‘ಸಿದ್ದರಾಮಯ್ಯ ಅವರು ಒಕ್ಕಲಿಗ ಅಧಿಕಾರಿಗಳನ್ನು ಟಾರ್ಗೆಟ್ ಮಾಡುತ್ತಿದ್ದಾರೆ’ ಎಂಬ ಕುಮಾರಸ್ವಾಮಿ ಆರೋಪಕ್ಕೆ ಪ್ರತಿಕ್ರಿಯಿಸಿ, ‘ಅಧಿಕಾರಿಗಳ ಜತೆ ಹೇಗಿರಬೇಕು, ಹೇಗೆ ಕೆಲಸ ಮಾಡಿಸಬೇಕು ಎಂಬುದು ನನಗೆ ಗೊತ್ತಿದೆ. ಅದನ್ನು ಕುಮಾರಸ್ವಾಮಿ ಅವರಿಂದ ಕಲಿಯಬೇಕಿಲ್ಲ. ಇದು ರಾಜಕೀಯ ಪ್ರೇರಿತ ಆರೋಪ’ ಎಂದು ಸುದ್ದಿಗಾರರಿಗೆ ತಿಳಿಸಿದರು.