ವಿಜಯಪುರ: ‘ವಿಮಾನ ನಿಲ್ದಾಣ, ರೈಲ್ವೆ ಮೇಲ್ಸೇತುವೆಗಳ ನಿರ್ಮಾಣಕ್ಕೆ ಆದ್ಯತೆ ನೀಡಲಾಗುವುದು’ ಎಂದು ಸಂಸದ ರಮೇಶ ಜಿಗಜಿಣಗಿ ಹೇಳಿದರು.
ನಗರದ ಮರ್ಚಂಟ್ಸ್ ಅಸೋಸಿಯೇಷನ್ನ ಮಂಗಲ ಕಾರ್ಯಾಲಯದಲ್ಲಿ ಗುರುವಾರ ಏರ್ಪಡಿಸಿದ್ದ ಸನ್ಮಾನ ಸಮಾರಂಭದಲ್ಲಿ ಅವರು ಮಾತನಾಡಿದರು.
ಸಂಘದ ಅಧ್ಯಕ್ಷ ರವೀಂದ್ರ ಬಿಜ್ಜರಗಿ ಅವರು, ಕಟ್ಟಡ ನಿರ್ಮಾಣಕ್ಕಾಗಿ ಭಾರತ ಪ್ರಾಚ್ಯವಸ್ತು ಇಲಾಖೆಯ ಕಾನೂನಿಂದ ಅಡಚಣೆ ಆಗುತ್ತಿದ್ದು ಅದನ್ನು ರದ್ದುಪಡಿಸಬೇಕು ಎಂದು ಮನವಿ ಪತ್ರ ಸಲ್ಲಿಸಿದರು.
ಮಾಜಿ ಸಚಿವ ಅಪ್ಪಾಸಾಹೇಬ ಪಟ್ಟಣಶೆಟ್ಟಿ, ಮುಖಂಡರಾದ ವಿಜಯಕುಮಾರ ಪಾಟೀಲ, ಚಂದ್ರಶೇಖರ ಕವಟಗಿ, ಭೀಮಾಶಂಕರ ಹದನೂರ ಇದ್ದರು.