<p>ರಾಮನಗರ: ಯಶವಂತಪುರ ಮತ್ತು ಕೇರಳದ ಕಣ್ಣೂರು ನಡುವೆ ನಿತ್ಯ ಸಂಚರಿಸುವ ಯಶವಂತಪುರ–ಕಣ್ಣೂರು ಎಕ್ಸ್ಪ್ರೆಸ್ ರೈಲು (16517/16518) ಮಾರ್ಚ್ 7ರಿಂದ ರಾಮನಗರ ಮತ್ತು ಚನ್ನಪಟ್ಟಣಗಳಲ್ಲಿ ನಿಲ್ಲಿಸಲು ಅನುಮತಿ ನೀಡಿ ರೈಲ್ವೆ ಸಚಿವಾಲಯ ಆದೇಶ ಹೊರಡಿಸಿದೆ.<br /> <br /> ಬೆಂಗಳೂರು ಗ್ರಾಮಂತರ ಕ್ಷೇತ್ರದ ಸಂಸದ ಡಿ.ಕೆ.ಸುರೇಶ್ ಅವರ ಒತ್ತಾಯದ ಮೇರೆಗೆ ರೈಲ್ವೆ ಸಚಿವ ಮಲ್ಲಿಕಾರ್ಜುನ ಖರ್ಗೆ ಅವರು ಈ ತೀರ್ಮಾನ ಪ್ರಕಟಿಸಿದ್ದಾರೆ. ಇದರಿಂದ ಚನ್ನಪಟ್ಟಣ ಮತ್ತು ರಾಮನಗರದಿಂದ ನಿತ್ಯ ಬೆಂಗಳೂರಿಗೆ ಪ್ರಯಾಣಿಸುವ ಸಾವಿರಾರು ರೈಲ್ವೆ ಪ್ರಯಾಣಿಕರಿಗೆ ಅನುಕೂಲವಾಗಲಿದೆ ಎಂದು ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಸೈಯದ್ ಜಿಯಾವುಲ್ಲಾ, ಮಾಜಿ ಶಾಸಕ ಸಿ.ಎಂ.ಲಿಂಗಪ್ಪ, ಮುಖಂಡ ರಘುನಂದನ್ ರಾಮಣ್ಣ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.<br /> <br /> ಎಕ್ಸ್ಪ್ರೆಸ್ ರೈಲುಗಳು ರಾಮನಗರ ಮತ್ತು ಚನ್ನಪಟ್ಟಣದಲ್ಲಿ ನಿಲುಗಡೆ ಮಾಡಬೇಕು ಎಂಬುದು ಈ ಭಾಗದ ಜನರ ಬಹುದಿನಗಳ ಬೇಡಿಕೆಯಾಗಿತ್ತು. ಸಂಸದರು ಜನಸಂಪರ್ಕ ಸಭೆಗಳನ್ನು ನಡೆಸಿದ ಸಂದರ್ಭದಲ್ಲಿ ಜನರಿಂದ ಈ ಬಗ್ಗೆ ಹೆಚ್ಚು ಮನವಿಗಳು ಕೇಳಿ ಬಂದಿದ್ದವು. ಈ ಸಲುವಾಗಿ ನಾಗರಿಕರು, ರೈಲ್ವೆ ಪ್ರಯಾಣಿಕರು, ವಿವಿಧ ಸಂಘ ಸಂಸ್ಥೆಗಳ ಮುಖಂಡರು, ರಾಜಕಾರಣಿಗಳು ರೈಲ್ವೆ ತಡೆ ಹೋರಾಟಗಳನ್ನು ಮಾಡಿದರೂ ಪ್ರಯೋಜನವಾಗಿರಲಿಲ್ಲ. ಆದರೆ ಸಂಸದ ಸುರೇಶ್ ಅವರು ರೈಲ್ವೆ ಸಚಿವ ಖರ್ಗೆ ಅವರ ಮನವೊಲಿಸಿ ಜಿಲ್ಲೆಯ ಜನರಿಗೆ ಈ ಕೊಡುಗೆ ದೊರೆಕಿಸಿಕೊಟ್ಟಿದ್ದಾರೆ ಎಂದು ಅವರು ಹೇಳಿದರು.<br /> <br /> ಇದಲ್ಲದೆ ಇನ್ನೂ ಕೆಲ ಎಕ್ಸ್ಪ್ರೆಸ್ ರೈಲುಗಳ ನಿಲುಗಡೆಗೆ ಮನವಿ ಮಾಡಲಾಗಿದ್ದು, ಹಂತ ಹಂತವಾಗಿ ಈಡೇರುವ ಸಾಧ್ಯತೆ ಇದೆ. ಚನ್ನಪಟ್ಟಣದ ಎಲೆಕೆರಿ ಬಳಿ ₨15 ಕೋಟಿ ವೆಚ್ಚದಲ್ಲಿ ರೈಲ್ವೆ ಮೇಲು ಸೇತುವೆ ನಿರ್ಮಾಣಕ್ಕೆ ಒಪ್ಪಿಗೆ ದೊರೆತಿದೆ. ಅದೇ ರೀತಿ ಟಿಪ್ಪು ನಗರದಲ್ಲಿ ರೈಲ್ವೆ ಕೆಳ ಸೇತುವೆ ನಿರ್ಮಿಸುವ (₨2.26 ಕೋಟಿ) ಪ್ರಸ್ತಾವಕ್ಕೆ ಶೀಘ್ರವೇ ಅನುಮೋದನೆ ದೊರೆಯಲಿದೆ.<br /> ರಾಮನಗರದ ಕೆಂಪನಹಳ್ಳಿ ಬಳಿಯ ರೈಲ್ವೆ ಲೆವೆಲ್ ಕ್ರಾಸಿಂಗ್ ದಿನದ 24 ಗಂಟೆಯೂ ಕಾರ್ಯ ನಿರ್ವಹಿಸಲು ಅನುಮತಿ ಲಭ್ಯವಾಗಿದೆ ಎಂದರು.<br /> <br /> <strong>ಸಿಎಂ ವಿಶೇಷ ಅನುದಾನ: </strong>ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರ ವ್ಯಾಪ್ತಿಗೆ ಒಳಪಡುವ ಎಂಟು ವಿಧಾನಸಭಾ ಕ್ಷೇತ್ರಗಳ ಪೈಕಿ ಆರಕ್ಕೆ (ರಾಮನಗರ, ಚನ್ನಪಟ್ಟಣ, ಕನಕಪುರ, ಮಾಗಡಿ, ಕುಣಿಗಲ್, ಆನೆಕಲ್) ಮುಖ್ಯಮಂತ್ರಿ ಅವರ ವಿಶೇಷ ಅನುದಾನದಲ್ಲಿ ₨18 ಕೋಟಿ ಲಭ್ಯವಾಗಿದೆ. ಪ್ರತಿ ಕ್ಷೇತ್ರಕ್ಕೆ ತಲಾ ಮೂರು ಕೋಟಿ ವೆಚ್ಚದಲ್ಲಿ ಸಿಮೆಂಟ್ ರಸ್ತೆ ನಿರ್ಮಾಣವಾಗಲಿದೆ.<br /> <br /> ಇದಲ್ಲದೆ ಕನಕಪುರ ಮತ್ತು ರಾಮನಗರಕ್ಕೆ ರಾಜೀವ್ ಆವಾಸ್ ಯೋಜನೆಯಡಿ ವಸತಿ ಯೋಜನೆ ಅನುಮೋದನೆ ದೊರೆಯಲಿದೆ. ಕನಕಪುರದಲ್ಲಿ ₨72 ಕೋಟಿ ಹಾಗೂ ರಾಮನಗರದಲ್ಲಿ ₨ 50 ಕೊಟಿ ವೆಚ್ಚದಲ್ಲಿ ಮನೆಗಳು ನಿರ್ಮಾಣವಾಗಲಿದ್ದು, ಈ ಪಟ್ಟಣಗಳನ್ನು ಕೊಳೆಗೇರಿ ಮುಕ್ತಗೊಳಿಸುವ ಮಹತ್ವದ ಉದ್ದೇಶದಿಂದ ಈ ಯೋಜನೆ ಜಾರಿಗೆ ಬರಲಿದೆ ಎಂದರು.<br /> <br /> ಕಾಂಗ್ರೆಸ್ ಮುಖಂಡ ಮರಿದೇವರು, ರಮೇಶ್, ಕೆ.ಶೇಷಾದ್ರಿ, ಕಾಂತರಾಜ ಪಟೇಲ್, ಸಿ.ಎನ್.ಆರ್. ವೆಂಕಟೇಶ್. ಎಲ್.ಚಂದ್ರಶೇಖರ್ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ರಾಮನಗರ: ಯಶವಂತಪುರ ಮತ್ತು ಕೇರಳದ ಕಣ್ಣೂರು ನಡುವೆ ನಿತ್ಯ ಸಂಚರಿಸುವ ಯಶವಂತಪುರ–ಕಣ್ಣೂರು ಎಕ್ಸ್ಪ್ರೆಸ್ ರೈಲು (16517/16518) ಮಾರ್ಚ್ 7ರಿಂದ ರಾಮನಗರ ಮತ್ತು ಚನ್ನಪಟ್ಟಣಗಳಲ್ಲಿ ನಿಲ್ಲಿಸಲು ಅನುಮತಿ ನೀಡಿ ರೈಲ್ವೆ ಸಚಿವಾಲಯ ಆದೇಶ ಹೊರಡಿಸಿದೆ.<br /> <br /> ಬೆಂಗಳೂರು ಗ್ರಾಮಂತರ ಕ್ಷೇತ್ರದ ಸಂಸದ ಡಿ.ಕೆ.ಸುರೇಶ್ ಅವರ ಒತ್ತಾಯದ ಮೇರೆಗೆ ರೈಲ್ವೆ ಸಚಿವ ಮಲ್ಲಿಕಾರ್ಜುನ ಖರ್ಗೆ ಅವರು ಈ ತೀರ್ಮಾನ ಪ್ರಕಟಿಸಿದ್ದಾರೆ. ಇದರಿಂದ ಚನ್ನಪಟ್ಟಣ ಮತ್ತು ರಾಮನಗರದಿಂದ ನಿತ್ಯ ಬೆಂಗಳೂರಿಗೆ ಪ್ರಯಾಣಿಸುವ ಸಾವಿರಾರು ರೈಲ್ವೆ ಪ್ರಯಾಣಿಕರಿಗೆ ಅನುಕೂಲವಾಗಲಿದೆ ಎಂದು ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಸೈಯದ್ ಜಿಯಾವುಲ್ಲಾ, ಮಾಜಿ ಶಾಸಕ ಸಿ.ಎಂ.ಲಿಂಗಪ್ಪ, ಮುಖಂಡ ರಘುನಂದನ್ ರಾಮಣ್ಣ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.<br /> <br /> ಎಕ್ಸ್ಪ್ರೆಸ್ ರೈಲುಗಳು ರಾಮನಗರ ಮತ್ತು ಚನ್ನಪಟ್ಟಣದಲ್ಲಿ ನಿಲುಗಡೆ ಮಾಡಬೇಕು ಎಂಬುದು ಈ ಭಾಗದ ಜನರ ಬಹುದಿನಗಳ ಬೇಡಿಕೆಯಾಗಿತ್ತು. ಸಂಸದರು ಜನಸಂಪರ್ಕ ಸಭೆಗಳನ್ನು ನಡೆಸಿದ ಸಂದರ್ಭದಲ್ಲಿ ಜನರಿಂದ ಈ ಬಗ್ಗೆ ಹೆಚ್ಚು ಮನವಿಗಳು ಕೇಳಿ ಬಂದಿದ್ದವು. ಈ ಸಲುವಾಗಿ ನಾಗರಿಕರು, ರೈಲ್ವೆ ಪ್ರಯಾಣಿಕರು, ವಿವಿಧ ಸಂಘ ಸಂಸ್ಥೆಗಳ ಮುಖಂಡರು, ರಾಜಕಾರಣಿಗಳು ರೈಲ್ವೆ ತಡೆ ಹೋರಾಟಗಳನ್ನು ಮಾಡಿದರೂ ಪ್ರಯೋಜನವಾಗಿರಲಿಲ್ಲ. ಆದರೆ ಸಂಸದ ಸುರೇಶ್ ಅವರು ರೈಲ್ವೆ ಸಚಿವ ಖರ್ಗೆ ಅವರ ಮನವೊಲಿಸಿ ಜಿಲ್ಲೆಯ ಜನರಿಗೆ ಈ ಕೊಡುಗೆ ದೊರೆಕಿಸಿಕೊಟ್ಟಿದ್ದಾರೆ ಎಂದು ಅವರು ಹೇಳಿದರು.<br /> <br /> ಇದಲ್ಲದೆ ಇನ್ನೂ ಕೆಲ ಎಕ್ಸ್ಪ್ರೆಸ್ ರೈಲುಗಳ ನಿಲುಗಡೆಗೆ ಮನವಿ ಮಾಡಲಾಗಿದ್ದು, ಹಂತ ಹಂತವಾಗಿ ಈಡೇರುವ ಸಾಧ್ಯತೆ ಇದೆ. ಚನ್ನಪಟ್ಟಣದ ಎಲೆಕೆರಿ ಬಳಿ ₨15 ಕೋಟಿ ವೆಚ್ಚದಲ್ಲಿ ರೈಲ್ವೆ ಮೇಲು ಸೇತುವೆ ನಿರ್ಮಾಣಕ್ಕೆ ಒಪ್ಪಿಗೆ ದೊರೆತಿದೆ. ಅದೇ ರೀತಿ ಟಿಪ್ಪು ನಗರದಲ್ಲಿ ರೈಲ್ವೆ ಕೆಳ ಸೇತುವೆ ನಿರ್ಮಿಸುವ (₨2.26 ಕೋಟಿ) ಪ್ರಸ್ತಾವಕ್ಕೆ ಶೀಘ್ರವೇ ಅನುಮೋದನೆ ದೊರೆಯಲಿದೆ.<br /> ರಾಮನಗರದ ಕೆಂಪನಹಳ್ಳಿ ಬಳಿಯ ರೈಲ್ವೆ ಲೆವೆಲ್ ಕ್ರಾಸಿಂಗ್ ದಿನದ 24 ಗಂಟೆಯೂ ಕಾರ್ಯ ನಿರ್ವಹಿಸಲು ಅನುಮತಿ ಲಭ್ಯವಾಗಿದೆ ಎಂದರು.<br /> <br /> <strong>ಸಿಎಂ ವಿಶೇಷ ಅನುದಾನ: </strong>ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರ ವ್ಯಾಪ್ತಿಗೆ ಒಳಪಡುವ ಎಂಟು ವಿಧಾನಸಭಾ ಕ್ಷೇತ್ರಗಳ ಪೈಕಿ ಆರಕ್ಕೆ (ರಾಮನಗರ, ಚನ್ನಪಟ್ಟಣ, ಕನಕಪುರ, ಮಾಗಡಿ, ಕುಣಿಗಲ್, ಆನೆಕಲ್) ಮುಖ್ಯಮಂತ್ರಿ ಅವರ ವಿಶೇಷ ಅನುದಾನದಲ್ಲಿ ₨18 ಕೋಟಿ ಲಭ್ಯವಾಗಿದೆ. ಪ್ರತಿ ಕ್ಷೇತ್ರಕ್ಕೆ ತಲಾ ಮೂರು ಕೋಟಿ ವೆಚ್ಚದಲ್ಲಿ ಸಿಮೆಂಟ್ ರಸ್ತೆ ನಿರ್ಮಾಣವಾಗಲಿದೆ.<br /> <br /> ಇದಲ್ಲದೆ ಕನಕಪುರ ಮತ್ತು ರಾಮನಗರಕ್ಕೆ ರಾಜೀವ್ ಆವಾಸ್ ಯೋಜನೆಯಡಿ ವಸತಿ ಯೋಜನೆ ಅನುಮೋದನೆ ದೊರೆಯಲಿದೆ. ಕನಕಪುರದಲ್ಲಿ ₨72 ಕೋಟಿ ಹಾಗೂ ರಾಮನಗರದಲ್ಲಿ ₨ 50 ಕೊಟಿ ವೆಚ್ಚದಲ್ಲಿ ಮನೆಗಳು ನಿರ್ಮಾಣವಾಗಲಿದ್ದು, ಈ ಪಟ್ಟಣಗಳನ್ನು ಕೊಳೆಗೇರಿ ಮುಕ್ತಗೊಳಿಸುವ ಮಹತ್ವದ ಉದ್ದೇಶದಿಂದ ಈ ಯೋಜನೆ ಜಾರಿಗೆ ಬರಲಿದೆ ಎಂದರು.<br /> <br /> ಕಾಂಗ್ರೆಸ್ ಮುಖಂಡ ಮರಿದೇವರು, ರಮೇಶ್, ಕೆ.ಶೇಷಾದ್ರಿ, ಕಾಂತರಾಜ ಪಟೇಲ್, ಸಿ.ಎನ್.ಆರ್. ವೆಂಕಟೇಶ್. ಎಲ್.ಚಂದ್ರಶೇಖರ್ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>