'ಶಿಕ್ಷಣ ತಜ್ಞರು, ವಿದ್ಯಾರ್ಥಿ ಸಂಘಟನೆಗಳು, ಅಂಗನವಾಡಿ, ಬಿಸಿಯೂಟ, ಹಾಗೂ ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದ ಎಲ್ಲರ ಬಳಿ ಚರ್ಚಿಸಬೇಕು. ತಿದ್ದುಪಡಿಗೆ ಸಲಹೆಗಳನ್ನು ನೀಡಲು ಕಾಲಾವಕಾಶ ನೀಡಬೇಕು. ವಿಧಾನಮಂಡಲದ ಉಭಯ ಸದನಗಳಲ್ಲಿ ಇದರ ಸಮಗ್ರ ಚರ್ಚೆ ನಡೆಸಬೇಕು. ಎನ್ಇಪಿ ಅನುಷ್ಠಾನದ ತಯಾರಿಗಳನ್ನು ಕೈಬಿಡುವಂತೆ ವಿರೋಧ ಪಕ್ಷದ ನಾಯಕರು ಸರ್ಕಾರದ ಮೇಲೆ ಒತ್ತಡ ಹೇರಬೇಕು' ಎಂದು ಮನವಿ ಮಾಡಿದರು.