ರಾಜ್ಯ ಸಂಘಟನಾ ಸಂಚಾಲಕ ಎಂ.ಬಿ.ಶ್ರೀನಿವಾಸ ಮಾತನಾಡಿ, ‘ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು ಸ್ವಾತಂತ್ರ್ಯ ಪೂರ್ವದಲ್ಲಿಯೇ ಶೂದ್ರರಿಗೆ ಶೇ 50ರಷ್ಟು ಮೀಸಲಾತಿ ಜಾರಿಗೆ ತಂದಿದ್ದರು. ಇದರ ಪ್ರಭಾವ ಅಂಬೇಡ್ಕರ್ ಅವರ ಮೇಲಾಯಿತು. ಆದರೆ, ಇತ್ತೀಚಿನ ದಿನಗಳಲ್ಲಿ ಯುವಜನರ ಅಧ್ಯಯನ, ತಿಳಿವಳಿಕೆ ಕೊರತೆಯಿಂದ ದಲಿತ ಚಳವಳಿ ಬಲಹೀನವಾಗುತ್ತಿದ್ದು, ಅದನ್ನು ಗಟ್ಟಿಗೊಳಿಸಬೇಕಾಗಿದೆ’ ಎಂದು ಅವರು ಹೇಳಿದರು.