<p><strong>ಕನಕಪುರ:</strong> ನ್ಯಾಯಾಲಯ ಆವರಣದಲ್ಲಿ ಗುರುವಾರ ನಡೆದ ಎಚ್ಐವಿ ಜಾಗೃತಿ ಜಾಥೆಗೆ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ಎಚ್.ಎನ್.ಕುಮಾರ್ ಚಾಲನೆ ನೀಡಿದರು.</p>.<p>ಉತ್ತಮ ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ಎಲ್ಲರೂ ಆರೋಗ್ಯಕರ ಜೀವನಶೈಲಿ ಅಳವಡಿಸಿಕೊಳ್ಳಬೇಕು. ಎಚ್ಐವಿ ಬಗ್ಗೆ ಜನರಲ್ಲಿ ತಿಳಿವಳಿಕೆ ಮೂಡಿಸಲು ಈ ಜಾಥಾ ಏರ್ಪಡಿಸಲಾಗಿದೆ ಎಂದು ತಿಳಿಸಿದರು.</p>.<p>ಐಪಿಪಿ ಆಸ್ಪತ್ರೆ ಆಡಳಿತ ಅಧಿಕಾರಿ ಡಾ.ಪ್ರಥಿಮಾ, ಎಚ್ಐವಿ ವೈರಸ್ ಮನುಷ್ಯನ ರೋಗ ನಿರೋಧಕ ಶಕ್ತಿಯನ್ನು ನಾಶಪಡಿಸುತ್ತದೆ. ಸೋಂಕಿತರಿಗೆ ಸರ್ಕಾರಿ ಆಸ್ಪತ್ರೆಗಳಲ್ಲಿ ಗೌಪ್ಯತೆ ಮತ್ತು ಉಚಿತ ಚಿಕಿತ್ಸೆ ಲಭ್ಯವಿದೆ ಎಂದು ಹೇಳಿದರು.</p>.<p>ವಿದ್ಯಾರ್ಥಿಗಳು ಬೀದಿಗಳಲ್ಲಿ ಬಿತ್ತಿ ಪತ್ರ ಹಂಚಿ ಜಾಗೃತಿ ಮೂಡಿಸಿದರು.</p>.<p><br />ಕನಕಪುರ: ಕಾನೂನು ಸೇವಾ ಸಮಿತಿ ಮತ್ತು ವಕೀಲರ ಸಂಘ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಹಯೋಗದಲ್ಲಿ ನ್ಯಾಯಾಲಯದ ಆವರಣದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಏಡ್ಸ್ ಜಾಗೃತಿ ಜಾಥಕ್ಕೆ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಎಚ್.ಎನ್.ಕುಮಾರ್ ಚಾಲನೆ ನೀಡಿದರು.</p>.<p>ಈ ವೇಳೆ ಅವರು ಮಾತನಾಡಿ ಉತ್ತಮ ಆರೋಗ್ಯವಂತ ಸಮಾಜ ನಿರ್ಮಾಣವಾಗಬೇಕಾದರೆ ಎಲ್ಲರೂ ಆರೋಗ್ಯವಂತ ರಾಗಿರಬೇಕು, ಉತ್ತಮ ಜೀವನ ಶೈಲಿಯನ್ನು ರೂಡಿಸಿಕೊಳ್ಳಬೇಕೆಂದು ತಿಳಿಸಿದರು.</p>.<p>ಏಡ್ಸ್ ಮುಕ್ತ ಸಮಾಜ ಮಾಡಬೇಕಾದರೆ ಇದರ ಬಗ್ಗೆ ಪ್ರತಿಯೊಬ್ಬರಿಗೂ ಅರಿವಿರಬೇಕು, ಜನರಲ್ಲಿ ಇದರ ಬಗ್ಗೆ ಜಾಗೃತಿ ಇರಬೇಕು ಅದಕ್ಕಾಗಿ ಜಾಗೃತಿ ಮೂಡಿಸಲು ಇಂದು ಜಾಗೃತಿ ಜಾಥವನ್ನು ನಡೆಸಲಾಗುತ್ತಿದೆ ಎಂದು ಹೇಳಿದರು.</p>.<p>ಐಪಿಪಿ ಆಸ್ಪತ್ರೆ ಆಡಳಿತ ಅಧಿಕಾರಿ ಡಾ.ಪ್ರಥಿಮಾ ಮಾತನಾಡಿ ಎಚ್ಐವಿ ವೈರಸ್ ಮನುಷ್ಯನ ರೋಗ ನಿರೋಧಕ ಶಕ್ತಿಯನ್ನು ನಾಶಗೊಳಿಸುತ್ತಾ ಹೋಗುತ್ತದೆ. ಈ ಕಾಯಿಲೆಯನ್ನು ಸಂಪೂರ್ಣವಾಗಿ ಗುಣಪಡಿಸಲು ಸಾಧ್ಯವಿಲ್ಲ, ಸೋಂಕಿತರಿಗೆ ಸರ್ಕಾರಿ ಆಸ್ಪತ್ರೆಗಳಲ್ಲಿ ಗೌಪ್ಯ ಮತ್ತು ಉಚಿತವಾಗಿ ಚಿಕಿತ್ಸೆ ನೀಡಲಾಗುತ್ತದೆ ಎಂದು ತಿಳಿಸಿದರು.</p>.<p>ಕಾಲೇಜು ವಿದ್ಯಾರ್ಥಿಗಳು ಏಡ್ಸ್ ಜಾಗೃತಿಯ ಬಿತ್ತಿ ಪತ್ರಗಳನ್ನು ಕೈಯಲ್ಲಿ ಹಿಡಿದು ಮುಖ್ಯ ರಸ್ತೆಯಲ್ಲಿ ಜಾಗೃತಿ ಮೂಡಿಸಿದರು.</p>.<p>ಹಿರಿಯ ಸಿವಿಲ್ ನ್ಯಾಯಾಧೀಶರಾದ ಕೆ.ಎ.ನಾಗೇಶ್, ಎಸ್.ರಾಧ, ಎರಡನೇ ಸಿವಿಲ್ ನ್ಯಾಯಾಧೀಶ ವಿನಯ್ ವಿ ಕುಂದಾಪುರ, ಮೂರನೆ ಹೆಚ್ಚುವರಿ ಸಿವಿಲ್ ನ್ಯಾಯಾಧೀಶ ರವಿಪ್ರಕಾಶ್ ತಿಪ್ಪಣ್ಣ, ವಕೀಲರ ಸಂಘದ ಸಿದ್ದಾರ್ಥ್, ನಾರಾಯಣ್, ಗೋಪಾಲ್ ಗೌಡ, ವಕೀಲರಾದ ಎಸ್ ಪಿ ವೀರಪ್ಪ, ಕಾಮೇಶ್ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕನಕಪುರ:</strong> ನ್ಯಾಯಾಲಯ ಆವರಣದಲ್ಲಿ ಗುರುವಾರ ನಡೆದ ಎಚ್ಐವಿ ಜಾಗೃತಿ ಜಾಥೆಗೆ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ಎಚ್.ಎನ್.ಕುಮಾರ್ ಚಾಲನೆ ನೀಡಿದರು.</p>.<p>ಉತ್ತಮ ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ಎಲ್ಲರೂ ಆರೋಗ್ಯಕರ ಜೀವನಶೈಲಿ ಅಳವಡಿಸಿಕೊಳ್ಳಬೇಕು. ಎಚ್ಐವಿ ಬಗ್ಗೆ ಜನರಲ್ಲಿ ತಿಳಿವಳಿಕೆ ಮೂಡಿಸಲು ಈ ಜಾಥಾ ಏರ್ಪಡಿಸಲಾಗಿದೆ ಎಂದು ತಿಳಿಸಿದರು.</p>.<p>ಐಪಿಪಿ ಆಸ್ಪತ್ರೆ ಆಡಳಿತ ಅಧಿಕಾರಿ ಡಾ.ಪ್ರಥಿಮಾ, ಎಚ್ಐವಿ ವೈರಸ್ ಮನುಷ್ಯನ ರೋಗ ನಿರೋಧಕ ಶಕ್ತಿಯನ್ನು ನಾಶಪಡಿಸುತ್ತದೆ. ಸೋಂಕಿತರಿಗೆ ಸರ್ಕಾರಿ ಆಸ್ಪತ್ರೆಗಳಲ್ಲಿ ಗೌಪ್ಯತೆ ಮತ್ತು ಉಚಿತ ಚಿಕಿತ್ಸೆ ಲಭ್ಯವಿದೆ ಎಂದು ಹೇಳಿದರು.</p>.<p>ವಿದ್ಯಾರ್ಥಿಗಳು ಬೀದಿಗಳಲ್ಲಿ ಬಿತ್ತಿ ಪತ್ರ ಹಂಚಿ ಜಾಗೃತಿ ಮೂಡಿಸಿದರು.</p>.<p><br />ಕನಕಪುರ: ಕಾನೂನು ಸೇವಾ ಸಮಿತಿ ಮತ್ತು ವಕೀಲರ ಸಂಘ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಹಯೋಗದಲ್ಲಿ ನ್ಯಾಯಾಲಯದ ಆವರಣದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಏಡ್ಸ್ ಜಾಗೃತಿ ಜಾಥಕ್ಕೆ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಎಚ್.ಎನ್.ಕುಮಾರ್ ಚಾಲನೆ ನೀಡಿದರು.</p>.<p>ಈ ವೇಳೆ ಅವರು ಮಾತನಾಡಿ ಉತ್ತಮ ಆರೋಗ್ಯವಂತ ಸಮಾಜ ನಿರ್ಮಾಣವಾಗಬೇಕಾದರೆ ಎಲ್ಲರೂ ಆರೋಗ್ಯವಂತ ರಾಗಿರಬೇಕು, ಉತ್ತಮ ಜೀವನ ಶೈಲಿಯನ್ನು ರೂಡಿಸಿಕೊಳ್ಳಬೇಕೆಂದು ತಿಳಿಸಿದರು.</p>.<p>ಏಡ್ಸ್ ಮುಕ್ತ ಸಮಾಜ ಮಾಡಬೇಕಾದರೆ ಇದರ ಬಗ್ಗೆ ಪ್ರತಿಯೊಬ್ಬರಿಗೂ ಅರಿವಿರಬೇಕು, ಜನರಲ್ಲಿ ಇದರ ಬಗ್ಗೆ ಜಾಗೃತಿ ಇರಬೇಕು ಅದಕ್ಕಾಗಿ ಜಾಗೃತಿ ಮೂಡಿಸಲು ಇಂದು ಜಾಗೃತಿ ಜಾಥವನ್ನು ನಡೆಸಲಾಗುತ್ತಿದೆ ಎಂದು ಹೇಳಿದರು.</p>.<p>ಐಪಿಪಿ ಆಸ್ಪತ್ರೆ ಆಡಳಿತ ಅಧಿಕಾರಿ ಡಾ.ಪ್ರಥಿಮಾ ಮಾತನಾಡಿ ಎಚ್ಐವಿ ವೈರಸ್ ಮನುಷ್ಯನ ರೋಗ ನಿರೋಧಕ ಶಕ್ತಿಯನ್ನು ನಾಶಗೊಳಿಸುತ್ತಾ ಹೋಗುತ್ತದೆ. ಈ ಕಾಯಿಲೆಯನ್ನು ಸಂಪೂರ್ಣವಾಗಿ ಗುಣಪಡಿಸಲು ಸಾಧ್ಯವಿಲ್ಲ, ಸೋಂಕಿತರಿಗೆ ಸರ್ಕಾರಿ ಆಸ್ಪತ್ರೆಗಳಲ್ಲಿ ಗೌಪ್ಯ ಮತ್ತು ಉಚಿತವಾಗಿ ಚಿಕಿತ್ಸೆ ನೀಡಲಾಗುತ್ತದೆ ಎಂದು ತಿಳಿಸಿದರು.</p>.<p>ಕಾಲೇಜು ವಿದ್ಯಾರ್ಥಿಗಳು ಏಡ್ಸ್ ಜಾಗೃತಿಯ ಬಿತ್ತಿ ಪತ್ರಗಳನ್ನು ಕೈಯಲ್ಲಿ ಹಿಡಿದು ಮುಖ್ಯ ರಸ್ತೆಯಲ್ಲಿ ಜಾಗೃತಿ ಮೂಡಿಸಿದರು.</p>.<p>ಹಿರಿಯ ಸಿವಿಲ್ ನ್ಯಾಯಾಧೀಶರಾದ ಕೆ.ಎ.ನಾಗೇಶ್, ಎಸ್.ರಾಧ, ಎರಡನೇ ಸಿವಿಲ್ ನ್ಯಾಯಾಧೀಶ ವಿನಯ್ ವಿ ಕುಂದಾಪುರ, ಮೂರನೆ ಹೆಚ್ಚುವರಿ ಸಿವಿಲ್ ನ್ಯಾಯಾಧೀಶ ರವಿಪ್ರಕಾಶ್ ತಿಪ್ಪಣ್ಣ, ವಕೀಲರ ಸಂಘದ ಸಿದ್ದಾರ್ಥ್, ನಾರಾಯಣ್, ಗೋಪಾಲ್ ಗೌಡ, ವಕೀಲರಾದ ಎಸ್ ಪಿ ವೀರಪ್ಪ, ಕಾಮೇಶ್ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>