<p><strong>ರಾಮನಗರ</strong>: ‘ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಇಂಗ್ಲಿಷ್ ಭಾಷೆ ಕಲಿಯುವುದು ಅವಶ್ಯಕ’ ಎಂದು ಇಂಗ್ಲಿಷ್ ಭಾಷೆಯ ಸಂವಹನ ತರಬೇತುದಾರರಾದ ಪ್ರೊ. ಗೀತಾ ಶ್ರೀನಿವಾಸನ್ ತಿಳಿಸಿದರು.<br /> <br /> ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಇಂಗ್ಲಿಷ್ ವಿಭಾಗದ ವತಿಯಿಂದ ಹಮ್ಮಿಕೊಂಡಿದ್ದ ‘ಇಂಗ್ಲಿಷ್ ಡೆ, ಇಂಗ್ಲಿಷ್ ಎವರಿಡೆ’ ಎಂಬ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.<br /> <br /> ‘ಎಲ್ಲಾ ಕ್ಷೇತ್ರಗಳಲ್ಲಿಯೂ ಇಂಗ್ಲಿಷ್ ತನ್ನ ಪ್ರಭುತ್ವ ಹೊಂದಿದೆ. ಇಂತಹ ಸಂದರ್ಭದಲ್ಲಿ ಗ್ರಾಮಾಂತರ ಪ್ರದೇಶದ ವಿದ್ಯಾರ್ಥಿಗಳು ತಮ್ಮಲ್ಲಿರುವ ಕೀಳರಿಮೆಯನ್ನು ಬಿಟ್ಟು ಇಂಗ್ಲಿಷ್ ಭಾಷೆ ಕಲಿಯಬೇಕು. ಶಿಕ್ಷಕರು, ಉಪನ್ಯಾಸಕರು ವಿದ್ಯಾರ್ಥಿಗಳಿಗೆ ನೆರವಾಗಬೇಕು’ ಎಂದು ತಿಳಿಸಿದರು.<br /> <br /> ಕಾಲೇಜಿನ ಪ್ರಾಂಶುಪಾಲ ಪ್ರೊ.ಡಿ.ರಂಗಸ್ವಾಮಿ ಗೌಡ ಮಾತನಾಡಿ, ‘ವಿದ್ಯಾರ್ಥಿಗಳು ಇಂಗ್ಲಿಷ್ ಕಠಿಣ ಎಂಬ ಭ್ರಮೆಯನ್ನು ಮೊದಲು ಬಿಡಬೇಕು. ಇಲ್ಲಿ ತರಬೇತುದಾರರು ನೀಡುವ ಸಲಹೆ ಸೂಚನೆಗಳನ್ನು ಅನುಸರಿಸುವ ಮೂಲಕ ಇಂಗ್ಲಿಷ್ ಭಾಷೆಯನ್ನು ಸುಲಭವಾಗಿ ಕಲಿಯಬಹುದು’ ಎಂದು ಹೇಳಿದರು.<br /> <br /> ಇಂಗ್ಲಿಷ್ ವಿಭಾಗದ ಸಹಾಯಕ ಪ್ರಾಧ್ಯಾಪಕ ಕೆ.ಡಿ. ಆನಂದ್ ಮಾತನಾಡಿ, ‘ಭಾಷಾ ಕೌಶಲಗಳಾದ ಆಲಿಸುವುದು, ಮಾತನಾಡುವುದು, ಓದುವುದು, ಬರೆಯುವುದು ಇವುಗಳ ಪರಿಣಾಮಕಾರಿ ಅಭ್ಯಾಸದಿಂದ ಇಂಗ್ಲಿಷ್ ಭಾಷೆಯ ಮೇಲೆ ಹಿಡಿತವನ್ನು ಸಾಧಿಸಬಹುದು’ ಎಂದು ಹೇಳಿದರು.<br /> <br /> ಇಂಗ್ಲಿಷ್ ವಿಭಾಗದ ಮುಖ್ಯಸ್ಥೆ ಡಾ.ಎಸ್. ಶೈಲಜಾ, ಸಹಾಯಕ ಪ್ರಾಧ್ಯಾಪಕಿ ಎಚ್.ಆರ್. ಅನುರಾಧಾ ಇತರರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಮನಗರ</strong>: ‘ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಇಂಗ್ಲಿಷ್ ಭಾಷೆ ಕಲಿಯುವುದು ಅವಶ್ಯಕ’ ಎಂದು ಇಂಗ್ಲಿಷ್ ಭಾಷೆಯ ಸಂವಹನ ತರಬೇತುದಾರರಾದ ಪ್ರೊ. ಗೀತಾ ಶ್ರೀನಿವಾಸನ್ ತಿಳಿಸಿದರು.<br /> <br /> ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಇಂಗ್ಲಿಷ್ ವಿಭಾಗದ ವತಿಯಿಂದ ಹಮ್ಮಿಕೊಂಡಿದ್ದ ‘ಇಂಗ್ಲಿಷ್ ಡೆ, ಇಂಗ್ಲಿಷ್ ಎವರಿಡೆ’ ಎಂಬ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.<br /> <br /> ‘ಎಲ್ಲಾ ಕ್ಷೇತ್ರಗಳಲ್ಲಿಯೂ ಇಂಗ್ಲಿಷ್ ತನ್ನ ಪ್ರಭುತ್ವ ಹೊಂದಿದೆ. ಇಂತಹ ಸಂದರ್ಭದಲ್ಲಿ ಗ್ರಾಮಾಂತರ ಪ್ರದೇಶದ ವಿದ್ಯಾರ್ಥಿಗಳು ತಮ್ಮಲ್ಲಿರುವ ಕೀಳರಿಮೆಯನ್ನು ಬಿಟ್ಟು ಇಂಗ್ಲಿಷ್ ಭಾಷೆ ಕಲಿಯಬೇಕು. ಶಿಕ್ಷಕರು, ಉಪನ್ಯಾಸಕರು ವಿದ್ಯಾರ್ಥಿಗಳಿಗೆ ನೆರವಾಗಬೇಕು’ ಎಂದು ತಿಳಿಸಿದರು.<br /> <br /> ಕಾಲೇಜಿನ ಪ್ರಾಂಶುಪಾಲ ಪ್ರೊ.ಡಿ.ರಂಗಸ್ವಾಮಿ ಗೌಡ ಮಾತನಾಡಿ, ‘ವಿದ್ಯಾರ್ಥಿಗಳು ಇಂಗ್ಲಿಷ್ ಕಠಿಣ ಎಂಬ ಭ್ರಮೆಯನ್ನು ಮೊದಲು ಬಿಡಬೇಕು. ಇಲ್ಲಿ ತರಬೇತುದಾರರು ನೀಡುವ ಸಲಹೆ ಸೂಚನೆಗಳನ್ನು ಅನುಸರಿಸುವ ಮೂಲಕ ಇಂಗ್ಲಿಷ್ ಭಾಷೆಯನ್ನು ಸುಲಭವಾಗಿ ಕಲಿಯಬಹುದು’ ಎಂದು ಹೇಳಿದರು.<br /> <br /> ಇಂಗ್ಲಿಷ್ ವಿಭಾಗದ ಸಹಾಯಕ ಪ್ರಾಧ್ಯಾಪಕ ಕೆ.ಡಿ. ಆನಂದ್ ಮಾತನಾಡಿ, ‘ಭಾಷಾ ಕೌಶಲಗಳಾದ ಆಲಿಸುವುದು, ಮಾತನಾಡುವುದು, ಓದುವುದು, ಬರೆಯುವುದು ಇವುಗಳ ಪರಿಣಾಮಕಾರಿ ಅಭ್ಯಾಸದಿಂದ ಇಂಗ್ಲಿಷ್ ಭಾಷೆಯ ಮೇಲೆ ಹಿಡಿತವನ್ನು ಸಾಧಿಸಬಹುದು’ ಎಂದು ಹೇಳಿದರು.<br /> <br /> ಇಂಗ್ಲಿಷ್ ವಿಭಾಗದ ಮುಖ್ಯಸ್ಥೆ ಡಾ.ಎಸ್. ಶೈಲಜಾ, ಸಹಾಯಕ ಪ್ರಾಧ್ಯಾಪಕಿ ಎಚ್.ಆರ್. ಅನುರಾಧಾ ಇತರರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>