ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಮನವಮಿ ಆಚರಣೆಗೂ ಕೊರೊನಾ ಅಡ್ಡಿ

Last Updated 2 ಏಪ್ರಿಲ್ 2020, 12:51 IST
ಅಕ್ಷರ ಗಾತ್ರ

ಶಿವಮೊಗ್ಗ: ನಗರದಲ್ಲಿ ರಾಮನವಮಿ ಆಚರಣೆ ಮೇಲೂ ಕೊರೊನಾ ಕರಿನೆರಳು ಬಿದ್ದಿದ್ದು, ರಾಮಾಂಜನೇಯ ದೇವಸ್ಥಾನಗಳಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು.

ಕೋಟೆ ಸೀತಾರಾಮಾಂಜನೇಯ ದೇವಸ್ಥಾನದಲ್ಲಿ ಬೆಳಿಗ್ಗೆ ವಿಶೇಷ ಪೂಜೆ ಸಲ್ಲಿಸಲಾಯಿತು. ಕೆಲವೇ ಭಕ್ತರು ದೇವಸ್ಥಾನಕ್ಕೆ ಆಗಮಿಸಿದ್ದರು, ಹೆಚ್ಚು ಕಾಲ ದೇವಸ್ಥಾನದಲ್ಲಿ ನಿಲ್ಲದೆ ದೇವರ ದರ್ಶನ ಪಡೆದು ಮುಂದೆ ಸಾಗಬೇಕು ಎಂದು ದೇವಸ್ಥಾನದ ಅರ್ಚಕರು ಮನವಿ ಮಾಡುತ್ತಿದ್ದರು.

ದುರ್ಗಿಗುಡಿಯ ಸೀತಾರಾಮ ಮಂದಿರದಲ್ಲಿ ರಾಮನವಮಿ ಆಚರಿಸಲಾಯಿತು. ಅಲ್ಲಿ ಜನ ಸೇರಿದ್ದಾರೆ ಎಂಬ ಮಾಹಿತಿ ತಿಳಿದ ಜಯನಗರ ಪೊಲೀಸರು ಸ್ಥಳಕ್ಕೆ ಆಗಮಿಸಿ ಇದ್ದ ಕೆಲವು ಜನರನ್ನ ಚದುರಿಸಿದರು.

ಪೂಜೆ ಮುಗಿದ ನಂತರ ದೇವಸ್ಥಾನದ ಪ್ರವೇಶ ನಿರ್ಬಂಧಿಸಿ, ಬಾಗಿಲು ಮುಚ್ಚಿದರು. ಇದರಿಂದ ಪ್ರಸಿದ್ಧ ಕೋಟೆ ಆಂಜನೇಯ ದೇವಸ್ಥಾನ ಸೇರಿದಂತೆ ದೇವಸ್ಥಾನಗಳು ಬಿಕೋ ಎನ್ನುತ್ತಿದ್ದವು. ಪ್ರತಿವರ್ಷ ನಗರದ ವಿವಿಧೆಡೆ ರಾಮನವಮಿ ಆಚರಣೆ ದಿನ ಕೋಸಂಬರಿ, ಪಾನಕ, ಮಜ್ಜಿಗೆ ವಿತರಿಸಲಾಗುತ್ತಿತ್ತು. ಆದರೆ, ಈ ವರ್ಷ ಕೊರೊನಾದಿಂದ ಲಾಕ್‌ಡೌನ್‌ ಆಗಿರುವುದರಿಂದ ಅನೇಕರು ಮನೆಗಳಲ್ಲಿಯೇ ರಾಮನವಮಿ ಆಚರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT