<p><strong>ಶಿವಮೊಗ್ಗ: </strong>ನಗರದಲ್ಲಿ ರಾಮನವಮಿ ಆಚರಣೆ ಮೇಲೂ ಕೊರೊನಾ ಕರಿನೆರಳು ಬಿದ್ದಿದ್ದು, ರಾಮಾಂಜನೇಯ ದೇವಸ್ಥಾನಗಳಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು.</p>.<p>ಕೋಟೆ ಸೀತಾರಾಮಾಂಜನೇಯ ದೇವಸ್ಥಾನದಲ್ಲಿ ಬೆಳಿಗ್ಗೆ ವಿಶೇಷ ಪೂಜೆ ಸಲ್ಲಿಸಲಾಯಿತು. ಕೆಲವೇ ಭಕ್ತರು ದೇವಸ್ಥಾನಕ್ಕೆ ಆಗಮಿಸಿದ್ದರು, ಹೆಚ್ಚು ಕಾಲ ದೇವಸ್ಥಾನದಲ್ಲಿ ನಿಲ್ಲದೆ ದೇವರ ದರ್ಶನ ಪಡೆದು ಮುಂದೆ ಸಾಗಬೇಕು ಎಂದು ದೇವಸ್ಥಾನದ ಅರ್ಚಕರು ಮನವಿ ಮಾಡುತ್ತಿದ್ದರು.</p>.<p>ದುರ್ಗಿಗುಡಿಯ ಸೀತಾರಾಮ ಮಂದಿರದಲ್ಲಿ ರಾಮನವಮಿ ಆಚರಿಸಲಾಯಿತು. ಅಲ್ಲಿ ಜನ ಸೇರಿದ್ದಾರೆ ಎಂಬ ಮಾಹಿತಿ ತಿಳಿದ ಜಯನಗರ ಪೊಲೀಸರು ಸ್ಥಳಕ್ಕೆ ಆಗಮಿಸಿ ಇದ್ದ ಕೆಲವು ಜನರನ್ನ ಚದುರಿಸಿದರು.</p>.<p>ಪೂಜೆ ಮುಗಿದ ನಂತರ ದೇವಸ್ಥಾನದ ಪ್ರವೇಶ ನಿರ್ಬಂಧಿಸಿ, ಬಾಗಿಲು ಮುಚ್ಚಿದರು. ಇದರಿಂದ ಪ್ರಸಿದ್ಧ ಕೋಟೆ ಆಂಜನೇಯ ದೇವಸ್ಥಾನ ಸೇರಿದಂತೆ ದೇವಸ್ಥಾನಗಳು ಬಿಕೋ ಎನ್ನುತ್ತಿದ್ದವು. ಪ್ರತಿವರ್ಷ ನಗರದ ವಿವಿಧೆಡೆ ರಾಮನವಮಿ ಆಚರಣೆ ದಿನ ಕೋಸಂಬರಿ, ಪಾನಕ, ಮಜ್ಜಿಗೆ ವಿತರಿಸಲಾಗುತ್ತಿತ್ತು. ಆದರೆ, ಈ ವರ್ಷ ಕೊರೊನಾದಿಂದ ಲಾಕ್ಡೌನ್ ಆಗಿರುವುದರಿಂದ ಅನೇಕರು ಮನೆಗಳಲ್ಲಿಯೇ ರಾಮನವಮಿ ಆಚರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿವಮೊಗ್ಗ: </strong>ನಗರದಲ್ಲಿ ರಾಮನವಮಿ ಆಚರಣೆ ಮೇಲೂ ಕೊರೊನಾ ಕರಿನೆರಳು ಬಿದ್ದಿದ್ದು, ರಾಮಾಂಜನೇಯ ದೇವಸ್ಥಾನಗಳಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು.</p>.<p>ಕೋಟೆ ಸೀತಾರಾಮಾಂಜನೇಯ ದೇವಸ್ಥಾನದಲ್ಲಿ ಬೆಳಿಗ್ಗೆ ವಿಶೇಷ ಪೂಜೆ ಸಲ್ಲಿಸಲಾಯಿತು. ಕೆಲವೇ ಭಕ್ತರು ದೇವಸ್ಥಾನಕ್ಕೆ ಆಗಮಿಸಿದ್ದರು, ಹೆಚ್ಚು ಕಾಲ ದೇವಸ್ಥಾನದಲ್ಲಿ ನಿಲ್ಲದೆ ದೇವರ ದರ್ಶನ ಪಡೆದು ಮುಂದೆ ಸಾಗಬೇಕು ಎಂದು ದೇವಸ್ಥಾನದ ಅರ್ಚಕರು ಮನವಿ ಮಾಡುತ್ತಿದ್ದರು.</p>.<p>ದುರ್ಗಿಗುಡಿಯ ಸೀತಾರಾಮ ಮಂದಿರದಲ್ಲಿ ರಾಮನವಮಿ ಆಚರಿಸಲಾಯಿತು. ಅಲ್ಲಿ ಜನ ಸೇರಿದ್ದಾರೆ ಎಂಬ ಮಾಹಿತಿ ತಿಳಿದ ಜಯನಗರ ಪೊಲೀಸರು ಸ್ಥಳಕ್ಕೆ ಆಗಮಿಸಿ ಇದ್ದ ಕೆಲವು ಜನರನ್ನ ಚದುರಿಸಿದರು.</p>.<p>ಪೂಜೆ ಮುಗಿದ ನಂತರ ದೇವಸ್ಥಾನದ ಪ್ರವೇಶ ನಿರ್ಬಂಧಿಸಿ, ಬಾಗಿಲು ಮುಚ್ಚಿದರು. ಇದರಿಂದ ಪ್ರಸಿದ್ಧ ಕೋಟೆ ಆಂಜನೇಯ ದೇವಸ್ಥಾನ ಸೇರಿದಂತೆ ದೇವಸ್ಥಾನಗಳು ಬಿಕೋ ಎನ್ನುತ್ತಿದ್ದವು. ಪ್ರತಿವರ್ಷ ನಗರದ ವಿವಿಧೆಡೆ ರಾಮನವಮಿ ಆಚರಣೆ ದಿನ ಕೋಸಂಬರಿ, ಪಾನಕ, ಮಜ್ಜಿಗೆ ವಿತರಿಸಲಾಗುತ್ತಿತ್ತು. ಆದರೆ, ಈ ವರ್ಷ ಕೊರೊನಾದಿಂದ ಲಾಕ್ಡೌನ್ ಆಗಿರುವುದರಿಂದ ಅನೇಕರು ಮನೆಗಳಲ್ಲಿಯೇ ರಾಮನವಮಿ ಆಚರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>