<p><strong>ರಾಮನಗರ: </strong>ಶಾಲಾ ಮಕ್ಕಳಲ್ಲಿ ವಿಜ್ಞಾನದ ಅರಿವು ಮೂಡಿಸುವ ಸಲುವಾಗಿ ವಿಶ್ವೇಶ್ವರಯ್ಯ ಕೈಗಾರಿಕಾ ಮತ್ತು ತಾಂತ್ರಿಕ ವಸ್ತು ಸಂಗ್ರಹಾಲಯವು ಸಾರ್ವಜನಿಕ ಶಿಕ್ಷಣ ಇಲಾಖೆ ಸಹಯೋಗದೊಂದಿಗೆ ಜಿಲ್ಲೆಯಲ್ಲಿ ಸಂಚಾರಿ ವಿಜ್ಞಾನ ಪ್ರದರ್ಶನ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ.</p>.<p>ವಿಶ್ವೇಶ್ವರಯ್ಯ ಮ್ಯೂಸಿಯಂ ವಿಶೇಷವಾಗಿ ರೂಪಿಸಿರುವ ಸಂಚಾರಿ ವಿಜ್ಞಾನ ವಾಹನದಲ್ಲಿ ವಸ್ತು ಪ್ರದರ್ಶನದ ವ್ಯವಸ್ಥೆ ಕಲ್ಪಿಸಲಾಗಿದೆ. ಈ ಬಸ್ ಕಳೆದ ನವೆಂಬರ್ 9ರಿಂದ ಜಿಲ್ಲೆಯಾದ್ಯಂತ ಸಂಚರಿಸಿ ಸರ್ಕಾರಿ ಶಾಲಾ ಮಕ್ಕಳಿಗೆ ವಿಜ್ಞಾನದ ಅರಿವು ಮೂಡಿಸುತ್ತಿದೆ. ಶುಕ್ರವಾರ ಜಿಲ್ಲಾ ಕೇಂದ್ರದಲ್ಲಿ ಸಂಚರಿಸುತ್ತಿರುವ ವಿಜ್ಞಾನ ಪ್ರದರ್ಶನದಲ್ಲಿ ಸರ್ಕಾರಿ ಬಾಲಕರ ಮತ್ತು ಬಾಲಕಿಯರ ಕಾಲೇಜು, ಪ್ರೌಢಶಾಲೆ ವಿಭಾಗದ ವಿದ್ಯಾರ್ಥಿಗಳು ಭಾಗವಹಿಸಿದ್ದರು.</p>.<p>‘ಬೆಂಗಳೂರಿನಲ್ಲಿರುವ ಮ್ಯೂಸಿಯಂಗೆ ರಾಜ್ಯದ ನಾನಾ ಭಾಗಗಳಿಂದ ವಿದ್ಯಾರ್ಥಿಗಳು ಬರುತ್ತಾರೆ. ಆದರೆ ಅವರಲ್ಲಿ ಖಾಸಗಿ ಶಾಲಾ ಹೆಚ್ಚು. ಗ್ರಾಮೀಣ ಪ್ರದೇಶದ ಸರ್ಕಾರಿ ಶಾಲಾ ಮಕ್ಕಳು ಇರುವ ಕಡೆಯಲ್ಲೇ ವಿಜ್ಞಾನದ ಅರಿವು ಮೂಡಿಸಲು ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ’ ಎಂದರು.</p>.<p>ಈಗಾಗಲೇ ರಾಮನಗರ ತಾಲ್ಲೂಕಿನ ಬಹುತೇಕ ಕಡೆ ಈ ಪ್ರದರ್ಶನವನ್ನು ಏರ್ಪಡಿಸಲಾಗಿದೆ. ನಂತರದಲ್ಲಿ ಮಾಗಡಿ, ಕನಕಪುರ ಮೊದಲಾದ ಕಡೆ ಬಸ್ ಸಂಚರಿಸಲಿದೆ. ವಿಶೇಷವಾಗಿ ಪ್ರೌಢಶಾಲಾ ಪಠ್ಯಕ್ರಮದ ಆಧಾರಿತ ವಿದ್ಯುತ್ ಮತ್ತು ಅಯಸ್ಕಾಂತೀಯ ಗುಣಗಳ ಬಗ್ಗೆ ಮಕ್ಕಳಿಗೆ ಅರಿವು ಮೂಡಿಸಲಾಗುತ್ತಿದೆ.</p>.<p>‘ಮೊದಲ ದಿನ ವಸ್ತು ಪ್ರದರ್ಶನದ ನಂತರ ಆಯ್ದ ಶಾಲೆಗಳಲ್ಲಿ ವಿಜ್ಞಾನ ವಿಡಿಯೊ ಪ್ರದರ್ಶನ, ವಿಜ್ಞಾನ ಮಾದರಿ ತಯಾರಿಕೆ ಕಾರ್ಯಾಗಾರ ನಡೆಸುತ್ತೇವೆ’ ಎಂದು ವಸ್ತು ಸಂಗ್ರಹಾಲಯದ ಸಿಬ್ಬಂದಿ ತಿಳಿಸಿದರು.</p>.<p>ವಿಶ್ವೇಶ್ವರಯ್ಯ ವಸ್ತು ಸಂಗ್ರಹಾಲಯದ ತಾಂತ್ರಿಕ ಸಿಬ್ಬಂದಿಯಾದ ರವಿ, ಉದಯ್ ಪ್ರಕಾಶ್, ಶನೀಶ್ ಕುಮಾರ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಮನಗರ: </strong>ಶಾಲಾ ಮಕ್ಕಳಲ್ಲಿ ವಿಜ್ಞಾನದ ಅರಿವು ಮೂಡಿಸುವ ಸಲುವಾಗಿ ವಿಶ್ವೇಶ್ವರಯ್ಯ ಕೈಗಾರಿಕಾ ಮತ್ತು ತಾಂತ್ರಿಕ ವಸ್ತು ಸಂಗ್ರಹಾಲಯವು ಸಾರ್ವಜನಿಕ ಶಿಕ್ಷಣ ಇಲಾಖೆ ಸಹಯೋಗದೊಂದಿಗೆ ಜಿಲ್ಲೆಯಲ್ಲಿ ಸಂಚಾರಿ ವಿಜ್ಞಾನ ಪ್ರದರ್ಶನ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ.</p>.<p>ವಿಶ್ವೇಶ್ವರಯ್ಯ ಮ್ಯೂಸಿಯಂ ವಿಶೇಷವಾಗಿ ರೂಪಿಸಿರುವ ಸಂಚಾರಿ ವಿಜ್ಞಾನ ವಾಹನದಲ್ಲಿ ವಸ್ತು ಪ್ರದರ್ಶನದ ವ್ಯವಸ್ಥೆ ಕಲ್ಪಿಸಲಾಗಿದೆ. ಈ ಬಸ್ ಕಳೆದ ನವೆಂಬರ್ 9ರಿಂದ ಜಿಲ್ಲೆಯಾದ್ಯಂತ ಸಂಚರಿಸಿ ಸರ್ಕಾರಿ ಶಾಲಾ ಮಕ್ಕಳಿಗೆ ವಿಜ್ಞಾನದ ಅರಿವು ಮೂಡಿಸುತ್ತಿದೆ. ಶುಕ್ರವಾರ ಜಿಲ್ಲಾ ಕೇಂದ್ರದಲ್ಲಿ ಸಂಚರಿಸುತ್ತಿರುವ ವಿಜ್ಞಾನ ಪ್ರದರ್ಶನದಲ್ಲಿ ಸರ್ಕಾರಿ ಬಾಲಕರ ಮತ್ತು ಬಾಲಕಿಯರ ಕಾಲೇಜು, ಪ್ರೌಢಶಾಲೆ ವಿಭಾಗದ ವಿದ್ಯಾರ್ಥಿಗಳು ಭಾಗವಹಿಸಿದ್ದರು.</p>.<p>‘ಬೆಂಗಳೂರಿನಲ್ಲಿರುವ ಮ್ಯೂಸಿಯಂಗೆ ರಾಜ್ಯದ ನಾನಾ ಭಾಗಗಳಿಂದ ವಿದ್ಯಾರ್ಥಿಗಳು ಬರುತ್ತಾರೆ. ಆದರೆ ಅವರಲ್ಲಿ ಖಾಸಗಿ ಶಾಲಾ ಹೆಚ್ಚು. ಗ್ರಾಮೀಣ ಪ್ರದೇಶದ ಸರ್ಕಾರಿ ಶಾಲಾ ಮಕ್ಕಳು ಇರುವ ಕಡೆಯಲ್ಲೇ ವಿಜ್ಞಾನದ ಅರಿವು ಮೂಡಿಸಲು ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ’ ಎಂದರು.</p>.<p>ಈಗಾಗಲೇ ರಾಮನಗರ ತಾಲ್ಲೂಕಿನ ಬಹುತೇಕ ಕಡೆ ಈ ಪ್ರದರ್ಶನವನ್ನು ಏರ್ಪಡಿಸಲಾಗಿದೆ. ನಂತರದಲ್ಲಿ ಮಾಗಡಿ, ಕನಕಪುರ ಮೊದಲಾದ ಕಡೆ ಬಸ್ ಸಂಚರಿಸಲಿದೆ. ವಿಶೇಷವಾಗಿ ಪ್ರೌಢಶಾಲಾ ಪಠ್ಯಕ್ರಮದ ಆಧಾರಿತ ವಿದ್ಯುತ್ ಮತ್ತು ಅಯಸ್ಕಾಂತೀಯ ಗುಣಗಳ ಬಗ್ಗೆ ಮಕ್ಕಳಿಗೆ ಅರಿವು ಮೂಡಿಸಲಾಗುತ್ತಿದೆ.</p>.<p>‘ಮೊದಲ ದಿನ ವಸ್ತು ಪ್ರದರ್ಶನದ ನಂತರ ಆಯ್ದ ಶಾಲೆಗಳಲ್ಲಿ ವಿಜ್ಞಾನ ವಿಡಿಯೊ ಪ್ರದರ್ಶನ, ವಿಜ್ಞಾನ ಮಾದರಿ ತಯಾರಿಕೆ ಕಾರ್ಯಾಗಾರ ನಡೆಸುತ್ತೇವೆ’ ಎಂದು ವಸ್ತು ಸಂಗ್ರಹಾಲಯದ ಸಿಬ್ಬಂದಿ ತಿಳಿಸಿದರು.</p>.<p>ವಿಶ್ವೇಶ್ವರಯ್ಯ ವಸ್ತು ಸಂಗ್ರಹಾಲಯದ ತಾಂತ್ರಿಕ ಸಿಬ್ಬಂದಿಯಾದ ರವಿ, ಉದಯ್ ಪ್ರಕಾಶ್, ಶನೀಶ್ ಕುಮಾರ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>