<p>ರಾಮನಗರ: ‘ಸಮಾಜದಲ್ಲಿನ ಅವ್ಯವಸ್ಥೆಗಳನ್ನು ಎತ್ತಿಹಿಡಿದು ಅವುಗಳಿಗೆ ಪರಿಹಾರ ಮಾರ್ಗ ಸೂಚಿಸುವ ಸಾಹಿತ್ಯ ರಚನೆಗೆ ಯುವ ಸಾಹಿತಿಗಳು ಮುಂದಾಗಬೇಕು’ ಎಂದು ಸಂಗೀತ ವಿದ್ವಾನ್ ಶಿವಾಜಿರಾವ್ ತಿಳಿಸಿದರು.<br /> <br /> ಜಿಲ್ಲಾ ಹಾಗೂ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಜಂಟಿಯಾಗಿ ನಗರದ ರಾಮದುರ್ಗ ಪ್ರೌಢಶಾಲೆಯಲ್ಲಿ ಏರ್ಪಡಿಸಿದ ಶಿವರಾತ್ರಿ ಕವಿಗೋಷ್ಠಿ ಮತ್ತು ಗೀತಗಾಯನ ಕಾರ್ಯಕ್ರಮದ ಅಧ್ಯಕ್ಷತೆ ಅವರು ಮಾತನಾಡಿದರು.<br /> <br /> ‘ಒಂದು ವಸ್ತು ಅಥವಾ ಪ್ರಕೃತಿಯ ವರ್ಣನೆ ಮಾಡುವ ಕಾವ್ಯ, ಸಾಹಿತ್ಯದ ಜೊತಗೆ ಸಮಾಜದ ಸಮಸ್ಯೆಗಳನ್ನು ಬೆಳಕಿಗೆ ತರುವಲ್ಲಿ ಪ್ರಯತ್ನಿಸಬೇಕು ಎಂದರು. ಸಾಹಿತ್ಯ ಪರಿಷತ್ತು ಇಂತಹ ಕಾರ್ಯಕ್ರಮಗಳನ್ನು ಶಾಲಾ ಕಾಲೇಜುಗಳಲ್ಲಿಯೂ ಹಮ್ಮಿಕೊಳ್ಳಬೇಕು’ ಎಂದು ಅವರು ಸಲಹೆ ನೀಡಿದರು.<br /> <br /> ಜಿಲ್ಲಾ ಕಸಾಪ ಅಧ್ಯಕ್ಷ ಬಿ.ಟಿ. ನಾಗೇಶ್ ಮಾತನಾಡಿ, ‘ಶಾಲೆಗಳಲ್ಲಿ ಜಾನಪದ ಸಾಹಿತ್ಯವನ್ನು ಪರಿಚಯಿಸಬೇಕು. ಮಕ್ಕಳಲ್ಲಿ ಸಂಗೀತಾಭಿರುಚಿಯನ್ನು ಬೆಳೆಸಬೇಕು ಈ ನಿಟ್ಟಿನಲ್ಲಿ ಶಿಕ್ಷಕರು ಮತ್ತು ಪೋಷಕರ ನಡುವೆ ಪರಸ್ಪರ ಸಹಕಾರ ಮುಖ್ಯ’ ಎಂದರು.<br /> <br /> ‘ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಸಾಹಿತ್ಯ ಪರಿಷತ್ತು ಕಾರ್ಯಕ್ರಮಗಳನ್ನು ಹೆಚ್ಚಾಗಿ ಏರ್ಪಡಿಸುವ ಮೂಲಕ ನಾಡಿನ ಜಾನಪದ ಸಮಗ್ರ ಸಾಹಿತ್ಯ ಜ್ಞಾನದ ಬಗ್ಗೆ ಅರಿವು ಮೂಡಿಸುತ್ತಿದೆ’ ಎಂದು ಅವರು ಹೇಳಿದರು.<br /> <br /> ಶಾಲೆಯ ಮುಖ್ಯ ಶಿಕ್ಷಕ ಕೃಷ್ಣಪ್ಪ, ನಗರಸಭೆ ಮಾಜಿ ಸದಸ್ಯರಾದ ದೊಡ್ಡಿ ಸೂರಿ, ಚಂದ್ರು ಮಾತನಾಡಿದರು.<br /> ನಗರ ಸಭೆ ಸದಸ್ಯ ಡಿ.ಕೆ.ಶಿವಕುಮಾರ್ ಕಾರ್ಯಕ್ರಮ ಉದ್ಘಾಟಿಸಿದರು. ರಾಮನಗರ ಕಸಾಪ ತಾಲ್ಲೂಕು ಅಧ್ಯಕ್ಷ ಬಿ.ಟಿ.ದಿನೇಶ್, ಕಾರ್ಯದರ್ಶಿ ಜಿ.ಟಿ.ಕೃಷ್ಣಪ್ಪ, ಖಜಾಂಚಿ ರಾಜೇಶ್, ಸಮಿತಿ ಸದಸ್ಯ ಡೈರಿ ವೆಂಕಟೇಶ್, ಗಿರೀಶ್, ಅನಂತ್, ಶಾಲೆ ಶಿಕ್ಷಕರು ಹಾಗೂ ಸಿಬ್ಬಂದಿ ಹಾಜರಿದ್ದರು. <br /> <br /> ಕಾರ್ಯಕ್ರಮದಲ್ಲಿ ಜಿಲ್ಲಾ ಸಾಂಸ್ಕೃತಿಕ ಘಟಕದ ಸಂಚಾಲಕ ಚೌ.ಪು.ಸ್ವಾಮಿ, ವಿನಯ್ ಕುಮಾರ್ ಗೀತಗಾಯನ ಕಾರ್ಯಕ್ರಮ ನಡೆಸಿಕೊಟ್ಟರು. ಕವಿಗಳಾದ ಶೈಲಜಾ ಶ್ರೀನಿವಾಸ್, ಕೆ.ಶಿವಹೊಂಬಯ್ಯ, ನಂ. ಶಿವಲಿಂಗಯ್ಯ, ಮಂಜುಳಾ ಪ್ರಕಾಶ್, ಚನ್ನಮಾನಹಳ್ಳಿ ಮಲ್ಲೇಶ್ ಮುಂತಾದವರು ಗೀತಗಾಯನ ನಡೆಸಿಕೊಟ್ಟರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ರಾಮನಗರ: ‘ಸಮಾಜದಲ್ಲಿನ ಅವ್ಯವಸ್ಥೆಗಳನ್ನು ಎತ್ತಿಹಿಡಿದು ಅವುಗಳಿಗೆ ಪರಿಹಾರ ಮಾರ್ಗ ಸೂಚಿಸುವ ಸಾಹಿತ್ಯ ರಚನೆಗೆ ಯುವ ಸಾಹಿತಿಗಳು ಮುಂದಾಗಬೇಕು’ ಎಂದು ಸಂಗೀತ ವಿದ್ವಾನ್ ಶಿವಾಜಿರಾವ್ ತಿಳಿಸಿದರು.<br /> <br /> ಜಿಲ್ಲಾ ಹಾಗೂ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಜಂಟಿಯಾಗಿ ನಗರದ ರಾಮದುರ್ಗ ಪ್ರೌಢಶಾಲೆಯಲ್ಲಿ ಏರ್ಪಡಿಸಿದ ಶಿವರಾತ್ರಿ ಕವಿಗೋಷ್ಠಿ ಮತ್ತು ಗೀತಗಾಯನ ಕಾರ್ಯಕ್ರಮದ ಅಧ್ಯಕ್ಷತೆ ಅವರು ಮಾತನಾಡಿದರು.<br /> <br /> ‘ಒಂದು ವಸ್ತು ಅಥವಾ ಪ್ರಕೃತಿಯ ವರ್ಣನೆ ಮಾಡುವ ಕಾವ್ಯ, ಸಾಹಿತ್ಯದ ಜೊತಗೆ ಸಮಾಜದ ಸಮಸ್ಯೆಗಳನ್ನು ಬೆಳಕಿಗೆ ತರುವಲ್ಲಿ ಪ್ರಯತ್ನಿಸಬೇಕು ಎಂದರು. ಸಾಹಿತ್ಯ ಪರಿಷತ್ತು ಇಂತಹ ಕಾರ್ಯಕ್ರಮಗಳನ್ನು ಶಾಲಾ ಕಾಲೇಜುಗಳಲ್ಲಿಯೂ ಹಮ್ಮಿಕೊಳ್ಳಬೇಕು’ ಎಂದು ಅವರು ಸಲಹೆ ನೀಡಿದರು.<br /> <br /> ಜಿಲ್ಲಾ ಕಸಾಪ ಅಧ್ಯಕ್ಷ ಬಿ.ಟಿ. ನಾಗೇಶ್ ಮಾತನಾಡಿ, ‘ಶಾಲೆಗಳಲ್ಲಿ ಜಾನಪದ ಸಾಹಿತ್ಯವನ್ನು ಪರಿಚಯಿಸಬೇಕು. ಮಕ್ಕಳಲ್ಲಿ ಸಂಗೀತಾಭಿರುಚಿಯನ್ನು ಬೆಳೆಸಬೇಕು ಈ ನಿಟ್ಟಿನಲ್ಲಿ ಶಿಕ್ಷಕರು ಮತ್ತು ಪೋಷಕರ ನಡುವೆ ಪರಸ್ಪರ ಸಹಕಾರ ಮುಖ್ಯ’ ಎಂದರು.<br /> <br /> ‘ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಸಾಹಿತ್ಯ ಪರಿಷತ್ತು ಕಾರ್ಯಕ್ರಮಗಳನ್ನು ಹೆಚ್ಚಾಗಿ ಏರ್ಪಡಿಸುವ ಮೂಲಕ ನಾಡಿನ ಜಾನಪದ ಸಮಗ್ರ ಸಾಹಿತ್ಯ ಜ್ಞಾನದ ಬಗ್ಗೆ ಅರಿವು ಮೂಡಿಸುತ್ತಿದೆ’ ಎಂದು ಅವರು ಹೇಳಿದರು.<br /> <br /> ಶಾಲೆಯ ಮುಖ್ಯ ಶಿಕ್ಷಕ ಕೃಷ್ಣಪ್ಪ, ನಗರಸಭೆ ಮಾಜಿ ಸದಸ್ಯರಾದ ದೊಡ್ಡಿ ಸೂರಿ, ಚಂದ್ರು ಮಾತನಾಡಿದರು.<br /> ನಗರ ಸಭೆ ಸದಸ್ಯ ಡಿ.ಕೆ.ಶಿವಕುಮಾರ್ ಕಾರ್ಯಕ್ರಮ ಉದ್ಘಾಟಿಸಿದರು. ರಾಮನಗರ ಕಸಾಪ ತಾಲ್ಲೂಕು ಅಧ್ಯಕ್ಷ ಬಿ.ಟಿ.ದಿನೇಶ್, ಕಾರ್ಯದರ್ಶಿ ಜಿ.ಟಿ.ಕೃಷ್ಣಪ್ಪ, ಖಜಾಂಚಿ ರಾಜೇಶ್, ಸಮಿತಿ ಸದಸ್ಯ ಡೈರಿ ವೆಂಕಟೇಶ್, ಗಿರೀಶ್, ಅನಂತ್, ಶಾಲೆ ಶಿಕ್ಷಕರು ಹಾಗೂ ಸಿಬ್ಬಂದಿ ಹಾಜರಿದ್ದರು. <br /> <br /> ಕಾರ್ಯಕ್ರಮದಲ್ಲಿ ಜಿಲ್ಲಾ ಸಾಂಸ್ಕೃತಿಕ ಘಟಕದ ಸಂಚಾಲಕ ಚೌ.ಪು.ಸ್ವಾಮಿ, ವಿನಯ್ ಕುಮಾರ್ ಗೀತಗಾಯನ ಕಾರ್ಯಕ್ರಮ ನಡೆಸಿಕೊಟ್ಟರು. ಕವಿಗಳಾದ ಶೈಲಜಾ ಶ್ರೀನಿವಾಸ್, ಕೆ.ಶಿವಹೊಂಬಯ್ಯ, ನಂ. ಶಿವಲಿಂಗಯ್ಯ, ಮಂಜುಳಾ ಪ್ರಕಾಶ್, ಚನ್ನಮಾನಹಳ್ಳಿ ಮಲ್ಲೇಶ್ ಮುಂತಾದವರು ಗೀತಗಾಯನ ನಡೆಸಿಕೊಟ್ಟರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>