<p><strong>ರಾಮನಗರ: </strong>ಬೆಂಗಳೂರು ಸೇರಿದಂತೆ 9 ಠಾಣೆಗಳಿಗೆ ಬೇಕಾಗಿದ್ದ ದರೋಡೆಕೋರರನ್ನು ಚನ್ನಪಟ್ಟಣ ಗ್ರಾಮೀಣ ಠಾಣೆ ಪೊಲೀಸರು ಬಂಧಿಸಿದ್ದಾರೆ.</p>.<p>ಬೆಂಗಳೂರಿನ ಮಾದನಾಯಕನಹಳ್ಳಿಯ ಮಣಿ (27), ಗಿರಿನಗರದ ರೇಣುಕುಮಾರ್ ಅಲಿಯಾಸ್ ಟಾಂಗು (27), ಬಸವನಗುಡಿಯ ವಿಜಿ ಅಲಿಯಾಸ್ ವಿಜಯ್(26) ಮತ್ತು ಮದ್ದೂರು ತಾಲ್ಲೂಕಿನ ಕುಕ್ಕೊರುದೊಡ್ಡಿ ಗ್ರಾಮದ ಶಿವ ಅಲಿಯಾಸ್ ಶಿವಪ್ರಸಾದ್ (29) ಬಂಧಿತರು.</p>.<p>ಇವರೆಲ್ಲರೂ ವಿವಿಧ ವೃತ್ತಿ ಮಾಡಿಕೊಂಡಿದ್ದು, ಕಳ್ಳತನವನ್ನು ಪ್ರವೃತ್ತಿಯಾಗಿಸಿಕೊಂಡಿದ್ದರು. ಅಪರಾಧ ಕೃತ್ಯ ಎಸಗಿ ಜೈಲು ಸೇರಿದ್ದರು. ಅಲ್ಲಿಯೇ ಎಲ್ಲರೂ ಭೇಟಿಯಾಗಿ ಹೊರಬಂದ ಬಳಿಕ ತಂಡ ಕಟ್ಟಿಕೊಂಡು ದರೋಡೆ ನಡೆಸುತ್ತಿದ್ದರು ಎನ್ನಲಾಗಿದೆ.</p>.<p>‘ಆರೋಪಿಗಳಿಂದ ಒಟ್ಟು 315 ಗ್ರಾಂ ಚಿನ್ನ, 7 ದ್ವಿಚಕ್ರವಾಹನಗಳನ್ನು ವಶಪಡಿಸಿ<br />ಕೊಂಡಿದ್ದು, ಇದರ ಒಟ್ಟು ಮೌಲ್ಯ ₹18 ಲಕ್ಷ’ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ. ಸಂತೋಷ ಬಾಬು ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.</p>.<p>‘ಚನ್ನಪಟ್ಟಣ, ಸಾತನೂರು, ರಾಮನಗರ ಗ್ರಾಮೀಣ, ತಲಘಟ್ಟಪುರ, ಕೆಂಗೇರಿ, ಗಿರಿನಗರ, ಜ್ಞಾನಭಾರತಿ, ಚಂದ್ರಾಲೇಔಟ್, ಸುಬ್ರಮಣ್ಯನಗರ ಪೊಲೀಸ್ ಠಾಣೆಗಳಲ್ಲಿ ಆರೋಪಿಗಳ ಮೇಲೆ ಒಟ್ಟು 14 ಪ್ರಕರಣಗಳು ದಾಖಲಾಗಿವೆ’ ಎಂದು ಮಾಹಿತಿ ನೀಡಿದರು.</p>.<p class="Subhead"><strong>ಪತ್ತೆಯಾಗಿದ್ದು ಹೇಗೆ?: </strong>ಚನ್ನಪಟ್ಟಣದ ಕೆಂಗಲ್ ಬಳಿ ಕಳೆದ ಜೂನ್ 30ರಂದು ಬೆಳಿಗ್ಗೆ 5 ಗಂಟೆ ಸುಮಾರಿಗೆ ಐವರು ದುಷ್ಕರ್ಮಿಗಳು ಆಯುಧಗಳನ್ನು ಹಿಡಿದು ದರೋಡೆಗೆ ಹೊಂಚು ಹಾಕುತ್ತಿದ್ದಾರೆ ಎಂಬ ಮಾಹಿತಿ ಮೇರೆಗೆ ಚನ್ನಪಟ್ಟಣ ಗ್ರಾಮೀಣ ಠಾಣೆ ಪೊಲೀಸರು ದಾಳಿ ನಡೆಸಿದ್ದರು. ಈ ವೇಳೆ ಈ ನಾಲ್ವರು ಆರೋಪಿಗಳು ಪೊಲೀಸರಿಗೆ ಅತಿಥಿಯಾಗಿದ್ದಾರೆ. ವಿಚಾರಣೆ ವೇಳೆ ಆರೋಪಿಗಳ ಹಿಂದಿನ ಕೃತ್ಯಗಳು ಬೆಳಕಿಗೆ ಬಂದಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಮನಗರ: </strong>ಬೆಂಗಳೂರು ಸೇರಿದಂತೆ 9 ಠಾಣೆಗಳಿಗೆ ಬೇಕಾಗಿದ್ದ ದರೋಡೆಕೋರರನ್ನು ಚನ್ನಪಟ್ಟಣ ಗ್ರಾಮೀಣ ಠಾಣೆ ಪೊಲೀಸರು ಬಂಧಿಸಿದ್ದಾರೆ.</p>.<p>ಬೆಂಗಳೂರಿನ ಮಾದನಾಯಕನಹಳ್ಳಿಯ ಮಣಿ (27), ಗಿರಿನಗರದ ರೇಣುಕುಮಾರ್ ಅಲಿಯಾಸ್ ಟಾಂಗು (27), ಬಸವನಗುಡಿಯ ವಿಜಿ ಅಲಿಯಾಸ್ ವಿಜಯ್(26) ಮತ್ತು ಮದ್ದೂರು ತಾಲ್ಲೂಕಿನ ಕುಕ್ಕೊರುದೊಡ್ಡಿ ಗ್ರಾಮದ ಶಿವ ಅಲಿಯಾಸ್ ಶಿವಪ್ರಸಾದ್ (29) ಬಂಧಿತರು.</p>.<p>ಇವರೆಲ್ಲರೂ ವಿವಿಧ ವೃತ್ತಿ ಮಾಡಿಕೊಂಡಿದ್ದು, ಕಳ್ಳತನವನ್ನು ಪ್ರವೃತ್ತಿಯಾಗಿಸಿಕೊಂಡಿದ್ದರು. ಅಪರಾಧ ಕೃತ್ಯ ಎಸಗಿ ಜೈಲು ಸೇರಿದ್ದರು. ಅಲ್ಲಿಯೇ ಎಲ್ಲರೂ ಭೇಟಿಯಾಗಿ ಹೊರಬಂದ ಬಳಿಕ ತಂಡ ಕಟ್ಟಿಕೊಂಡು ದರೋಡೆ ನಡೆಸುತ್ತಿದ್ದರು ಎನ್ನಲಾಗಿದೆ.</p>.<p>‘ಆರೋಪಿಗಳಿಂದ ಒಟ್ಟು 315 ಗ್ರಾಂ ಚಿನ್ನ, 7 ದ್ವಿಚಕ್ರವಾಹನಗಳನ್ನು ವಶಪಡಿಸಿ<br />ಕೊಂಡಿದ್ದು, ಇದರ ಒಟ್ಟು ಮೌಲ್ಯ ₹18 ಲಕ್ಷ’ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ. ಸಂತೋಷ ಬಾಬು ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.</p>.<p>‘ಚನ್ನಪಟ್ಟಣ, ಸಾತನೂರು, ರಾಮನಗರ ಗ್ರಾಮೀಣ, ತಲಘಟ್ಟಪುರ, ಕೆಂಗೇರಿ, ಗಿರಿನಗರ, ಜ್ಞಾನಭಾರತಿ, ಚಂದ್ರಾಲೇಔಟ್, ಸುಬ್ರಮಣ್ಯನಗರ ಪೊಲೀಸ್ ಠಾಣೆಗಳಲ್ಲಿ ಆರೋಪಿಗಳ ಮೇಲೆ ಒಟ್ಟು 14 ಪ್ರಕರಣಗಳು ದಾಖಲಾಗಿವೆ’ ಎಂದು ಮಾಹಿತಿ ನೀಡಿದರು.</p>.<p class="Subhead"><strong>ಪತ್ತೆಯಾಗಿದ್ದು ಹೇಗೆ?: </strong>ಚನ್ನಪಟ್ಟಣದ ಕೆಂಗಲ್ ಬಳಿ ಕಳೆದ ಜೂನ್ 30ರಂದು ಬೆಳಿಗ್ಗೆ 5 ಗಂಟೆ ಸುಮಾರಿಗೆ ಐವರು ದುಷ್ಕರ್ಮಿಗಳು ಆಯುಧಗಳನ್ನು ಹಿಡಿದು ದರೋಡೆಗೆ ಹೊಂಚು ಹಾಕುತ್ತಿದ್ದಾರೆ ಎಂಬ ಮಾಹಿತಿ ಮೇರೆಗೆ ಚನ್ನಪಟ್ಟಣ ಗ್ರಾಮೀಣ ಠಾಣೆ ಪೊಲೀಸರು ದಾಳಿ ನಡೆಸಿದ್ದರು. ಈ ವೇಳೆ ಈ ನಾಲ್ವರು ಆರೋಪಿಗಳು ಪೊಲೀಸರಿಗೆ ಅತಿಥಿಯಾಗಿದ್ದಾರೆ. ವಿಚಾರಣೆ ವೇಳೆ ಆರೋಪಿಗಳ ಹಿಂದಿನ ಕೃತ್ಯಗಳು ಬೆಳಕಿಗೆ ಬಂದಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>