ಸಾಗರ: ರಂಗನಟ, ಕವಿ, ಸಾಮಾಜಿಕ ಕಾರ್ಯಕರ್ತ ನಾಗರಾಜ ರಾಯ್ಕರ್ (72) ಸೋಮವಾರ ರಾತ್ರಿ ಬೆಂಗಳೂರಿನಲ್ಲಿ ನಿಧನರಾದರು. ಅವರಿಗೆ ಪತ್ನಿ, ಪುತ್ರ ಹಾಗೂ ಪುತ್ರಿ ಇದ್ದಾರೆ.
ಇಲ್ಲಿನ ಮಲೆನಾಡು ಅಭಿವೃದ್ಧಿ ಪ್ರತಿಷ್ಠಾನದಲ್ಲಿ ಉದ್ಯೋಗಿಯಾಗಿದ್ದ ಅವರು ಬಳಕೆದಾರ ವೇದಿಕೆಯ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸಿ, ಹಾಲಿ ಅದರ ನಿರ್ದೇಶಕರಾಗಿದ್ದರು. ಹವ್ಯಾಸಿ ರಂಗತಂಡದ ಹಲವು ನಾಟಕಗಳಲ್ಲಿ ಅಭಿನಯಿಸಿದ್ದರು.
‘ಬೆಳ್ಳಿ ಬೆಳಕಿನ ಹಿಂದೆ’ ನಾಟಕದಲ್ಲಿನ ತುಂಗತ್ತೆಯ ಪಾತ್ರ ಅವರಿಗೆ ಹೆಸರು ತಂದಿತ್ತು. ಹಲವು ಪತ್ರಿಕೆಗಳಲ್ಲಿ ಅವರ ಕವಿತೆಗಳು ಪ್ರಕಟವಾಗಿವೆ. ಮಂಗಳವಾರ ಅಂತ್ಯಕ್ರಿಯೆ ನಡೆಯಿತು.