<p><strong>ಚನ್ನಪಟ್ಟಣ:</strong> ಇತ್ತೀಚಿನ ದಿನಗಳಲ್ಲಿ ವಿದ್ಯಾರ್ಥಿಗಳು ದುಶ್ಚಟಕ್ಕೆ ಬಲಿಯಾಗುವುದು ಹೆಚ್ಚಾಗು ತ್ತಿದ್ದು, ಶಿಕ್ಷಕರು ಅಂತಹ ಮಕ್ಕಳನ್ನು ಗಮನಿಸಿ ಅವರನ್ನು ಸರಿದಾರಿಗೆ ತರಲು ಮುಂದಾಗಬೇಕು ಎಂದು ರಾಜ್ಯ ಒಕ್ಕಲಿ ಗರ ಸಂಘದ ಉಪಾಧ್ಯಕ್ಷ ಪ್ರೊ.ಕೆ. ಮಲ್ಲಯ್ಯ ಹೇಳಿದರು.<br /> <br /> ತಾಲ್ಲೂಕಿನ ಮುದಗೆರೆ ನಿಸರ್ಗ ಶಾಲೆ ಯಲ್ಲಿ ಇತ್ತೀಚಿಗೆ ಏರ್ಪಡಿಸಿದ್ದ ಮೂರನೆ ವರ್ಷದ ವಾರ್ಷಿಕೋತ್ಸವ ಕಾರ್ಯಕ್ರಮ ವನ್ನು ಉದ್ಘಾಟಿಸಿ ಅವರು ಮಾತನಾಡಿದರು.<br /> <br /> ಶಿಕ್ಷಕರು ಮಹನೀಯರ ವಿಚಾರವನ್ನು ವಿದ್ಯಾರ್ಥಿಗಳಿಗೆ ತಿಳಿಸುವ ಮೂಲಕ ಅವರನ್ನು ಉತ್ತಮ ವ್ಯಕ್ತಿಗಳನ್ನಾಗಿಸ ಬೇಕು ಎಂದರು.<br /> ಇದೇ ಸಂದರ್ಭದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದ ನಿವೃತ್ತ ಶಿಕ್ಷಕ ಮರಿ ಮಲ್ಲಯ್ಯ, ಮಹನೀಯ ಆದರ್ಶಗಳನ್ನು ಅಂಥವರ ತತ್ವ, ಸಿದ್ಧಾಂತಗಳನ್ನು ವಿದ್ಯಾರ್ಥಿಗಳು ತಮ್ಮ ಬದುಕಿನಲ್ಲಿ ಅಳವಡಿಸಿಕೊಳ್ಳುವ ಮೂಲಕ ಉನ್ನತ ಮಟ್ಟದ ಸಾಧನೆ ಮಾಡಬೇಕು ಎಂದರು.<br /> <br /> ಡಾ.ನಾರಾಯಣ, ಮಾರೇಗೌಡ, ಕೃಷ್ಣ ಮೂರ್ತಿ, ಶಿವಣ್ಣ, ಶ್ರೀಧರ್, ವಿದ್ಯಾ ಸಂಸ್ಥೆಯ ಕಾರ್ಯದರ್ಶಿ ಎಂ.ಎಚ್. ಸುನೀಲ್, ಅಧ್ಯಕ್ಷೆ ಪ್ರತಿಮಾ, ಗೌರವಾ ಧ್ಯಕ್ಷೆ ಸುನಂದ ಹಾಜರಿದ್ದರು.<br /> <br /> ಇದೇ ಸಂದರ್ಭದಲ್ಲಿ ವಿವಿಧ ಸ್ಪರ್ಧೆ ಗಳಲ್ಲಿ ಭಾಗವಹಿಸಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾ ಯಿತು. ವಿದ್ಯಾರ್ಥಿಗಳು ಸಾಂಸ್ಕೃತಿಕ ಕಾರ್ಯಕ್ರಮ ನಡೆಸಿಕೊಟ್ಟರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚನ್ನಪಟ್ಟಣ:</strong> ಇತ್ತೀಚಿನ ದಿನಗಳಲ್ಲಿ ವಿದ್ಯಾರ್ಥಿಗಳು ದುಶ್ಚಟಕ್ಕೆ ಬಲಿಯಾಗುವುದು ಹೆಚ್ಚಾಗು ತ್ತಿದ್ದು, ಶಿಕ್ಷಕರು ಅಂತಹ ಮಕ್ಕಳನ್ನು ಗಮನಿಸಿ ಅವರನ್ನು ಸರಿದಾರಿಗೆ ತರಲು ಮುಂದಾಗಬೇಕು ಎಂದು ರಾಜ್ಯ ಒಕ್ಕಲಿ ಗರ ಸಂಘದ ಉಪಾಧ್ಯಕ್ಷ ಪ್ರೊ.ಕೆ. ಮಲ್ಲಯ್ಯ ಹೇಳಿದರು.<br /> <br /> ತಾಲ್ಲೂಕಿನ ಮುದಗೆರೆ ನಿಸರ್ಗ ಶಾಲೆ ಯಲ್ಲಿ ಇತ್ತೀಚಿಗೆ ಏರ್ಪಡಿಸಿದ್ದ ಮೂರನೆ ವರ್ಷದ ವಾರ್ಷಿಕೋತ್ಸವ ಕಾರ್ಯಕ್ರಮ ವನ್ನು ಉದ್ಘಾಟಿಸಿ ಅವರು ಮಾತನಾಡಿದರು.<br /> <br /> ಶಿಕ್ಷಕರು ಮಹನೀಯರ ವಿಚಾರವನ್ನು ವಿದ್ಯಾರ್ಥಿಗಳಿಗೆ ತಿಳಿಸುವ ಮೂಲಕ ಅವರನ್ನು ಉತ್ತಮ ವ್ಯಕ್ತಿಗಳನ್ನಾಗಿಸ ಬೇಕು ಎಂದರು.<br /> ಇದೇ ಸಂದರ್ಭದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದ ನಿವೃತ್ತ ಶಿಕ್ಷಕ ಮರಿ ಮಲ್ಲಯ್ಯ, ಮಹನೀಯ ಆದರ್ಶಗಳನ್ನು ಅಂಥವರ ತತ್ವ, ಸಿದ್ಧಾಂತಗಳನ್ನು ವಿದ್ಯಾರ್ಥಿಗಳು ತಮ್ಮ ಬದುಕಿನಲ್ಲಿ ಅಳವಡಿಸಿಕೊಳ್ಳುವ ಮೂಲಕ ಉನ್ನತ ಮಟ್ಟದ ಸಾಧನೆ ಮಾಡಬೇಕು ಎಂದರು.<br /> <br /> ಡಾ.ನಾರಾಯಣ, ಮಾರೇಗೌಡ, ಕೃಷ್ಣ ಮೂರ್ತಿ, ಶಿವಣ್ಣ, ಶ್ರೀಧರ್, ವಿದ್ಯಾ ಸಂಸ್ಥೆಯ ಕಾರ್ಯದರ್ಶಿ ಎಂ.ಎಚ್. ಸುನೀಲ್, ಅಧ್ಯಕ್ಷೆ ಪ್ರತಿಮಾ, ಗೌರವಾ ಧ್ಯಕ್ಷೆ ಸುನಂದ ಹಾಜರಿದ್ದರು.<br /> <br /> ಇದೇ ಸಂದರ್ಭದಲ್ಲಿ ವಿವಿಧ ಸ್ಪರ್ಧೆ ಗಳಲ್ಲಿ ಭಾಗವಹಿಸಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾ ಯಿತು. ವಿದ್ಯಾರ್ಥಿಗಳು ಸಾಂಸ್ಕೃತಿಕ ಕಾರ್ಯಕ್ರಮ ನಡೆಸಿಕೊಟ್ಟರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>