<p><strong>ರಾಮನಗರ:</strong> ಹೇಮಾವತಿಯಿಂದ ನೀರು ಹರಿಸಿ ಮಾಗಡಿಯ ಕೆರೆಗಳನ್ನು ತುಂಬಿಸುವ ಪ್ರಸ್ತಾವನೆ ಬಹಳ ಹಿಂದಿನಿಂದಲೂ ಇತ್ತು. ಇದನ್ನು ಕಾಂಗ್ರೆಸ್ ಪಕ್ಷ ತನ್ನ ಸಾಧನೆ ಎಂದು ಬೀಗುವ ಅಗತ್ಯವಿಲ್ಲ’ ಎಂದು ಮಾಗಡಿ ಶಾಸಕ ಎಚ್.ಸಿ.ಬಾಲಕೃಷ್ಣ ಹೇಳಿದರು.<br /> <br /> ಹೋಬಳಿಯ ಹೆಜ್ಜಾಲದಲ್ಲಿ ಶಾಸಕರ ನಿಧಿಯಿಂದ ರೂ 12 ಲಕ್ಷ ವೆಚ್ಚದಲ್ಲಿ ನಿರ್ಮಿಸಲಿರುವ ಶುದ್ಧ ನೀರಿನ ಘಟಕಕ್ಕೆ ಗುದ್ದಲಿ ಪೂಜೆ ನೆರವೇರಿಸಿದ ಬಳಿಕ ಅವರು ಸುದ್ದಿಗಾರರ ಜತೆ ಮಾತನಾಡಿದರು.<br /> <br /> ಹೆೇಮಾವತಿಯಿಂದ ನೀರು ತಂದು ಮಾಗಡಿ ವ್ಯಾಪ್ತಿಯ 89 ಕೆರೆಗಳನ್ನು ತುಂಬಿಸುವ ನಿರ್ಧಾರ ಇಂದು ನಿನ್ನೆಯದಲ್ಲ. 1993-94ರಲ್ಲಿ ಅಂದಿನ ವಿಧಾನ ಪರಿಷತ್ ಸದಸ್ಯ ಟಿ.ಎ.ರಂಗಯ್ಯ ಅವರು ಪ್ರಥಮವಾಗಿ ಶ್ರೀರಂಗ ಯೋಜನೆ ಕೈಗೊಳ್ಳಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದರು ಎಂದು ತಿಳಿಸಿದರು.<br /> <br /> ಹಿಂದೆ ವೀರಪ್ಪಮೊಯಿಲಿ ಅವರ ಸರ್ಕಾರದಲ್ಲಿ ನನ್ನನ್ನೂ ಒಳಗೊಂಡಂತೆ ಯೋಜನಾ ಸಮಿತಿ ರಚಿಸಲಾಗಿತ್ತು. ನಂತರದ ದಿನಗಳಲ್ಲಿ ಬಂದ ಎಸ್.ಎಂ.ಕೃಷ್ಣ ಅವರ ಸರ್ಕಾರದ ಅವಧಿಯಲ್ಲಿ ತಮ್ಮನ್ನು ಸಮಿತಿಯಿಂದ ಕೈಬಿಡಲಾಯಿತು. ನಂತರದ ಬಂದ ಸರ್ಕಾರಗಳಲ್ಲಿ ಯೋಜನೆ ಅನುಷ್ಠಾನಕ್ಕೆ ಮುಂದಾಗಿರಲಿಲ್ಲ ಎಂದು ಅವರು ವಿವರಿಸಿದರು.<br /> <br /> ಹಿಂದಿನ ಬಿಜೆಪಿ ಸರ್ಕಾರದಲ್ಲಿ ನೀರಾವರಿ ಸಚಿವರಾಗಿದ್ದ ಬಸವರಾಜ ಬೊಮ್ಮಾಯಿ ಅವರಿಗೂ ಅನೇಕ ಬಾರಿ ಈ ಬಗ್ಗೆ ಮನವಿ ಸಲ್ಲಿಸಲಾಗಿತ್ತು. ಆದರೆ ಸರ್ಕಾರ ಇಚ್ಛಾಶಕ್ತಿ ಕೊರತೆಯಿಂದ ಬೇಡಿಕೆ ನೆರವೇರಲಿಲ್ಲ. ಇದೀಗ ಕಾಂಗ್ರೆಸ್ ಅಧಿಕಾರದಲ್ಲಿ ಅನುಷ್ಠಾನವಾಗುತ್ತಿದ್ದು, ಅದಕ್ಕೆ ಸರ್ಕಾರವನ್ನು ಅಭಿನಂದಿಸುವುದಾಗಿ ಶಾಸಕ ಬಾಲಕೃಷ್ಣ ಹೇಳಿದರು.<br /> <br /> ಮೂರು ವರ್ಷದವರೆಗೆ ಮಾತಾಡಲ್ಲ: ಈ ಯೋಜನೆ ಅನುಷ್ಠಾನ ಕುರಿತು ಸದ್ಯಕ್ಕೆ ಮಾತನಾಡುವುದಿಲ್ಲ. ಮೂರು ವರ್ಷ ಕಾಮಗಾರಿ ಹೇಗೆ ನಡೆಯುತ್ತದೆ ಎಂಬುದನ್ನು ಗಮನಿಸಿ, ಆ ನಂತರ ಮಾತನಾಡುತ್ತೇನೆ ಎಂದು ಅವರು ಪ್ರತಿಕ್ರಿಯಿಸಿದರು.<br /> <br /> ಮಾಜಿ ಶಾಸಕ ಕೆ.ರಾಜು, ಜಿಲ್ಲಾ ಜೆಡಿಎಸ್ ಕಾರ್ಯಾಧ್ಯಕ್ಷ ಬ್ಯಾಟಪ್ಪ, ಪಿಎಲ್ಡಿ ಬ್ಯಾಂಕ್ ನಿರ್ದೇಶಕ ಯು.ನರಸಿಂಹಯ್ಯ, ಗ್ರಾ.ಪಂ ಉಪಾಧ್ಯಕ್ಷ ಕೆಂಪಣ್ಣ, ಮುಖಂಡರಾದ ಶೇಷಪ್ಪ, ಬಿ.ಉಮೇಶ್, ರಾಜಶೇಖರ್, ರಮೇಶ್ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಮನಗರ:</strong> ಹೇಮಾವತಿಯಿಂದ ನೀರು ಹರಿಸಿ ಮಾಗಡಿಯ ಕೆರೆಗಳನ್ನು ತುಂಬಿಸುವ ಪ್ರಸ್ತಾವನೆ ಬಹಳ ಹಿಂದಿನಿಂದಲೂ ಇತ್ತು. ಇದನ್ನು ಕಾಂಗ್ರೆಸ್ ಪಕ್ಷ ತನ್ನ ಸಾಧನೆ ಎಂದು ಬೀಗುವ ಅಗತ್ಯವಿಲ್ಲ’ ಎಂದು ಮಾಗಡಿ ಶಾಸಕ ಎಚ್.ಸಿ.ಬಾಲಕೃಷ್ಣ ಹೇಳಿದರು.<br /> <br /> ಹೋಬಳಿಯ ಹೆಜ್ಜಾಲದಲ್ಲಿ ಶಾಸಕರ ನಿಧಿಯಿಂದ ರೂ 12 ಲಕ್ಷ ವೆಚ್ಚದಲ್ಲಿ ನಿರ್ಮಿಸಲಿರುವ ಶುದ್ಧ ನೀರಿನ ಘಟಕಕ್ಕೆ ಗುದ್ದಲಿ ಪೂಜೆ ನೆರವೇರಿಸಿದ ಬಳಿಕ ಅವರು ಸುದ್ದಿಗಾರರ ಜತೆ ಮಾತನಾಡಿದರು.<br /> <br /> ಹೆೇಮಾವತಿಯಿಂದ ನೀರು ತಂದು ಮಾಗಡಿ ವ್ಯಾಪ್ತಿಯ 89 ಕೆರೆಗಳನ್ನು ತುಂಬಿಸುವ ನಿರ್ಧಾರ ಇಂದು ನಿನ್ನೆಯದಲ್ಲ. 1993-94ರಲ್ಲಿ ಅಂದಿನ ವಿಧಾನ ಪರಿಷತ್ ಸದಸ್ಯ ಟಿ.ಎ.ರಂಗಯ್ಯ ಅವರು ಪ್ರಥಮವಾಗಿ ಶ್ರೀರಂಗ ಯೋಜನೆ ಕೈಗೊಳ್ಳಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದರು ಎಂದು ತಿಳಿಸಿದರು.<br /> <br /> ಹಿಂದೆ ವೀರಪ್ಪಮೊಯಿಲಿ ಅವರ ಸರ್ಕಾರದಲ್ಲಿ ನನ್ನನ್ನೂ ಒಳಗೊಂಡಂತೆ ಯೋಜನಾ ಸಮಿತಿ ರಚಿಸಲಾಗಿತ್ತು. ನಂತರದ ದಿನಗಳಲ್ಲಿ ಬಂದ ಎಸ್.ಎಂ.ಕೃಷ್ಣ ಅವರ ಸರ್ಕಾರದ ಅವಧಿಯಲ್ಲಿ ತಮ್ಮನ್ನು ಸಮಿತಿಯಿಂದ ಕೈಬಿಡಲಾಯಿತು. ನಂತರದ ಬಂದ ಸರ್ಕಾರಗಳಲ್ಲಿ ಯೋಜನೆ ಅನುಷ್ಠಾನಕ್ಕೆ ಮುಂದಾಗಿರಲಿಲ್ಲ ಎಂದು ಅವರು ವಿವರಿಸಿದರು.<br /> <br /> ಹಿಂದಿನ ಬಿಜೆಪಿ ಸರ್ಕಾರದಲ್ಲಿ ನೀರಾವರಿ ಸಚಿವರಾಗಿದ್ದ ಬಸವರಾಜ ಬೊಮ್ಮಾಯಿ ಅವರಿಗೂ ಅನೇಕ ಬಾರಿ ಈ ಬಗ್ಗೆ ಮನವಿ ಸಲ್ಲಿಸಲಾಗಿತ್ತು. ಆದರೆ ಸರ್ಕಾರ ಇಚ್ಛಾಶಕ್ತಿ ಕೊರತೆಯಿಂದ ಬೇಡಿಕೆ ನೆರವೇರಲಿಲ್ಲ. ಇದೀಗ ಕಾಂಗ್ರೆಸ್ ಅಧಿಕಾರದಲ್ಲಿ ಅನುಷ್ಠಾನವಾಗುತ್ತಿದ್ದು, ಅದಕ್ಕೆ ಸರ್ಕಾರವನ್ನು ಅಭಿನಂದಿಸುವುದಾಗಿ ಶಾಸಕ ಬಾಲಕೃಷ್ಣ ಹೇಳಿದರು.<br /> <br /> ಮೂರು ವರ್ಷದವರೆಗೆ ಮಾತಾಡಲ್ಲ: ಈ ಯೋಜನೆ ಅನುಷ್ಠಾನ ಕುರಿತು ಸದ್ಯಕ್ಕೆ ಮಾತನಾಡುವುದಿಲ್ಲ. ಮೂರು ವರ್ಷ ಕಾಮಗಾರಿ ಹೇಗೆ ನಡೆಯುತ್ತದೆ ಎಂಬುದನ್ನು ಗಮನಿಸಿ, ಆ ನಂತರ ಮಾತನಾಡುತ್ತೇನೆ ಎಂದು ಅವರು ಪ್ರತಿಕ್ರಿಯಿಸಿದರು.<br /> <br /> ಮಾಜಿ ಶಾಸಕ ಕೆ.ರಾಜು, ಜಿಲ್ಲಾ ಜೆಡಿಎಸ್ ಕಾರ್ಯಾಧ್ಯಕ್ಷ ಬ್ಯಾಟಪ್ಪ, ಪಿಎಲ್ಡಿ ಬ್ಯಾಂಕ್ ನಿರ್ದೇಶಕ ಯು.ನರಸಿಂಹಯ್ಯ, ಗ್ರಾ.ಪಂ ಉಪಾಧ್ಯಕ್ಷ ಕೆಂಪಣ್ಣ, ಮುಖಂಡರಾದ ಶೇಷಪ್ಪ, ಬಿ.ಉಮೇಶ್, ರಾಜಶೇಖರ್, ರಮೇಶ್ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>