<p><strong>ಕನಕಪುರ: </strong>ರಕ್ತದಾನ ಮಾಡುವ ಮೂಲಕ ಮತ್ತೊಬ್ಬರ ಅತ್ಯಮೂಲ್ಯ ಜೀವವನ್ನು ಕಾಪಾಡಬೇಕೆಂದು ವನ್ಯಜೀವಿ ವಲಯಾಧಿಕಾರಿ ಸುನಿತಾಬಾಯಿ ಹೇಳಿದರು.ಪಟ್ಟಣದ ಕೋಟೆ ಗಣಪತಿ ದೇವಸ್ಥಾನದ ಆವರಣದಲ್ಲಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ವತಿಯಿಂದ ನಡೆದ ಸ್ವಯಂಪ್ರೇರಿತ ರಕ್ತದಾನ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು. <br /> <br /> ರಕ್ತದ ಅಗತ್ಯ ಇರುವವರಿಗೆ ಸಕಾಲದಲ್ಲಿ ರಕ್ತದಾನ ಮಾಡಿದರೆ ಅವರ ಪ್ರಾಣ ಉಳಿಸಬಹುದು. ಆದ್ದರಿಂದ ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ರಕ್ತದಾನ ಶಿಬಿರಗಳಲ್ಲಿ ಪಾಲ್ಗೊಂಡು ರಕ್ತದಾನ ಮಾಡಬೇಕು ಎಂದು ಅವರು ತಿಳಿಸಿದರು. <br /> <br /> ಬೆಳಿಗ್ಗೆ 9ರಿಂದ ಮಧ್ಯಾಹ್ನ 3 ಗಂಟೆಯವರೆಗೆ ರಕ್ತದಾನ ಶಿಬಿರ ನಡೆಯಿತು.<br /> ಎಬಿವಿಪಿ ಜಿಲ್ಲಾ ಸಂಚಾಲಕ ರಘುರಾಂ, ತಾಲ್ಲೂಕು ಸಂಚಾಲಕ ಮಹೇಶ್, ಸಹ ಸಂಚಾಲಕ ಕಾರ್ತೀಕ್, ನಗರ ಕಾರ್ಯದರ್ಶಿ ರಾಘವೇಂದ್ರ, ಬಸವರಾಜು ಇತರರು ಭಾಗವಹಿಸಿದ್ದರು. ಹುತಾತ್ಮ ಚಂದ್ರಶೇಖರ್ ಆಜಾದ್, ರಾಜಗುರು, ಸುಖದೇವ್ ಮತ್ತು ಭಗತ್ ಸಿಂಗ್ರ ಸ್ಮರಣಾರ್ಥ ಶಿಬಿರ ಏರ್ಪಡಿಸಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕನಕಪುರ: </strong>ರಕ್ತದಾನ ಮಾಡುವ ಮೂಲಕ ಮತ್ತೊಬ್ಬರ ಅತ್ಯಮೂಲ್ಯ ಜೀವವನ್ನು ಕಾಪಾಡಬೇಕೆಂದು ವನ್ಯಜೀವಿ ವಲಯಾಧಿಕಾರಿ ಸುನಿತಾಬಾಯಿ ಹೇಳಿದರು.ಪಟ್ಟಣದ ಕೋಟೆ ಗಣಪತಿ ದೇವಸ್ಥಾನದ ಆವರಣದಲ್ಲಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ವತಿಯಿಂದ ನಡೆದ ಸ್ವಯಂಪ್ರೇರಿತ ರಕ್ತದಾನ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು. <br /> <br /> ರಕ್ತದ ಅಗತ್ಯ ಇರುವವರಿಗೆ ಸಕಾಲದಲ್ಲಿ ರಕ್ತದಾನ ಮಾಡಿದರೆ ಅವರ ಪ್ರಾಣ ಉಳಿಸಬಹುದು. ಆದ್ದರಿಂದ ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ರಕ್ತದಾನ ಶಿಬಿರಗಳಲ್ಲಿ ಪಾಲ್ಗೊಂಡು ರಕ್ತದಾನ ಮಾಡಬೇಕು ಎಂದು ಅವರು ತಿಳಿಸಿದರು. <br /> <br /> ಬೆಳಿಗ್ಗೆ 9ರಿಂದ ಮಧ್ಯಾಹ್ನ 3 ಗಂಟೆಯವರೆಗೆ ರಕ್ತದಾನ ಶಿಬಿರ ನಡೆಯಿತು.<br /> ಎಬಿವಿಪಿ ಜಿಲ್ಲಾ ಸಂಚಾಲಕ ರಘುರಾಂ, ತಾಲ್ಲೂಕು ಸಂಚಾಲಕ ಮಹೇಶ್, ಸಹ ಸಂಚಾಲಕ ಕಾರ್ತೀಕ್, ನಗರ ಕಾರ್ಯದರ್ಶಿ ರಾಘವೇಂದ್ರ, ಬಸವರಾಜು ಇತರರು ಭಾಗವಹಿಸಿದ್ದರು. ಹುತಾತ್ಮ ಚಂದ್ರಶೇಖರ್ ಆಜಾದ್, ರಾಜಗುರು, ಸುಖದೇವ್ ಮತ್ತು ಭಗತ್ ಸಿಂಗ್ರ ಸ್ಮರಣಾರ್ಥ ಶಿಬಿರ ಏರ್ಪಡಿಸಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>