ಎರಡು ಕಣ್ಣು: ‘ಶಿವಕುಮಾರ ಶ್ರೀಗಳ ಹುಟ್ಟೂರಾದ ಮಾಗಡಿ ತಾಲ್ಲೂಕಿನ ವೀರಾಪುರ ಹಾಗೂ ಬಾಲಗಂಗಾಧರನಾಥ ಶ್ರೀಗಳ ಹುಟ್ಟೂರು ರಾಮನಗರ ತಾಲ್ಲೂಕಿನ ಬಾನಂದೂರು ನನ್ನ ಎರಡು ಕಣ್ಣುಗಳಿದ್ದಂತೆ. ಈ ಗ್ರಾಮಗಳನ್ನು ದತ್ತು ಪಡೆದು ಅಭಿವೃದ್ಧಿ ಪಡಿಸಲಾಗುವುದು. ಅಲ್ಲಿ ಸಣ್ಣಪುಟ್ಟ ಅಭಿವೃದ್ಧಿ ಕಾರ್ಯಗಳು ಈಗಾಗಲೇ ನಡೆದಿದ್ದು, ಜನಪ್ರತಿನಿಧಿಗಳ ನೇತೃತ್ವದಲ್ಲಿ ಮತ್ತೊಮ್ಮೆ ಯೋಜನೆ ರೂಪಿಸಲಾಗುವುದು’ ಎಂದರು.