<p><strong>ರಾಮನಗರ: </strong>ನಗರಸಭೆಯ ನೂತನ ಅಧ್ಯಕ್ಷರಾಗಿ ಮಹಮದ್ ಆರಿಫ್ ಖುರೇಷಿ ಮತ್ತು ಉಪಾಧ್ಯಕ್ಷರಾಗಿ ನಾಗೇಶ್ ಆಯ್ಕೆಯಾದರು.<br /> <br /> ಸೋಮವಾರ ನಡೆದ ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ್ದ ಮಹಮದ್ ಆರಿಫ್ ಖುರೇಷಿ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ್ದ ನಾಗೇಶ್ ತಲಾ 20 ಮತ ಪಡೆದು ಆಯ್ಕೆಯಾದರು. ಜೆಡಿಎಸ್ ಪಕ್ಷದಿಂದ ಸ್ಪರ್ಧಿಸಿದ್ದ ಮಹಮದ್ ರಫೀಕ್ ಮತ್ತು ಅಬ್ದುಲ್ ಬಾಸಿದ್ 11 ಮತ ಪಡೆದು ಸೋಲು ಕಂಡರು.<br /> <br /> ಅಧ್ಯಕ್ಷ ಸ್ಥಾನ ಸಾಮಾನ್ಯ ವರ್ಗಕ್ಕೆ ಮತ್ತು ಉಪಾಧ್ಯಕ್ಷ ಸ್ಥಾನ ಬಿಸಿಎಂ 'ಎ' ವರ್ಗಕ್ಕೆ ಮೀಸಲಾಗಿತ್ತು. ಉಪವಿಭಾಗಾಧಿಕಾರಿ ಬಿ.ಎಚ್.ಸಿದ್ದಪ್ಪ ಚುನಾವಣಾಧಿಕಾರಿಯಾಗಿ ಕಾರ್ಯ ನಿರ್ವಹಿಸಿದರು.<br /> <br /> ನಗರಸಭೆಯಲ್ಲಿ ಒಟ್ಟು 31 ಸದಸ್ಯರಿದ್ದು 29 ಸದಸ್ಯರು ಚುನಾವಣೆಯಲ್ಲಿ ಭಾಗವಹಿಸಿದ್ದರು. ಮೂರನೇ ವಾರ್ಡಿನ ಸುಜಾತ ಮತ್ತು 4ನೇ ವಾರ್ಡಿನ ನಾಗರಾಜ್ ಅವರು ಚುನಾವಣೆ-ಯಲ್ಲಿ ಗೈರು ಹಾಜರಾಗಿದ್ದರು.<br /> <br /> ಕಳೆದ ಹತ್ತು ದಿನಗಳಿಂದ ನಡೆದ ರಾಜಕೀಯ ಬೆಳವಣಿಗೆಗಳಲ್ಲಿ ಬಿಜೆಪಿಯ ಇಬ್ಬರು ಸದಸ್ಯರು ಕಾಂಗ್ರೆಸ್ಸಿಗೆ ಬೆಂಬಲ ಸೂಚಿಸುವ ಮೂಲಕ ಅಚ್ಚರಿ ಮೂಡಿಸಿದರು. ಇದರಿಂದಾಗಿ ಕಾಂಗ್ರೆಸ್ ಪಕ್ಷಕ್ಕೆ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಗಾದಿ ಸುಲಭ-ವಾಗಿ ಒಲಿಯಿತು. ಸಂಸದ ಡಿ.ಕೆ.ಸುರೇಶ್ ಮತ್ತು ವಿಧಾನ ಪರಿಷತ್ ಸದಸ್ಯ ಕೆ.ಗೋವಿಂದರಾಜು ಅವರು ಸಹಾ ಚುನಾವಣೆ ಪ್ರಕ್ರಿಯೆಯಲ್ಲಿ ಭಾಗವಹಿಸಿ ತಮ್ಮ ಮತ ಚಲಾಯಿಸಿದರು.<br /> <br /> ಅಧ್ಯಕ್ಷ ಸ್ಥಾನಕ್ಕೆ 1ನೇ ವಾರ್ಡಿನ ಎ.ಬಿ.ಚೇತನ್ ಕುಮಾರ್, 16ನೇ ವಾರ್ಡಿನ ಮಹಮದ್ ಆರಿಫ್ ಖುರೇಷಿ ಅವರು ಕಾಂಗ್ರೆಸ್ ಪಕ್ಷದಿಂದ ನಾಮಪತ್ರ ಸಲ್ಲಿಸಿದರು. ಎ.ಬಿ.ಚೇತನ್ ಕುಮಾರ್ ತಮ್ಮ ನಾಮಪತ್ರ ಹಿಂದಕ್ಕೆ ಪಡೆದರು.<br /> <br /> ಜೆಡಿಎಸ್ ಪಕ್ಷದಿಂದ 22ನೇ ವಾರ್ಡಿನಿಂದ ಆಯ್ಕೆಯಾಗಿರುವ ಮಹಮದ್ ರಫೀಕ್ ಅವರು ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ್ದರು.<br /> ಉಪಾಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್ ಪಕ್ಷದಿಂದ 15ನೇ ವಾರ್ಡ್ನ ಮಹಮದ್ ಅಸ್ಲಂ ಷರೀಫ್ ಮತ್ತು 26ನೇ ವಾರ್ಡಿನ ನಾಗೇಶ್ ಅವರು ನಾಮಪತ್ರ ಸಲ್ಲಿಸಿ ನಂತರ ಮಹಮದ್ ಅಸ್ಲಂ ಷರೀಫ್ ಅವರು ತಮ್ಮ ನಾಮಪತ್ರವನ್ನು ಹಿಂದಕ್ಕೆ ಪಡೆದಿದ್ದರು. ಜೆಡಿಎಸ್ ಪಕ್ಷದಿಂದ 11ನೇ ವಾರ್ಡಿನನ ಅಬ್ದುಲ್ ಬಾಸಿದ್ ನಾಮಪತ್ರ ಸಲ್ಲಿಸಿದ್ದರು.<br /> <br /> ಜಿಲ್ಲೆಯ ಅಭಿವೃದ್ಧಿಗೆ ಅನುಕೂಲ: ಜಿಲ್ಲೆಯಲ್ಲಿ ನಾಲ್ಕು ಸ್ಥಳೀಯ ಸಂಸ್ಥೆಗಳಿಗೆ ನಡೆದ ಚುನಾವಣೆಯಲ್ಲಿ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಗಳನ್ನು ಕಾಂಗ್ರೆಸ್ ಪಕ್ಷ ತನ್ನ ತೆಕ್ಕೆಗೆ ತೆಗೆದುಕೊಳ್ಳುವಲ್ಲಿ ಯಶಸ್ವಿಯಾಗಿದೆ. ಇದರಿಂದ ಇಡಿ ಜಿಲ್ಲೆಯನ್ನು ಅಭಿವೃದ್ಧಿಪಡಿಸಲು ಅನುಕೂಲವಾಗಿದೆ ಎಂದು ಸಂಸದ ಡಿ.ಕೆ.ಸುರೇಶ್ ತಿಳಿಸಿದರು. <br /> <br /> ಚುನಾವಣೆ ನಂತರ ಸುದ್ದಿ ಗೋಷ್ಠಿಯಲ್ಲಿ ಮಾತನಾಡಿದ ಅವರು, ಆಯ್ಕೆಯಾಗಿರುವ ಎಲ್ಲಾ ಅಧ್ಯಕ್ಷ ಮತ್ತು ಉಪಾಧ್ಯಕ್ಷರುಗಳಿಗೆ ಪಕ್ಷಬೇಧ ಮರೆತು ಕೆಲಸ ಮಾಡುವಂತೆ ಸೂಚಿಸಲಾಗಿದೆ ಎಂದು ತಿಳಿಸಿದರು.<br /> <br /> <strong>ಅಭಿನಂದನೆ:</strong> ಕಾಂಗ್ರೆಸ್ ಮುಖಂಡ ಸಿ.ಎಂ.ಲಿಂಗಪ್ಪ, ಕೆಎಂಎಫ್ ನಿರ್ದೇಶಕ ಪಿ.ನಾಗರಾಜು, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸಯ್ಯದ್ ಜಿಯಾಉಲ್ಲಾ, ಪ್ರಧಾನ ಕಾರ್ಯದರ್ಶಿ ಮರಿದೇವರು, ಕೆಪಿಸಿಸಿ ಸದಸ್ಯ ಕೆ.ರಮೇಶ್, ಕೆ.ಶೇಷಾದ್ರಿ, ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಿಎನ್ಆರ್ ವೆಂಕಟೇಶ್, ಉಪಾಧ್ಯಕ್ಷ ಪುಟ್ಟರಾಜು ಮತ್ತು ಕಾರ್ಯಕರ್ತರು ಅಧ್ಯಕ್ಷ ಮತ್ತು ಉಪಾಧ್ಯಕ್ಷರನ್ನು ಅಭಿನಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಮನಗರ: </strong>ನಗರಸಭೆಯ ನೂತನ ಅಧ್ಯಕ್ಷರಾಗಿ ಮಹಮದ್ ಆರಿಫ್ ಖುರೇಷಿ ಮತ್ತು ಉಪಾಧ್ಯಕ್ಷರಾಗಿ ನಾಗೇಶ್ ಆಯ್ಕೆಯಾದರು.<br /> <br /> ಸೋಮವಾರ ನಡೆದ ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ್ದ ಮಹಮದ್ ಆರಿಫ್ ಖುರೇಷಿ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ್ದ ನಾಗೇಶ್ ತಲಾ 20 ಮತ ಪಡೆದು ಆಯ್ಕೆಯಾದರು. ಜೆಡಿಎಸ್ ಪಕ್ಷದಿಂದ ಸ್ಪರ್ಧಿಸಿದ್ದ ಮಹಮದ್ ರಫೀಕ್ ಮತ್ತು ಅಬ್ದುಲ್ ಬಾಸಿದ್ 11 ಮತ ಪಡೆದು ಸೋಲು ಕಂಡರು.<br /> <br /> ಅಧ್ಯಕ್ಷ ಸ್ಥಾನ ಸಾಮಾನ್ಯ ವರ್ಗಕ್ಕೆ ಮತ್ತು ಉಪಾಧ್ಯಕ್ಷ ಸ್ಥಾನ ಬಿಸಿಎಂ 'ಎ' ವರ್ಗಕ್ಕೆ ಮೀಸಲಾಗಿತ್ತು. ಉಪವಿಭಾಗಾಧಿಕಾರಿ ಬಿ.ಎಚ್.ಸಿದ್ದಪ್ಪ ಚುನಾವಣಾಧಿಕಾರಿಯಾಗಿ ಕಾರ್ಯ ನಿರ್ವಹಿಸಿದರು.<br /> <br /> ನಗರಸಭೆಯಲ್ಲಿ ಒಟ್ಟು 31 ಸದಸ್ಯರಿದ್ದು 29 ಸದಸ್ಯರು ಚುನಾವಣೆಯಲ್ಲಿ ಭಾಗವಹಿಸಿದ್ದರು. ಮೂರನೇ ವಾರ್ಡಿನ ಸುಜಾತ ಮತ್ತು 4ನೇ ವಾರ್ಡಿನ ನಾಗರಾಜ್ ಅವರು ಚುನಾವಣೆ-ಯಲ್ಲಿ ಗೈರು ಹಾಜರಾಗಿದ್ದರು.<br /> <br /> ಕಳೆದ ಹತ್ತು ದಿನಗಳಿಂದ ನಡೆದ ರಾಜಕೀಯ ಬೆಳವಣಿಗೆಗಳಲ್ಲಿ ಬಿಜೆಪಿಯ ಇಬ್ಬರು ಸದಸ್ಯರು ಕಾಂಗ್ರೆಸ್ಸಿಗೆ ಬೆಂಬಲ ಸೂಚಿಸುವ ಮೂಲಕ ಅಚ್ಚರಿ ಮೂಡಿಸಿದರು. ಇದರಿಂದಾಗಿ ಕಾಂಗ್ರೆಸ್ ಪಕ್ಷಕ್ಕೆ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಗಾದಿ ಸುಲಭ-ವಾಗಿ ಒಲಿಯಿತು. ಸಂಸದ ಡಿ.ಕೆ.ಸುರೇಶ್ ಮತ್ತು ವಿಧಾನ ಪರಿಷತ್ ಸದಸ್ಯ ಕೆ.ಗೋವಿಂದರಾಜು ಅವರು ಸಹಾ ಚುನಾವಣೆ ಪ್ರಕ್ರಿಯೆಯಲ್ಲಿ ಭಾಗವಹಿಸಿ ತಮ್ಮ ಮತ ಚಲಾಯಿಸಿದರು.<br /> <br /> ಅಧ್ಯಕ್ಷ ಸ್ಥಾನಕ್ಕೆ 1ನೇ ವಾರ್ಡಿನ ಎ.ಬಿ.ಚೇತನ್ ಕುಮಾರ್, 16ನೇ ವಾರ್ಡಿನ ಮಹಮದ್ ಆರಿಫ್ ಖುರೇಷಿ ಅವರು ಕಾಂಗ್ರೆಸ್ ಪಕ್ಷದಿಂದ ನಾಮಪತ್ರ ಸಲ್ಲಿಸಿದರು. ಎ.ಬಿ.ಚೇತನ್ ಕುಮಾರ್ ತಮ್ಮ ನಾಮಪತ್ರ ಹಿಂದಕ್ಕೆ ಪಡೆದರು.<br /> <br /> ಜೆಡಿಎಸ್ ಪಕ್ಷದಿಂದ 22ನೇ ವಾರ್ಡಿನಿಂದ ಆಯ್ಕೆಯಾಗಿರುವ ಮಹಮದ್ ರಫೀಕ್ ಅವರು ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ್ದರು.<br /> ಉಪಾಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್ ಪಕ್ಷದಿಂದ 15ನೇ ವಾರ್ಡ್ನ ಮಹಮದ್ ಅಸ್ಲಂ ಷರೀಫ್ ಮತ್ತು 26ನೇ ವಾರ್ಡಿನ ನಾಗೇಶ್ ಅವರು ನಾಮಪತ್ರ ಸಲ್ಲಿಸಿ ನಂತರ ಮಹಮದ್ ಅಸ್ಲಂ ಷರೀಫ್ ಅವರು ತಮ್ಮ ನಾಮಪತ್ರವನ್ನು ಹಿಂದಕ್ಕೆ ಪಡೆದಿದ್ದರು. ಜೆಡಿಎಸ್ ಪಕ್ಷದಿಂದ 11ನೇ ವಾರ್ಡಿನನ ಅಬ್ದುಲ್ ಬಾಸಿದ್ ನಾಮಪತ್ರ ಸಲ್ಲಿಸಿದ್ದರು.<br /> <br /> ಜಿಲ್ಲೆಯ ಅಭಿವೃದ್ಧಿಗೆ ಅನುಕೂಲ: ಜಿಲ್ಲೆಯಲ್ಲಿ ನಾಲ್ಕು ಸ್ಥಳೀಯ ಸಂಸ್ಥೆಗಳಿಗೆ ನಡೆದ ಚುನಾವಣೆಯಲ್ಲಿ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಗಳನ್ನು ಕಾಂಗ್ರೆಸ್ ಪಕ್ಷ ತನ್ನ ತೆಕ್ಕೆಗೆ ತೆಗೆದುಕೊಳ್ಳುವಲ್ಲಿ ಯಶಸ್ವಿಯಾಗಿದೆ. ಇದರಿಂದ ಇಡಿ ಜಿಲ್ಲೆಯನ್ನು ಅಭಿವೃದ್ಧಿಪಡಿಸಲು ಅನುಕೂಲವಾಗಿದೆ ಎಂದು ಸಂಸದ ಡಿ.ಕೆ.ಸುರೇಶ್ ತಿಳಿಸಿದರು. <br /> <br /> ಚುನಾವಣೆ ನಂತರ ಸುದ್ದಿ ಗೋಷ್ಠಿಯಲ್ಲಿ ಮಾತನಾಡಿದ ಅವರು, ಆಯ್ಕೆಯಾಗಿರುವ ಎಲ್ಲಾ ಅಧ್ಯಕ್ಷ ಮತ್ತು ಉಪಾಧ್ಯಕ್ಷರುಗಳಿಗೆ ಪಕ್ಷಬೇಧ ಮರೆತು ಕೆಲಸ ಮಾಡುವಂತೆ ಸೂಚಿಸಲಾಗಿದೆ ಎಂದು ತಿಳಿಸಿದರು.<br /> <br /> <strong>ಅಭಿನಂದನೆ:</strong> ಕಾಂಗ್ರೆಸ್ ಮುಖಂಡ ಸಿ.ಎಂ.ಲಿಂಗಪ್ಪ, ಕೆಎಂಎಫ್ ನಿರ್ದೇಶಕ ಪಿ.ನಾಗರಾಜು, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸಯ್ಯದ್ ಜಿಯಾಉಲ್ಲಾ, ಪ್ರಧಾನ ಕಾರ್ಯದರ್ಶಿ ಮರಿದೇವರು, ಕೆಪಿಸಿಸಿ ಸದಸ್ಯ ಕೆ.ರಮೇಶ್, ಕೆ.ಶೇಷಾದ್ರಿ, ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಿಎನ್ಆರ್ ವೆಂಕಟೇಶ್, ಉಪಾಧ್ಯಕ್ಷ ಪುಟ್ಟರಾಜು ಮತ್ತು ಕಾರ್ಯಕರ್ತರು ಅಧ್ಯಕ್ಷ ಮತ್ತು ಉಪಾಧ್ಯಕ್ಷರನ್ನು ಅಭಿನಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>