ಇದಕ್ಕೆ ಪ್ರತಿಕ್ರಿಯಿಸಿರುವ ಗೋಪಾಲ ಪೂಜಾರಿ ಕೇಂದ್ರ ಸರ್ಕಾರದ ಕಾರ್ಯಸೂಚನೆಯಂತೆ ಕರ್ನಾಟಕದ ಕಾಂಗ್ರೆಸ್ ಸಚಿವರ ಮತ್ತು ನಾಯಕರ ಆಪ್ತರ ವಿರುದ್ಧ ಕೈಗೊಳ್ಳಲಾಗುತ್ತಿರುವ ರಾಜಕೀಯ ಪ್ರೇರಿತ ಕ್ರಮದ ಮುಂದುವರಿದಿದೆ. ಕ್ಷೇತ್ರದಲ್ಲಿ ಸೋಲಿನ ಭೀತಿಯಿಂದ ಬಿಜೆಪಿ ಹತಾಶೆಯಿಂದ ಐಟಿ ಇಲಾಖೆ ದುರುಪಯೋಗ ಮಾಡಿಕೊಳ್ಳುತ್ತಿದೆ. ಈ ರೀತಿ ದ್ವೇಷದ ರಾಜಕಾರಣಕ್ಕೆ ಬೈಂದೂರು ಕ್ಷೇತ್ರದ ಮತದಾರರು ಚುನಾವಣೆಯಲ್ಲಿ ತಕ್ಕ ಉತ್ತರ ನೀಡುತ್ತಾರೆ ಎಂದಿದ್ದಾರೆ.