ಶಿವಮೊಗ್ಗ ರಂಗಾಯಣ ನಿರ್ದೇಶಕ ಡಾ.ಎಂ. ಗಣೇಶ್ ಮಾತನಾಡಿ, ‘ಚಿಣ್ಣರ ಬೇಸಿಗೆ ಶಿಬಿರ ಏ.30ರವರೆಗೆ ನಡೆಯಲಿದ್ದು, 250 ಮಕ್ಕಳು ಭಾಗವಹಿಸುತ್ತಿದ್ದಾರೆ. ಮಕ್ಕಳ ಎಂಟು ತಂಡಗಳನ್ನು ಮಾಡಿ ಪ್ರತಿ ತಂಡಕ್ಕೆ ಇಬ್ಬರು ನಿರ್ದೇಶಕರ ಮಾರ್ಗದರ್ಶನದಲ್ಲಿ ಒಂದು ನಾಟಕವನ್ನು ರಚಿಸಿ ಅಭಿನಯ ಕಲಿಸಲಾಗುವುದು. ರಂಗಭೂಮಿಗೆ ಸಂಬಂಧಿಸಿದಂತೆ ಅಭಿನಯ, ಹಾಡುಗಾರಿಕೆ, ಮಾತು, ನೃತ್ಯ ಸೇರಿ ಅಗತ್ಯ ಕಲೆಗಳನ್ನು ಕಲಿಸಲಾಗುವುದು. ಕೊನೆಯ ಎರಡು ದಿನಗಳ ಕಾಲ ಮಕ್ಕಳು ಶಿಬಿರದಲ್ಲಿ ಕಲಿತ ನಾಟಕಗಳ ಪ್ರದರ್ಶನ ಆಯೋಜಿಸಲಾಗುವುದು’ ಎಂದು ಮಾಹಿತಿ ನೀಡಿದರು.