<p>ಕನಕಪುರ: ಅಗತ್ಯ ಮಾಹಿತಿ ನೀಡುವಲ್ಲಿ ಗ್ರಾಮ ಪಂಚಾಯಿತಿ ಅಧಿಕಾರಿ ನಿರ್ಲಕ್ಷ್ಯ ತೋರುತ್ತಿದ್ದಾರೆ ಎಂದು ಚಾಕನಹಳ್ಳಿ ಗ್ರಾಮ ಪಂಚಾಯಿತಿಯ ವಿರುಪಸಂದ್ರ ಗ್ರಾಮದ ಸದಸ್ಯೆ ಸಾವಿತ್ರಮ್ಮ ಕೋಂ ಮಂಚೇಗೌಡ ಆರೋಪಿಸಿದ್ದಾರೆ.<br /> <br /> ಚಾಕನಹಳ್ಳಿ ಗ್ರಾ.ಪಂ.ಅಭಿವೃದ್ಧಿ ಅಧಿಕಾರಿ ಶಿವಕುಮಾರ್ ಪಂಚಾಯಿತಿಯಲ್ಲಿ ಯಾವುದೇ ವಿಷಯವನ್ನು ಸದಸ್ಯರ ಗಮನಕ್ಕೆ ತಾರದೆ ಮತ್ತು ಅಭಿಪ್ರಾಯ ಪಡೆಯದೆ ತಾವೇ ಎಲ್ಲವನ್ನೂ ನಿರ್ಧರಿಸುತ್ತಾರೆ. ಆಶ್ರಯ ಮನೆ ಹಂಚಿಕೆಯಲ್ಲಿ ಅವರು ತಾರತಮ್ಯ ಎಸಗಿದ್ದಾರೆ. ಫಲಾನುಭವಿಗಳಿಗೆ ಚೆಕ್ ವಿತರಿಸುವಾಗ ತಲಾ 1 ಸಾವಿರ ರೂಪಾ ಯಿ ಲಂಚ ಪಡೆದಿದ್ದಾರೆ ಎಂದು ಅವರು ಪತ್ರಿಕಾ ಹೇಳಿಕೆಯಲ್ಲಿ ದೂರಿದ್ದಾರೆ.<br /> <br /> `ಪ್ರತಿ ತಿಂಗಳು ನಡೆಯುವ ಸಾಮಾನ್ಯ ಸಭೆ, 6 ತಿಂಗಳಿಗೆ ನಡೆಯುವ ಗ್ರಾಮಸಭೆ, ವಿಶೇಷ ಸಭೆಗೆ ಅವರು ಆಹ್ವಾನ ಪತ್ರಿಕೆಯನ್ನೇ ಕಳಿಸುವುದಿಲ್ಲ. ಸಭೆಗೂ ಆಹ್ವಾನಿಸುವುದಿಲ್ಲ. ಇದರಿಂದ ಪಂಚಾಯಿತಿಯಲ್ಲಿ ಏನು ನಡೆಯುತ್ತಿದೆ ಎಂಬುದೇ ನಮಗೆ ಗೊತ್ತಾಗುತ್ತಿಲ್ಲ.<br /> <br /> ಶಿವಕುಮಾರ್ ಮತ್ತು ಕರವಸೂಲಿಗಾರ ರಾಜು ಇವರಿಬ್ಬರೂ ಪಂಚಾಯಿತಿಯ ಅಧಿಕಾರ ನಡೆಸುತ್ತಿದ್ದಾರೆ. ಜನಪ್ರತಿನಿಧಿಗಳು ನಿಸ್ಸಹಾಯಕರಾಗಿದ್ದಾರೆ~ ಎಂದು ಅವರು ಹೇಳಿಕೆಯಲ್ಲಿ ಅಲವತ್ತುಕೊಂಡಿದ್ದಾರೆ.<br /> <br /> ಪರಿಸ್ಥಿತಿ ಹೀಗೆಯೇ ಮುಂದುವರಿದರೆ ಸದಸ್ಯತ್ವ ಸ್ಥಾನಕ್ಕೆ ರಾಜಿನಾಮೆ ನೀಡುವುದಾಗಿ ಅವರು ತಿಳಿಸಿದ್ದಾರೆ. <br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕನಕಪುರ: ಅಗತ್ಯ ಮಾಹಿತಿ ನೀಡುವಲ್ಲಿ ಗ್ರಾಮ ಪಂಚಾಯಿತಿ ಅಧಿಕಾರಿ ನಿರ್ಲಕ್ಷ್ಯ ತೋರುತ್ತಿದ್ದಾರೆ ಎಂದು ಚಾಕನಹಳ್ಳಿ ಗ್ರಾಮ ಪಂಚಾಯಿತಿಯ ವಿರುಪಸಂದ್ರ ಗ್ರಾಮದ ಸದಸ್ಯೆ ಸಾವಿತ್ರಮ್ಮ ಕೋಂ ಮಂಚೇಗೌಡ ಆರೋಪಿಸಿದ್ದಾರೆ.<br /> <br /> ಚಾಕನಹಳ್ಳಿ ಗ್ರಾ.ಪಂ.ಅಭಿವೃದ್ಧಿ ಅಧಿಕಾರಿ ಶಿವಕುಮಾರ್ ಪಂಚಾಯಿತಿಯಲ್ಲಿ ಯಾವುದೇ ವಿಷಯವನ್ನು ಸದಸ್ಯರ ಗಮನಕ್ಕೆ ತಾರದೆ ಮತ್ತು ಅಭಿಪ್ರಾಯ ಪಡೆಯದೆ ತಾವೇ ಎಲ್ಲವನ್ನೂ ನಿರ್ಧರಿಸುತ್ತಾರೆ. ಆಶ್ರಯ ಮನೆ ಹಂಚಿಕೆಯಲ್ಲಿ ಅವರು ತಾರತಮ್ಯ ಎಸಗಿದ್ದಾರೆ. ಫಲಾನುಭವಿಗಳಿಗೆ ಚೆಕ್ ವಿತರಿಸುವಾಗ ತಲಾ 1 ಸಾವಿರ ರೂಪಾ ಯಿ ಲಂಚ ಪಡೆದಿದ್ದಾರೆ ಎಂದು ಅವರು ಪತ್ರಿಕಾ ಹೇಳಿಕೆಯಲ್ಲಿ ದೂರಿದ್ದಾರೆ.<br /> <br /> `ಪ್ರತಿ ತಿಂಗಳು ನಡೆಯುವ ಸಾಮಾನ್ಯ ಸಭೆ, 6 ತಿಂಗಳಿಗೆ ನಡೆಯುವ ಗ್ರಾಮಸಭೆ, ವಿಶೇಷ ಸಭೆಗೆ ಅವರು ಆಹ್ವಾನ ಪತ್ರಿಕೆಯನ್ನೇ ಕಳಿಸುವುದಿಲ್ಲ. ಸಭೆಗೂ ಆಹ್ವಾನಿಸುವುದಿಲ್ಲ. ಇದರಿಂದ ಪಂಚಾಯಿತಿಯಲ್ಲಿ ಏನು ನಡೆಯುತ್ತಿದೆ ಎಂಬುದೇ ನಮಗೆ ಗೊತ್ತಾಗುತ್ತಿಲ್ಲ.<br /> <br /> ಶಿವಕುಮಾರ್ ಮತ್ತು ಕರವಸೂಲಿಗಾರ ರಾಜು ಇವರಿಬ್ಬರೂ ಪಂಚಾಯಿತಿಯ ಅಧಿಕಾರ ನಡೆಸುತ್ತಿದ್ದಾರೆ. ಜನಪ್ರತಿನಿಧಿಗಳು ನಿಸ್ಸಹಾಯಕರಾಗಿದ್ದಾರೆ~ ಎಂದು ಅವರು ಹೇಳಿಕೆಯಲ್ಲಿ ಅಲವತ್ತುಕೊಂಡಿದ್ದಾರೆ.<br /> <br /> ಪರಿಸ್ಥಿತಿ ಹೀಗೆಯೇ ಮುಂದುವರಿದರೆ ಸದಸ್ಯತ್ವ ಸ್ಥಾನಕ್ಕೆ ರಾಜಿನಾಮೆ ನೀಡುವುದಾಗಿ ಅವರು ತಿಳಿಸಿದ್ದಾರೆ. <br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>