ಮಾಗಡಿ: ತಾಲ್ಲೂಕಿನ ಸೋಲೂರು ಹೋಬಳಿ ಎಣ್ಣೆಗೆರೆ ಗ್ರಾಮದ ಪುರಾಣ ಪ್ರಸಿದ್ಧ ಬಸವಣ್ಣ ದೇವಾಲಯ ಜಿರ್ಣೋದ್ದಾರಕ್ಕೆ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಣಿವೃದ್ಧಿ ಯೋಜನೆ ವತಿಯಿಂದ ರೂ.2 ಲಕ್ಷ ಚೆಕ್ ಅನ್ನು ಜಿಲ್ಲಾ ನಿರ್ದೇಶಕ ಬಾಬುನಾಯ್ಕ್ ವಿತರಿಸಿದರು. ತಾಲ್ಲೂಕು ಯೋಜನಾಧಿಕಾರಿ ಶಶಿಕಲಾ ಸುವರ್ಣ, ಮನೋಜ್ ಹೆಡ್ಗೆ ಹಾಗೂ ಸಮಿತಿಯ ಪದಾಧಿಕಾರಿಗಳು ಇದ್ದರು.