ಭಾರತೀಯ ಸ್ಟೇಟ್ ಬ್ಯಾಂಕ್ (ಎಸ್ಬಿಐ) ನಗರದ ರಾಯ್ಕರ್ ಮೈದಾನದಲ್ಲಿ ಆಯೋಜಿಸಿರುವ ಮೂರು ದಿನಗಳ ಕಾರು– ಗೃಹ ಸಾಲ ಮೇಳಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ‘ಕೊಳ್ಳುವಿಕೆ ಹೆಚ್ಚಾದಾಗ ಆರ್ಥಿಕತೆ ವೃದ್ಧಿಯಾಗುತ್ತದೆ ಹಾಗೂ ಜನರಿಗೆ ಉದ್ಯೋಗ ಸಹ ಸಿಗುತ್ತದೆ. ಇಂತಹ ಮೇಳಗಳನ್ನು ಆಯೋಜಿಸಿ ವಸ್ತುಗಳನ್ನು ಪ್ರದರ್ಶನ ಮಾಡಿದಾಗ, ಅದು ಕೊಳ್ಳುವ ಜನರ ಆಸೆಯನ್ನು ಹೆಚ್ಚಿಸುತ್ತದೆ’ ಎಂದರು.