ಶಿವಮೊಗ್ಗ: ಶಿವಮೊಗ್ಗ ನಗರ ಹಾಗೂ ಭದ್ರಾವತಿ ತಾಲ್ಲೂಕು ಗ್ರಾಮೀಣ ಭಾಗದಲ್ಲಿ ಬುಧವಾರ ರಾತ್ರಿ ಗುಡುಗು ಸಹಿತ ಭಾರಿ ಸುರಿಯಿತು.
ಶಿವಮೊಗ್ಗ ನಗರದ ಕೆಲವು ಪ್ರದೇಶಗಳಲ್ಲಿ ರಸ್ತೆ ಮೇಲೆ ನೀರು ಹರಿದಿದೆ. ಗಾಳಿಯ ಪರಿಣಾಮ ಗ್ರಾಮೀಣ ಭಾಗದಲ್ಲಿ ಮೆಕ್ಕೆಜೋಳದ ಬೆಳೆಗೆ ಸಾಕಷ್ಟು ಹಾನಿಯಾಗಿದೆ. ಜಿಲ್ಲೆಯ ಉಳಿದೆಡೆ ಇಡೀ ದಿನ ಮೋಡ ಕವಿದ ವಾತಾವರಣವಿತ್ತು.