<p>ರಾಮನಗರ: ಕಾನೂನಿನ ಅರಿವಿಲ್ಲದೆ ಜನರು ಕಷ್ಟನಷ್ಟ ಅನುಭವಿಸುತ್ತಿದ್ದು, ಇದನ್ನು ಮನಗಂಡು ಕಾನೂನು ಸೇವಾ ಪ್ರಾಧಿಕಾರದ ಮೂಲಕ ಜನಸಾಮಾನ್ಯರ ಮನೆ ಬಾಗಿಲಿಗೆ ಕಾನೂನಿನ ಪ್ರಾಥಮಿಕ ಜ್ಞಾನವನ್ನು ಮುಟ್ಟಿಸಲಾಗುತ್ತಿದೆ ಎಂದು ಪ್ರಧಾನ ಸಿವಿಲ್ ನ್ಯಾಯಾಧೀಶರಾದ ವಿ.ಪುಷ್ಪಾವತಿ ತಿಳಿಸಿದರು. <br /> <br /> ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ವಕೀಲರ ಸಂಘ ಹಾಗೂ ಜಿಲ್ಲಾ ಕಾರಾಗೃಹದ ಆಶ್ರಯದಲ್ಲಿ ಜಿಲ್ಲಾ ಬಂಧೀಖಾನೆಯಲ್ಲಿ ಹಮ್ಮಿಕೊಂಡಿದ್ದ ಕಾನೂನು ಅರಿವು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಆರೋಪಿಗಳು ಸನ್ಮಾರ್ಗದಲ್ಲಿ ನಡೆದು ಮಾದರಿಯಾದಾಗ ಸಮಾಜದಲ್ಲಿ ನೆಮ್ಮದಿ ಮೂಡುತ್ತದೆ ಎಂದರು.<br /> <br /> ಮಾನಸಿಕ ರೋಗ ಹಾಗೂ ಚಿಕಿತ್ಸೆ ಕುರಿತು ಮಾತನಾಡಿದ ಜಿಲ್ಲಾ ಆಸ್ಪತ್ರೆಯ ಮನೋವೈದ್ಯೆ ರಜನಿ, ಕೋಪ ನಿಗ್ರಹ ಕಲೆಯನ್ನು ಜೀವನದಲ್ಲಿ ಅಳವಡಿಸಿಕೊಳ್ಳುವ ಮೂಲಕ ಅಪರಾಧ ನಿಯಂತ್ರಣಕ್ಕೆ ಮುಂದಾಗಬೇಕು. ಕೋಪವನ್ನು ಕನಿಷ್ಠ ಪ್ರಮಾಣದಲ್ಲಿ ಪ್ರಕಟಿಸುವ ಕೌಶಲವನ್ನು ಅಭ್ಯಾಸ ಮಾಡಬೇಕು ಎಂದು ತಿಳಿಸಿದರು. <br /> <br /> ಕೋಪದಿಂದ ವಿವೇಕ, ವಿವೇಚನೆ ಮಾಯವಾಗಿ ಆಕ್ರಮಣಕಾರಿ ವರ್ತನೆ ಉಂಟಾಗುತ್ತದೆ. ಆ ಮೂಲಕ ಅಪರಾಧ ಚಟುವಟಿಕೆ ಹೆಚ್ಚುತ್ತವೆ. ಇದರಿಂದ ವೈಯಕ್ತಿಕ ನೋವಿನ ಜತೆಗೆ ಇಡೀ ಕುಟುಂಬವೇ ತೊಂದರೆಗೆ ಸಿಲುಕುತ್ತದೆ ಎಂದರು. <br /> <br /> ವಕೀಲರಾದ ಪೂರ್ಣಿಮಾ ಮಾತನಾಡಿದರು. ಆಪಾದನೆಯ ರಾಜಿ ಕುರಿತು ವಕೀಲ ಆರ್.ಚಂದ್ರಶೇಖರ್ ಉಪನ್ಯಾಸ ನೀಡಿದರು. ಕಾರಾಗೃಹದ ಅಧೀಕ್ಷಕಿ ಆರ್.ಲತಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.<br /> <br /> ಜೈಲರ್ ಶಿವಕುಮಾರ್, ವಾರ್ಡನ್ ಕೆ.ಟಿ.ಸೊಣ್ಣೇಗೌಡ, ರಮೇಶ್, ಬಸವರಾಜ್ ಕರೀಕಾರ್, ಸುಲೋಚನಾ, ಸವಿತಾ, ರತ್ನಮ್ಮ, ನ್ಯಾಯಾಲಯದ ಸಿಬ್ಬಂದಿ ಕೃಷ್ಣಸ್ವಾಮಿ, ನೇತ್ರಾವತಿ ಶಿವರಾಜ್, ಹನೀಫ್ ಇತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ರಾಮನಗರ: ಕಾನೂನಿನ ಅರಿವಿಲ್ಲದೆ ಜನರು ಕಷ್ಟನಷ್ಟ ಅನುಭವಿಸುತ್ತಿದ್ದು, ಇದನ್ನು ಮನಗಂಡು ಕಾನೂನು ಸೇವಾ ಪ್ರಾಧಿಕಾರದ ಮೂಲಕ ಜನಸಾಮಾನ್ಯರ ಮನೆ ಬಾಗಿಲಿಗೆ ಕಾನೂನಿನ ಪ್ರಾಥಮಿಕ ಜ್ಞಾನವನ್ನು ಮುಟ್ಟಿಸಲಾಗುತ್ತಿದೆ ಎಂದು ಪ್ರಧಾನ ಸಿವಿಲ್ ನ್ಯಾಯಾಧೀಶರಾದ ವಿ.ಪುಷ್ಪಾವತಿ ತಿಳಿಸಿದರು. <br /> <br /> ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ವಕೀಲರ ಸಂಘ ಹಾಗೂ ಜಿಲ್ಲಾ ಕಾರಾಗೃಹದ ಆಶ್ರಯದಲ್ಲಿ ಜಿಲ್ಲಾ ಬಂಧೀಖಾನೆಯಲ್ಲಿ ಹಮ್ಮಿಕೊಂಡಿದ್ದ ಕಾನೂನು ಅರಿವು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಆರೋಪಿಗಳು ಸನ್ಮಾರ್ಗದಲ್ಲಿ ನಡೆದು ಮಾದರಿಯಾದಾಗ ಸಮಾಜದಲ್ಲಿ ನೆಮ್ಮದಿ ಮೂಡುತ್ತದೆ ಎಂದರು.<br /> <br /> ಮಾನಸಿಕ ರೋಗ ಹಾಗೂ ಚಿಕಿತ್ಸೆ ಕುರಿತು ಮಾತನಾಡಿದ ಜಿಲ್ಲಾ ಆಸ್ಪತ್ರೆಯ ಮನೋವೈದ್ಯೆ ರಜನಿ, ಕೋಪ ನಿಗ್ರಹ ಕಲೆಯನ್ನು ಜೀವನದಲ್ಲಿ ಅಳವಡಿಸಿಕೊಳ್ಳುವ ಮೂಲಕ ಅಪರಾಧ ನಿಯಂತ್ರಣಕ್ಕೆ ಮುಂದಾಗಬೇಕು. ಕೋಪವನ್ನು ಕನಿಷ್ಠ ಪ್ರಮಾಣದಲ್ಲಿ ಪ್ರಕಟಿಸುವ ಕೌಶಲವನ್ನು ಅಭ್ಯಾಸ ಮಾಡಬೇಕು ಎಂದು ತಿಳಿಸಿದರು. <br /> <br /> ಕೋಪದಿಂದ ವಿವೇಕ, ವಿವೇಚನೆ ಮಾಯವಾಗಿ ಆಕ್ರಮಣಕಾರಿ ವರ್ತನೆ ಉಂಟಾಗುತ್ತದೆ. ಆ ಮೂಲಕ ಅಪರಾಧ ಚಟುವಟಿಕೆ ಹೆಚ್ಚುತ್ತವೆ. ಇದರಿಂದ ವೈಯಕ್ತಿಕ ನೋವಿನ ಜತೆಗೆ ಇಡೀ ಕುಟುಂಬವೇ ತೊಂದರೆಗೆ ಸಿಲುಕುತ್ತದೆ ಎಂದರು. <br /> <br /> ವಕೀಲರಾದ ಪೂರ್ಣಿಮಾ ಮಾತನಾಡಿದರು. ಆಪಾದನೆಯ ರಾಜಿ ಕುರಿತು ವಕೀಲ ಆರ್.ಚಂದ್ರಶೇಖರ್ ಉಪನ್ಯಾಸ ನೀಡಿದರು. ಕಾರಾಗೃಹದ ಅಧೀಕ್ಷಕಿ ಆರ್.ಲತಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.<br /> <br /> ಜೈಲರ್ ಶಿವಕುಮಾರ್, ವಾರ್ಡನ್ ಕೆ.ಟಿ.ಸೊಣ್ಣೇಗೌಡ, ರಮೇಶ್, ಬಸವರಾಜ್ ಕರೀಕಾರ್, ಸುಲೋಚನಾ, ಸವಿತಾ, ರತ್ನಮ್ಮ, ನ್ಯಾಯಾಲಯದ ಸಿಬ್ಬಂದಿ ಕೃಷ್ಣಸ್ವಾಮಿ, ನೇತ್ರಾವತಿ ಶಿವರಾಜ್, ಹನೀಫ್ ಇತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>