ರಾತ್ರಿ 9.30ರ ಸುಮಾರಿಗೆ ರೈಲು ಚನ್ನಪಟ್ಟಣದಲ್ಲಿ ನಿಂತಿದ್ದ ವೇಳೆ ಎಂಟು ಮಂದಿ ದರೋಡೆಕೋರರು ಒಳ ಪ್ರವೇಶಿಸಿದ್ದಾರೆ. ಬಳಿಕ ಮಾರಕಾಸ್ತ್ರಗಳನ್ನು ಹಿಡಿದು ಎಸ್ 1ರಿಂದ 3ರವರೆಗಿನ ಬೋಗಿಗಳ ಬಾಗಿಲುಗಳನ್ನು ಬಂದ್ ಮಾಡಿದ್ದಾರೆ. ಅಲ್ಲಿ ಪ್ರಯಾಣಿಕರನ್ನು ಬೆದರಿಸಿ ಹಣ, ಒಡವೆ, ಮೊಬೈಲ್ಗಳನ್ನು ಕಸಿದುಕೊಂಡಿದ್ದಾರೆ. ಪ್ರತಿರೋಧ ತೋರಿದ ಪ್ರಯಾಣಿಕರೊಬ್ಬರಿಗೆ ಚಾಕುವಿನಿಂದ ಇರಿದಿದ್ದಾರೆ ಎಂದು ಆರೋಪಿಸಲಾಗಿದೆ.