ಬೆಂಗಳೂರು: ರಾಜ್ಯ ಸರ್ಕಾರ ಮತ್ತೆ ಮೂವರು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿದ್ದು, ಅವರಲ್ಲಿ ಶಿವಮೊಗ್ಗದ ಜಿಲ್ಲಾಧಿಕಾರಿ ಕೆ.ಎ.ದಯಾನಂದ ಅವರೂ ಸೇರಿದ್ದಾರೆ.
ಕೆ.ಬಿ.ಶಿವಕುಮಾರ್– ಜಿಲ್ಲಾಧಿಕಾರಿ, ಶಿವಮೊಗ್ಗ, ಕೆ.ಎ.ದಯಾನಂದ–ಕಬ್ಬು ಅಭಿವೃದ್ಧಿ ಆಯುಕ್ತರು ಹಾಗೂ ಸಕ್ಕರೆ ಇಲಾಖೆ ನಿರ್ದೇಶಕರು. ಎಂ.ಪಿ.ಮುಲ್ಲಾಯಿ ಮುಹಿಲನ್–ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಉಪ ಕಾರ್ಯದರ್ಶಿ.