<p><strong>ರಾಮನಗರ: </strong>ವಿಪತ್ತು ನಿಯಂತ್ರಿಸುವ ಕುರಿತು ನೀಡಲಾಗುತ್ತಿರುವ ತರಬೇತಿಯನ್ನು ಪಡೆಯಲು ಜಿಲ್ಲೆಯ ವಿವಿಧ ಇಲಾಖೆಗಳ ಅಧಿಕಾರಿಗಳು ಆಸಕ್ತಿ ತೋರುತ್ತಿಲ್ಲ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಎ.ಬಿ. ಬಸವರಾಜು ಅಸಮಾಧಾನ ವ್ಯಕ್ತಪಡಿಸಿದರು.<br /> <br /> ನಗರದ ಮಿನಿ ವಿಧಾನಸೌದ ಆವರಣದಲ್ಲಿ ಜಿಲ್ಲಾ ಗೃಹ ರಕ್ಷಕ ದಳ ಸೋಮವಾರ ಹಮ್ಮಿಕೊಂಡಿದ್ದ ರಾಷ್ಟ್ರೀಯ ವಿಪತ್ತು ನಿಯಂತ್ರಣಾ ದಿನಾಚರಣೆಗೆ ಚಾಲನೆ ನೀಡಿ ಅವರು ಮಾತನಾಡಿದರು.<br /> <br /> ‘ತಮ್ಮ ಕಚೇರಿಯಲ್ಲಿ ಹೆಚ್ಚು ಕೆಲಸವಿದೆ. ಸಭೆ, ಸಮಾರಂಭಗಳಿಗೆ ಹೋಗಬೇಕು. ಕ್ಷೇತ್ರ ಕಾರ್ಯಕ್ಕೆ ಹೋಗಬೇಕು. ಕೋರ್ಟ್ ಪ್ರಕರಣಗಳಿಗೆ ತೆರಳಬೇಕು ಎಂಬ ಕಾರಣಗಳನ್ನು ನೀಡುವ ಮೂಲಕ ಅಧಿಕಾರಿಗಳು ತರಬೇತಿಗೆ ಹಾಜರಾಗುತ್ತಿಲ್ಲ’ ಎಂದು ಅವರು ದೂರಿದರು.<br /> <br /> ಆಕಸ್ಮಿಕವಾಗಿ ಎದುರಾಗು ವಿಪತ್ತುಗಳ ಸಮರ್ಥವಾಗಿ ಎದುರಿಸಲು ನಾಗರಿಕರು ಸಹ ಸನ್ನದರಾಗಿರಬೇಕು. ವಿಪತ್ತುಗಳು ನೈಸರ್ಗಿಕವಾಗಿರಲಿ, ಮಾನವ ನಿರ್ಮಿತವಾಗಿರಲಿ ಅವುಗಳ ಪರಿಣಾಮ ನೇರವಾಗಿ ಜನ ಸಮುದಾಯ ಮತ್ತು ಪರಿಸರದ ಮೇಲೆ ಆಗುತ್ತವೆ. ಹೀಗಾಗಿ ನಾಗರಿಕ ಸಮಾಜ ಸರ್ಕಾರದೊಂದಿಗೆ ಕೈಜೋಡಿಸಿ ಮುಂಜಾಗೃತಾ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದರು.<br /> ಸದಾ ಮುಂಜಾಗ್ರತಾ ಕ್ರಮಗಳು ಜಾರಿಯಲ್ಲಿದ್ದರೆ ವಿಪತ್ತಿನ ಪರಿಣಾಮವನ್ನು ಕಡಿಮೆಗೊಳಿಸಬಹುದು ಎಂದು ಹೇಳಿದರು.<br /> <br /> ನಗರದ ಸರ್ಕಲ್ ಇನ್ಸ್ಪೆಕ್ಟರ್ ಸುಬ್ರಹ್ಮಣ್ಯ ಮಾತನಾಡಿ, ವಿಪತ್ತುಗಳನ್ನು ಎದುರಿಸುವ ಮತ್ತು ಕಡಿಮೆಗೊಳಿಸುವ ಕುರಿತು ಸಾರ್ವತ್ರಿಕ ಅರಿವು ಮೂಡಿಸಬೇಕಿದೆ. ವಿಪತ್ತುಗಳು ಎದುರಾದ ಸನ್ನಿವೇಶದಲ್ಲಿ ಜನ ಸಮುದಾಯದ ಹೊಣೆಗಾರಿಕೆ ಮತ್ತು ಜವಾಬ್ದಾರಿಗಳ ಬಗ್ಗೆ ಅವರಲ್ಲಿ ತಿಳಿ ಹೇಳುವ ಕಾರ್ಯವೂ ಹೆಚ್ಚಾಗಿ ನಡೆಯಬೇಕಿದೆ ಎಂದು ತಿಳಿಸಿದರು.<br /> <br /> ಗೃಹ ರಕ್ಷಕ ದಳದ ಜಿಲ್ಲಾ ಸಮಾದೇಷ್ಠಿ ಕೆ.ಕೆಂಪಯ್ಯ ಮಾತನಾಡಿ, ವಿಪತ್ತುಗಳ ಸಂದರ್ಭದಲ್ಲಿ ಜನರು ಆತಂಕಕ್ಕೆ ಒಳಗಾಗಬಾರದು. ಪರಿಸ್ಥಿತಿ ಬಿಗಡಾಯಿಸದಂತೆ ಕ್ರಮಗಳನ್ನು ಕೈಗೊಂಡು ಪೊಲೀಸ್ ಮತ್ತು ಅಗ್ನಿಶಾಮಕ ದಳದವರಿಗೆ ಮಾಹಿತಿ ನೀಡಬೇಕು. ವಿಪತ್ತು ಸಂಭವಿಸುವ ಮುನ್ನ ಹಾಗೂ ಆ ನಂತರದ ಪರಿಸ್ಥಿತಿಗಳನ್ನು ಎದುರಿಸಲು ಕ್ರಿಯಾ ಯೋಜನೆ, ಸುಧಾರಣೆ ಮತ್ತು ತಾತ್ಕಾಲಿಕ ಪರಿಹಾರ ಸಿದ್ಧಪಡಿಸಿಟ್ಟುಕೊಳ್ಳಬೇಕು ಎಂದರು. ಜಿಲ್ಲೆಯಲ್ಲಿ ಅನಾಹುತಗಳು ಸಂಭವಿಸಿದಾಗ ದೂ. ಸಂ: 080-–27272265 ಸಂಪರ್ಕಿಸಬಹುದು ಎಂದರು.<br /> <br /> ರಾಜ್ಯ ಮಟ್ಟದ ಕ್ರೀಡಾಕೂಟದಲ್ಲಿ ವಿಜೇತರಾದ ಸವಿತಾ ಅವರನ್ನು ಸನ್ಮಾನಿಸಲಾಯಿತು. ವಿವಿಧ ಶಾಲೆಗಳ ವಿದ್ಯಾರ್ಥಿಗಳು ನಗರದ ಪ್ರಮುಖ ರಸ್ತೆಗಳಲ್ಲಿ ಜಾಗೃತಿ ನಡೆಸಿದರು.</p>.<p>ದೈಹಿಕ ಶಿಕ್ಷಣ ಪರಿವೀಕ್ಷಕ ನೀಲಕಂಠಸ್ವಾಮಿ, ವಿಜಯ್ ಕುಮಾರ್, ವಾರ್ತಾ ಇಲಾಖೆಯ ಸಹಾಯಕ ನಿರ್ದೇಶಕ ಹಮೀದ್ಖಾನ್, ಪ್ರಾದೇಶಿಕ ಅಗ್ನಿಶಾಮಕ ಅಧಿಕಾರಿ ಗುರುಲಿಂಗಯ್ಯ, ಸಹಾಯಕ ಅಗ್ನಿಶಾಮಕ ಸಹಾಯಕ ಅಧಿಕಾರಿ ರಾಜೇಂದ್ರಸಿಂಗ್ ಮತ್ತಿರರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಮನಗರ: </strong>ವಿಪತ್ತು ನಿಯಂತ್ರಿಸುವ ಕುರಿತು ನೀಡಲಾಗುತ್ತಿರುವ ತರಬೇತಿಯನ್ನು ಪಡೆಯಲು ಜಿಲ್ಲೆಯ ವಿವಿಧ ಇಲಾಖೆಗಳ ಅಧಿಕಾರಿಗಳು ಆಸಕ್ತಿ ತೋರುತ್ತಿಲ್ಲ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಎ.ಬಿ. ಬಸವರಾಜು ಅಸಮಾಧಾನ ವ್ಯಕ್ತಪಡಿಸಿದರು.<br /> <br /> ನಗರದ ಮಿನಿ ವಿಧಾನಸೌದ ಆವರಣದಲ್ಲಿ ಜಿಲ್ಲಾ ಗೃಹ ರಕ್ಷಕ ದಳ ಸೋಮವಾರ ಹಮ್ಮಿಕೊಂಡಿದ್ದ ರಾಷ್ಟ್ರೀಯ ವಿಪತ್ತು ನಿಯಂತ್ರಣಾ ದಿನಾಚರಣೆಗೆ ಚಾಲನೆ ನೀಡಿ ಅವರು ಮಾತನಾಡಿದರು.<br /> <br /> ‘ತಮ್ಮ ಕಚೇರಿಯಲ್ಲಿ ಹೆಚ್ಚು ಕೆಲಸವಿದೆ. ಸಭೆ, ಸಮಾರಂಭಗಳಿಗೆ ಹೋಗಬೇಕು. ಕ್ಷೇತ್ರ ಕಾರ್ಯಕ್ಕೆ ಹೋಗಬೇಕು. ಕೋರ್ಟ್ ಪ್ರಕರಣಗಳಿಗೆ ತೆರಳಬೇಕು ಎಂಬ ಕಾರಣಗಳನ್ನು ನೀಡುವ ಮೂಲಕ ಅಧಿಕಾರಿಗಳು ತರಬೇತಿಗೆ ಹಾಜರಾಗುತ್ತಿಲ್ಲ’ ಎಂದು ಅವರು ದೂರಿದರು.<br /> <br /> ಆಕಸ್ಮಿಕವಾಗಿ ಎದುರಾಗು ವಿಪತ್ತುಗಳ ಸಮರ್ಥವಾಗಿ ಎದುರಿಸಲು ನಾಗರಿಕರು ಸಹ ಸನ್ನದರಾಗಿರಬೇಕು. ವಿಪತ್ತುಗಳು ನೈಸರ್ಗಿಕವಾಗಿರಲಿ, ಮಾನವ ನಿರ್ಮಿತವಾಗಿರಲಿ ಅವುಗಳ ಪರಿಣಾಮ ನೇರವಾಗಿ ಜನ ಸಮುದಾಯ ಮತ್ತು ಪರಿಸರದ ಮೇಲೆ ಆಗುತ್ತವೆ. ಹೀಗಾಗಿ ನಾಗರಿಕ ಸಮಾಜ ಸರ್ಕಾರದೊಂದಿಗೆ ಕೈಜೋಡಿಸಿ ಮುಂಜಾಗೃತಾ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದರು.<br /> ಸದಾ ಮುಂಜಾಗ್ರತಾ ಕ್ರಮಗಳು ಜಾರಿಯಲ್ಲಿದ್ದರೆ ವಿಪತ್ತಿನ ಪರಿಣಾಮವನ್ನು ಕಡಿಮೆಗೊಳಿಸಬಹುದು ಎಂದು ಹೇಳಿದರು.<br /> <br /> ನಗರದ ಸರ್ಕಲ್ ಇನ್ಸ್ಪೆಕ್ಟರ್ ಸುಬ್ರಹ್ಮಣ್ಯ ಮಾತನಾಡಿ, ವಿಪತ್ತುಗಳನ್ನು ಎದುರಿಸುವ ಮತ್ತು ಕಡಿಮೆಗೊಳಿಸುವ ಕುರಿತು ಸಾರ್ವತ್ರಿಕ ಅರಿವು ಮೂಡಿಸಬೇಕಿದೆ. ವಿಪತ್ತುಗಳು ಎದುರಾದ ಸನ್ನಿವೇಶದಲ್ಲಿ ಜನ ಸಮುದಾಯದ ಹೊಣೆಗಾರಿಕೆ ಮತ್ತು ಜವಾಬ್ದಾರಿಗಳ ಬಗ್ಗೆ ಅವರಲ್ಲಿ ತಿಳಿ ಹೇಳುವ ಕಾರ್ಯವೂ ಹೆಚ್ಚಾಗಿ ನಡೆಯಬೇಕಿದೆ ಎಂದು ತಿಳಿಸಿದರು.<br /> <br /> ಗೃಹ ರಕ್ಷಕ ದಳದ ಜಿಲ್ಲಾ ಸಮಾದೇಷ್ಠಿ ಕೆ.ಕೆಂಪಯ್ಯ ಮಾತನಾಡಿ, ವಿಪತ್ತುಗಳ ಸಂದರ್ಭದಲ್ಲಿ ಜನರು ಆತಂಕಕ್ಕೆ ಒಳಗಾಗಬಾರದು. ಪರಿಸ್ಥಿತಿ ಬಿಗಡಾಯಿಸದಂತೆ ಕ್ರಮಗಳನ್ನು ಕೈಗೊಂಡು ಪೊಲೀಸ್ ಮತ್ತು ಅಗ್ನಿಶಾಮಕ ದಳದವರಿಗೆ ಮಾಹಿತಿ ನೀಡಬೇಕು. ವಿಪತ್ತು ಸಂಭವಿಸುವ ಮುನ್ನ ಹಾಗೂ ಆ ನಂತರದ ಪರಿಸ್ಥಿತಿಗಳನ್ನು ಎದುರಿಸಲು ಕ್ರಿಯಾ ಯೋಜನೆ, ಸುಧಾರಣೆ ಮತ್ತು ತಾತ್ಕಾಲಿಕ ಪರಿಹಾರ ಸಿದ್ಧಪಡಿಸಿಟ್ಟುಕೊಳ್ಳಬೇಕು ಎಂದರು. ಜಿಲ್ಲೆಯಲ್ಲಿ ಅನಾಹುತಗಳು ಸಂಭವಿಸಿದಾಗ ದೂ. ಸಂ: 080-–27272265 ಸಂಪರ್ಕಿಸಬಹುದು ಎಂದರು.<br /> <br /> ರಾಜ್ಯ ಮಟ್ಟದ ಕ್ರೀಡಾಕೂಟದಲ್ಲಿ ವಿಜೇತರಾದ ಸವಿತಾ ಅವರನ್ನು ಸನ್ಮಾನಿಸಲಾಯಿತು. ವಿವಿಧ ಶಾಲೆಗಳ ವಿದ್ಯಾರ್ಥಿಗಳು ನಗರದ ಪ್ರಮುಖ ರಸ್ತೆಗಳಲ್ಲಿ ಜಾಗೃತಿ ನಡೆಸಿದರು.</p>.<p>ದೈಹಿಕ ಶಿಕ್ಷಣ ಪರಿವೀಕ್ಷಕ ನೀಲಕಂಠಸ್ವಾಮಿ, ವಿಜಯ್ ಕುಮಾರ್, ವಾರ್ತಾ ಇಲಾಖೆಯ ಸಹಾಯಕ ನಿರ್ದೇಶಕ ಹಮೀದ್ಖಾನ್, ಪ್ರಾದೇಶಿಕ ಅಗ್ನಿಶಾಮಕ ಅಧಿಕಾರಿ ಗುರುಲಿಂಗಯ್ಯ, ಸಹಾಯಕ ಅಗ್ನಿಶಾಮಕ ಸಹಾಯಕ ಅಧಿಕಾರಿ ರಾಜೇಂದ್ರಸಿಂಗ್ ಮತ್ತಿರರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>