 ಪುರುಷರು ಹಾಗೂ 1,00,0666 ಮಹಿಳಾ ಮತದಾರರಾಗಿದ್ದಾರೆ. 219 ಲೈಂಗಿಕ ಅಲ್ಪಸಂಖ್ಯಾತ ಮತದಾರರಿದ್ದಾರೆ. ಮತದಾರರ ಸಂಖ್ಯೆಯಲ್ಲಿ ಹೆಚ್ಚಳವಾಗುವ ಸಾಧ್ಯತೆ ಇದೆ ಎಂದು ಅವರು ಹೇಳಿದರು.<br /> <br /> ಬುಧವಾರದಿಂದಲೇ ನೀತಿ ಸಂಹಿತೆ ಜಾರಿಯಾಗಿದ್ದು, ಅದರ ಅನುಷ್ಠಾನಕ್ಕೆ ಜಿಲ್ಲೆಯಲ್ಲಿ ಮಾದರಿ ನೀತಿ ಸಂಹಿತೆ ಜಾರಿ (ಎಂಸಿಸಿ) ಅಧಿಕಾರಿಯಾಗಿ ಕೈಗಾರಿಕಾ ಇಲಾಖೆಯ ಜಂಟಿ ನಿರ್ದೇಶಕ ಬಾಲ್ಯನಾಯಕ್ ಅವರನ್ನು ನೇಮಕ ಮಾಡಲಾಗಿದೆ. ಅವರ ದೂರವಾಣಿ ಸಂಖ್ಯೆ 98800–92391 ಆಗಿದೆ ಎಂದು ಅವರು ತಿಳಿಸಿದರು.<br /> <br /> ಜಿಲ್ಲೆಯ ನಾಲ್ಕು ತಾಲ್ಲೂಕು ಕೇಂದ್ರಗಳಲ್ಲಿ ನಗರ–ಪಟ್ಟಣ ಆಡಳಿತದ ಆಯುಕ್ತರು, ಮುಖ್ಯ ಅಧಿಕಾರಿಗಳು ಎಂಸಿಸಿ ತಂಡದ ನಾಯಕತ್ವ ವಹಿಸುವರು. ತಾಲ್ಲೂಕುಗಳ ಗ್ರಾಮೀಣ ಪ್ರದೇಶದಲ್ಲಿ ತಾಲ್ಲೂಕು ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿಗಳು ಎಂ.ಸಿ.ಸಿ ತಂಡದಲ್ಲಿ ಇರಲಿದ್ದಾರೆ ಎಂದು ಅವರು ವಿವರಿಸಿದರು.<br /> <br /> <strong>ಕಂಟ್ರೋಲ್ ರೂಂ ವಿವರ</strong><br /> ಚುನಾವಣಾ ಸಂದರ್ಭದಲ್ಲಿ ಸಾರ್ವಜನಿಕರು ದೂರು ನೀಡಲೆಂದು ದಿನದ 24 ಗಂಟೆಯೂ ಕಾರ್ಯನಿರ್ವಹಿಸುವ ಕಂಟ್ರೋಲ್ ರೂಂ ತೆರೆಯಲಾಗಿದೆ.<br /> <br /> ಜಿಲ್ಲಾಧಿಕಾರಿ ಕಚೇರಿ (080– 27276615), ಉಪ ವಿಭಾಗ ಅಧಿಕಾರಿ ಕಚೇರಿ (080–27271229), ರಾಮನಗರ ತಾಲ್ಲೂಕು ಕಚೇರಿ (080–27307173), ಚನ್ನಪಟ್ಟಣ (080–2725 6136), ಕನಕಪುರ (080–27522442), ಮಾಗಡಿ (080–27745651) ಕಂಟ್ರೋಲ್ ರೂಂಗಳನ್ನು ಆರಂಭಿಸಲಾಗಿದೆ. <br /> <br /> ಜಿಲ್ಲೆಯಲ್ಲಿ ವಿವಿಧೆಡೆ ಹಾಕಲಾಗಿರುವ ರಾಜಕೀಯ ಪಕ್ಷಗಳ, ನಾಯಕರ ಫ್ಲೆಕ್ಸ್, ಬ್ಯಾನರ್, ಬಂಟಿಂಗ್ಸ್ಗಳನ್ನು ತೆರವುಗೊಳಿಸಲು ನಿರ್ಧರಿಸಲಾಗಿದೆ.<br /> <br /> ಸರ್ಕಾರಿ ಜಾಹೀರಾತು ಫಲಕಗಳಲ್ಲಿ ಸಚಿವರ ಭಾವಚಿತ್ರಗಳಿದ್ದರೆ ಅವನ್ನೂ ತೆರವುಗೊಳಿಸಲು ಸೂಚಿಸಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.<br /> <br /> ಕುಡಿಯುವ ನೀರಿನ ಘಟಕಗಳಲ್ಲಿ ಯಾವುದಾದರೂ ರಾಜಕೀಯ ಪಕ್ಷ, ನಾಯಕರು, ವ್ಯಕ್ತಿಗಳ ಹೆಸರು, ಭಾವಚಿತ್ರಗಳಿದ್ದರೆ ಅದನ್ನು ಮುಚ್ಚಲು ಅಥವಾ ಅವುಗಳಿಗೆ ಕಪ್ಪು ಬಣ್ಣ ಹಚ್ಚಲು ಅಧಿಕಾರಿಗಳಿಗೆ ತಿಳಿಸಲಾಗಿದೆ ಎಂದು ಅವರು ಹೇಳಿದರು.<br /> <br /> ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರವು ಮೂರು ಜಿಲ್ಲೆಗಳ ಎಂಟು ವಿಧಾನಸಭಾ ಕ್ಷೇತ್ರಗಳನ್ನು ಒಳಗೊಂಡಿದೆ. ಮೂರು ಜಿಲ್ಲೆಗಳ ಜಿಲ್ಲಾಧಿಕಾರಿಗಳು ಚುನಾವಣಾ ವಿಷಯವಾಗಿ ಸಮಾಲೋಚಿಸಿ, ಚುನಾವಣಾ ಕಾರ್ಯಗಳನ್ನು ಕೈಗೊಳ್ಳಲಿದ್ದಾರೆ ಎಂದು ಅವರು ತಿಳಿಸಿದರು.<br /> <br /> ತಾಲ್ಲೂಕು ಮಟ್ಟದಲ್ಲಿ ಎಲ್ಲೆಲ್ಲಿ ಚೆಕ್ಪೋಸ್ಟ್ ಅಗತ್ಯವಿದೆಯೋ ಅಲ್ಲೆಲ್ಲಾ ಚೆಕ್ಪೋಸ್ಟ್ ರಚಿಸಲು ನಿರ್ಧರಿಸಲಾಗಿದ್ದು, ತಹಶೀಲ್ದಾರ್ ಅವರಿಗೆ ಮಾಹಿತಿ ಒದಗಿಸಲು ತಿಳಿಸಲಾಗಿದೆ ಎಂದರು.<br /> <br /> ಚುನಾವಣೆ ಮುಗಿಯುವ ತನಕ ಚುನಾವಣೆಯ ಮಾಹಿತಿಯನ್ನು ಮಾಧ್ಯಮದವರಿಗೆ ಒದಗಿಸಲು ಮಾಧ್ಯಮ ವಿವರಣಾ ಸಮಿತಿ ರಚಿಸಲಾಗುವುದು. ಇದಕ್ಕೊಬ್ಬರು ಅಧಿಕಾರಿಯನ್ನು ನೇಮಿಸಲಾಗುವುದು. ಅವರು ವಾರದಲ್ಲಿ ಎರಡು–ಮೂರು ಬಾರಿ ಅಥವಾ ಅಗತ್ಯವಿದ್ದಾಗ ಮಾಧ್ಯಮದವರಿಗೆ ಚುನಾವಣಾ ಮಾಹಿತಿ ವಿವರಿಸುವರು ಎಂದು ಅವರು ಪ್ರತಿಕ್ರಿಯಿಸಿದರು.<br /> <br /> ಚುನಾವಣಾ ತಹಶೀಲ್ದಾರ್ ಹೊನ್ನಶ್ಯಾಮೇಗೌಡ, ಚುನಾವಣಾ ನೋಡಲ್ ಅಧಿಕಾರಿ ಜಯ ಮಾಧವ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ರಾಮನಗರ: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಇದೇ 9ರಂದು ಜಿಲ್ಲೆಯ ಎಲ್ಲ ಮತಗಟ್ಟೆಗಳ ಬಳಿ ವಿಶೇಷ ಆಂದೋಲನ ನಡೆಸಿ ಮತದಾರರು ಹೆಸರು ನೋಂದಾಯಿಸಲು ಅವಕಾಶ ಕಲ್ಪಿಸಲಾಗುವುದು ಎಂದು ಜಿಲ್ಲಾಧಿಕಾರಿಯೂ ಆದ ಚುನಾವಣಾಧಿಕಾರಿ ಡಾ.ಡಿ.ಎಸ್.ವಿಶ್ವನಾಥ್ ತಿಳಿಸಿದರು.<br /> <br /> ಜಿಲ್ಲಾ ಕಂದಾಯ ಭವನದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಒಟ್ಟು 20,76,885 ಮತದಾರರಿದ್ದು, ಈ ಪೈಕಿ 10,76,000 ಪುರುಷರು ಹಾಗೂ 1,00,0666 ಮಹಿಳಾ ಮತದಾರರಾಗಿದ್ದಾರೆ. 219 ಲೈಂಗಿಕ ಅಲ್ಪಸಂಖ್ಯಾತ ಮತದಾರರಿದ್ದಾರೆ. ಮತದಾರರ ಸಂಖ್ಯೆಯಲ್ಲಿ ಹೆಚ್ಚಳವಾಗುವ ಸಾಧ್ಯತೆ ಇದೆ ಎಂದು ಅವರು ಹೇಳಿದರು.<br /> <br /> ಬುಧವಾರದಿಂದಲೇ ನೀತಿ ಸಂಹಿತೆ ಜಾರಿಯಾಗಿದ್ದು, ಅದರ ಅನುಷ್ಠಾನಕ್ಕೆ ಜಿಲ್ಲೆಯಲ್ಲಿ ಮಾದರಿ ನೀತಿ ಸಂಹಿತೆ ಜಾರಿ (ಎಂಸಿಸಿ) ಅಧಿಕಾರಿಯಾಗಿ ಕೈಗಾರಿಕಾ ಇಲಾಖೆಯ ಜಂಟಿ ನಿರ್ದೇಶಕ ಬಾಲ್ಯನಾಯಕ್ ಅವರನ್ನು ನೇಮಕ ಮಾಡಲಾಗಿದೆ. ಅವರ ದೂರವಾಣಿ ಸಂಖ್ಯೆ 98800–92391 ಆಗಿದೆ ಎಂದು ಅವರು ತಿಳಿಸಿದರು.<br /> <br /> ಜಿಲ್ಲೆಯ ನಾಲ್ಕು ತಾಲ್ಲೂಕು ಕೇಂದ್ರಗಳಲ್ಲಿ ನಗರ–ಪಟ್ಟಣ ಆಡಳಿತದ ಆಯುಕ್ತರು, ಮುಖ್ಯ ಅಧಿಕಾರಿಗಳು ಎಂಸಿಸಿ ತಂಡದ ನಾಯಕತ್ವ ವಹಿಸುವರು. ತಾಲ್ಲೂಕುಗಳ ಗ್ರಾಮೀಣ ಪ್ರದೇಶದಲ್ಲಿ ತಾಲ್ಲೂಕು ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿಗಳು ಎಂ.ಸಿ.ಸಿ ತಂಡದಲ್ಲಿ ಇರಲಿದ್ದಾರೆ ಎಂದು ಅವರು ವಿವರಿಸಿದರು.<br /> <br /> <strong>ಕಂಟ್ರೋಲ್ ರೂಂ ವಿವರ</strong><br /> ಚುನಾವಣಾ ಸಂದರ್ಭದಲ್ಲಿ ಸಾರ್ವಜನಿಕರು ದೂರು ನೀಡಲೆಂದು ದಿನದ 24 ಗಂಟೆಯೂ ಕಾರ್ಯನಿರ್ವಹಿಸುವ ಕಂಟ್ರೋಲ್ ರೂಂ ತೆರೆಯಲಾಗಿದೆ.<br /> <br /> ಜಿಲ್ಲಾಧಿಕಾರಿ ಕಚೇರಿ (080– 27276615), ಉಪ ವಿಭಾಗ ಅಧಿಕಾರಿ ಕಚೇರಿ (080–27271229), ರಾಮನಗರ ತಾಲ್ಲೂಕು ಕಚೇರಿ (080–27307173), ಚನ್ನಪಟ್ಟಣ (080–2725 6136), ಕನಕಪುರ (080–27522442), ಮಾಗಡಿ (080–27745651) ಕಂಟ್ರೋಲ್ ರೂಂಗಳನ್ನು ಆರಂಭಿಸಲಾಗಿದೆ. <br /> <br /> ಜಿಲ್ಲೆಯಲ್ಲಿ ವಿವಿಧೆಡೆ ಹಾಕಲಾಗಿರುವ ರಾಜಕೀಯ ಪಕ್ಷಗಳ, ನಾಯಕರ ಫ್ಲೆಕ್ಸ್, ಬ್ಯಾನರ್, ಬಂಟಿಂಗ್ಸ್ಗಳನ್ನು ತೆರವುಗೊಳಿಸಲು ನಿರ್ಧರಿಸಲಾಗಿದೆ.<br /> <br /> ಸರ್ಕಾರಿ ಜಾಹೀರಾತು ಫಲಕಗಳಲ್ಲಿ ಸಚಿವರ ಭಾವಚಿತ್ರಗಳಿದ್ದರೆ ಅವನ್ನೂ ತೆರವುಗೊಳಿಸಲು ಸೂಚಿಸಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.<br /> <br /> ಕುಡಿಯುವ ನೀರಿನ ಘಟಕಗಳಲ್ಲಿ ಯಾವುದಾದರೂ ರಾಜಕೀಯ ಪಕ್ಷ, ನಾಯಕರು, ವ್ಯಕ್ತಿಗಳ ಹೆಸರು, ಭಾವಚಿತ್ರಗಳಿದ್ದರೆ ಅದನ್ನು ಮುಚ್ಚಲು ಅಥವಾ ಅವುಗಳಿಗೆ ಕಪ್ಪು ಬಣ್ಣ ಹಚ್ಚಲು ಅಧಿಕಾರಿಗಳಿಗೆ ತಿಳಿಸಲಾಗಿದೆ ಎಂದು ಅವರು ಹೇಳಿದರು.<br /> <br /> ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರವು ಮೂರು ಜಿಲ್ಲೆಗಳ ಎಂಟು ವಿಧಾನಸಭಾ ಕ್ಷೇತ್ರಗಳನ್ನು ಒಳಗೊಂಡಿದೆ. ಮೂರು ಜಿಲ್ಲೆಗಳ ಜಿಲ್ಲಾಧಿಕಾರಿಗಳು ಚುನಾವಣಾ ವಿಷಯವಾಗಿ ಸಮಾಲೋಚಿಸಿ, ಚುನಾವಣಾ ಕಾರ್ಯಗಳನ್ನು ಕೈಗೊಳ್ಳಲಿದ್ದಾರೆ ಎಂದು ಅವರು ತಿಳಿಸಿದರು.<br /> <br /> ತಾಲ್ಲೂಕು ಮಟ್ಟದಲ್ಲಿ ಎಲ್ಲೆಲ್ಲಿ ಚೆಕ್ಪೋಸ್ಟ್ ಅಗತ್ಯವಿದೆಯೋ ಅಲ್ಲೆಲ್ಲಾ ಚೆಕ್ಪೋಸ್ಟ್ ರಚಿಸಲು ನಿರ್ಧರಿಸಲಾಗಿದ್ದು, ತಹಶೀಲ್ದಾರ್ ಅವರಿಗೆ ಮಾಹಿತಿ ಒದಗಿಸಲು ತಿಳಿಸಲಾಗಿದೆ ಎಂದರು.<br /> <br /> ಚುನಾವಣೆ ಮುಗಿಯುವ ತನಕ ಚುನಾವಣೆಯ ಮಾಹಿತಿಯನ್ನು ಮಾಧ್ಯಮದವರಿಗೆ ಒದಗಿಸಲು ಮಾಧ್ಯಮ ವಿವರಣಾ ಸಮಿತಿ ರಚಿಸಲಾಗುವುದು. ಇದಕ್ಕೊಬ್ಬರು ಅಧಿಕಾರಿಯನ್ನು ನೇಮಿಸಲಾಗುವುದು. ಅವರು ವಾರದಲ್ಲಿ ಎರಡು–ಮೂರು ಬಾರಿ ಅಥವಾ ಅಗತ್ಯವಿದ್ದಾಗ ಮಾಧ್ಯಮದವರಿಗೆ ಚುನಾವಣಾ ಮಾಹಿತಿ ವಿವರಿಸುವರು ಎಂದು ಅವರು ಪ್ರತಿಕ್ರಿಯಿಸಿದರು.<br /> <br /> ಚುನಾವಣಾ ತಹಶೀಲ್ದಾರ್ ಹೊನ್ನಶ್ಯಾಮೇಗೌಡ, ಚುನಾವಣಾ ನೋಡಲ್ ಅಧಿಕಾರಿ ಜಯ ಮಾಧವ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>