<p><strong>ಶಿವಮೊಗ್ಗ: </strong>ಮಹಾತ್ಮ ಗಾಂಧಿ ನಗರೋತ್ಥಾನ ಯೋಜನೆಯಲ್ಲಿ ನಗರದ ಅಭಿವೃದ್ಧಿಗೆ ₹ 125 ಕೋಟಿ ಬಿಡುಗಡೆಯಾಗಿದೆ ಎಂದುಪಾಲಿಕೆ ಆಡಳಿತ ಪಕ್ಷದ ನಾಯಕ ಎಸ್.ಎನ್. ಚನ್ನಬಸಪ್ಪ ಹೇಳಿದರು.</p>.<p>ಜಿಲ್ಲೆಯ ಬ್ರಹ್ಮ, ವಿಷ್ಣು, ಮಹೇಶ್ವರರಾದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಸಚಿವ ಕೆ.ಎಸ್.ಈಶ್ವರಪ್ಪ, ಸಂಸದ ಬಿ.ವೈ. ರಾಘವೇಂದ್ರ ಅವರ ನೆರವಿನಿಂದ ನಗರದಅಭಿವೃದ್ಧಿಗೆ ಕೋಟ್ಯಂತರ ರೂಪಾಯಿ ಅನುದಾನ ಹರಿದುಬರುತ್ತಿದೆ. ನಗರೋತ್ಥಾನ ಯೋಜನೆಯ ಅನುದಾನವನ್ನು ಸ್ಮಾರ್ಟ್ ಸಿಟಿ ಅನುಷ್ಠಾನಗೊಳ್ಳದ ವಾರ್ಡ್ಗಳಮೂಲ ಸೌಲಭ್ಯಕ್ಕಾಗಿ ಬಳಸಿಕೊಳ್ಳಲಾಗುವುದು ಎಂದು ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.</p>.<p>ಸಚಿವ ಕೆ.ಎಸ್. ಈಶ್ವರಪ್ಪ ಅವರು ₹ 136ಕೋಟಿ ಬಿಡುಗಡೆ ಮಾಡಿ<br />ದ್ದಾರೆ. ಈ ಹಣದಲ್ಲಿ ಶಾಲೆ, ಪಾರ್ಕ್ಗಳ ಅಭಿವೃದ್ಧಿ, ಅಂಗನವಾಡಿ, ರಸ್ತೆ, ಕುಡಿಯುವ ನೀರು ಸೇರಿ ಮೂಲಸೌಕರ್ಯಕ್ಕಾಗಿ ವಿನಿಯೋಗ ಮಾಡಲಾಗುವುದು ಎಂದರು.</p>.<p>ಸಂಸದ ಬಿ.ವೈ. ರಾಘವೇಂದ್ರ ಅವರು ಶಿವ ಮೊಗ್ಗನಗರಕ್ಕೆ ರೈಲ್ವೆಮೇಲುಸೇತುವೆಸೇರಿ ಹಲವು ಅಭಿವೃದ್ಧಿ ಕಾರ್ಯಗಳಿಗೆ ಸಹಕರಿಸಿದ್ದಾರೆ. ರಾಷ್ಟ್ರೀಯ ಹೆದ್ದಾರಿಕಚೇರಿಯೂ ಶಿವಮೊಗ್ಗದಲ್ಲಿ ಆರಂಭವಾಗಿದೆ.ಆಶ್ರಯ ಮನೆಗಳು, ಕೆರೆಗಳ ಅಭಿವೃದ್ಧಿ, ವಿಮಾನ ನಿಲ್ದಾಣ, ಪಾರ್ಕ್ಗಳಅಭಿವೃದ್ಧಿ, ರಾಷ್ಟ್ರೀಯಹೆದ್ದಾರಿ, ಸಾಗರ ರಸ್ತೆವಿಸ್ತರಣೆ ಕಾರ್ಯಗಳು ಜಿಲ್ಲೆಯ ಪ್ರಗತಿಯ ದ್ಯೋತಕ. ಇವೆಲ್ಲವೂ ಮೂವರಕೊಡುಗೆ ಎಂದು ಸ್ಮರಿಸಿದರು.</p>.<p>ಪತ್ರಿಕಾಗೋಷ್ಠಿಯಲ್ಲಿ ಮೇಯರ್ ಸುವರ್ಣಾಶಂಕರ್, ಉಪ ಮೇಯರ್ ಸುರೇಖಾ ಮುರಳೀಧರ್, ಕುವೆಂಪು ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯ ಬಳ್ಳೆಕೆರೆ ಸಂತೋಷ್, ಬಿಜೆಪಿ ಮುಖಂಡರಾದ ಜಗದೀಶ್, ಮೋಹನ್ ರೆಡ್ಡಿ, ಶಶಿಧರ್, ನಾಗರಾಜ್<br />ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿವಮೊಗ್ಗ: </strong>ಮಹಾತ್ಮ ಗಾಂಧಿ ನಗರೋತ್ಥಾನ ಯೋಜನೆಯಲ್ಲಿ ನಗರದ ಅಭಿವೃದ್ಧಿಗೆ ₹ 125 ಕೋಟಿ ಬಿಡುಗಡೆಯಾಗಿದೆ ಎಂದುಪಾಲಿಕೆ ಆಡಳಿತ ಪಕ್ಷದ ನಾಯಕ ಎಸ್.ಎನ್. ಚನ್ನಬಸಪ್ಪ ಹೇಳಿದರು.</p>.<p>ಜಿಲ್ಲೆಯ ಬ್ರಹ್ಮ, ವಿಷ್ಣು, ಮಹೇಶ್ವರರಾದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಸಚಿವ ಕೆ.ಎಸ್.ಈಶ್ವರಪ್ಪ, ಸಂಸದ ಬಿ.ವೈ. ರಾಘವೇಂದ್ರ ಅವರ ನೆರವಿನಿಂದ ನಗರದಅಭಿವೃದ್ಧಿಗೆ ಕೋಟ್ಯಂತರ ರೂಪಾಯಿ ಅನುದಾನ ಹರಿದುಬರುತ್ತಿದೆ. ನಗರೋತ್ಥಾನ ಯೋಜನೆಯ ಅನುದಾನವನ್ನು ಸ್ಮಾರ್ಟ್ ಸಿಟಿ ಅನುಷ್ಠಾನಗೊಳ್ಳದ ವಾರ್ಡ್ಗಳಮೂಲ ಸೌಲಭ್ಯಕ್ಕಾಗಿ ಬಳಸಿಕೊಳ್ಳಲಾಗುವುದು ಎಂದು ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.</p>.<p>ಸಚಿವ ಕೆ.ಎಸ್. ಈಶ್ವರಪ್ಪ ಅವರು ₹ 136ಕೋಟಿ ಬಿಡುಗಡೆ ಮಾಡಿ<br />ದ್ದಾರೆ. ಈ ಹಣದಲ್ಲಿ ಶಾಲೆ, ಪಾರ್ಕ್ಗಳ ಅಭಿವೃದ್ಧಿ, ಅಂಗನವಾಡಿ, ರಸ್ತೆ, ಕುಡಿಯುವ ನೀರು ಸೇರಿ ಮೂಲಸೌಕರ್ಯಕ್ಕಾಗಿ ವಿನಿಯೋಗ ಮಾಡಲಾಗುವುದು ಎಂದರು.</p>.<p>ಸಂಸದ ಬಿ.ವೈ. ರಾಘವೇಂದ್ರ ಅವರು ಶಿವ ಮೊಗ್ಗನಗರಕ್ಕೆ ರೈಲ್ವೆಮೇಲುಸೇತುವೆಸೇರಿ ಹಲವು ಅಭಿವೃದ್ಧಿ ಕಾರ್ಯಗಳಿಗೆ ಸಹಕರಿಸಿದ್ದಾರೆ. ರಾಷ್ಟ್ರೀಯ ಹೆದ್ದಾರಿಕಚೇರಿಯೂ ಶಿವಮೊಗ್ಗದಲ್ಲಿ ಆರಂಭವಾಗಿದೆ.ಆಶ್ರಯ ಮನೆಗಳು, ಕೆರೆಗಳ ಅಭಿವೃದ್ಧಿ, ವಿಮಾನ ನಿಲ್ದಾಣ, ಪಾರ್ಕ್ಗಳಅಭಿವೃದ್ಧಿ, ರಾಷ್ಟ್ರೀಯಹೆದ್ದಾರಿ, ಸಾಗರ ರಸ್ತೆವಿಸ್ತರಣೆ ಕಾರ್ಯಗಳು ಜಿಲ್ಲೆಯ ಪ್ರಗತಿಯ ದ್ಯೋತಕ. ಇವೆಲ್ಲವೂ ಮೂವರಕೊಡುಗೆ ಎಂದು ಸ್ಮರಿಸಿದರು.</p>.<p>ಪತ್ರಿಕಾಗೋಷ್ಠಿಯಲ್ಲಿ ಮೇಯರ್ ಸುವರ್ಣಾಶಂಕರ್, ಉಪ ಮೇಯರ್ ಸುರೇಖಾ ಮುರಳೀಧರ್, ಕುವೆಂಪು ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯ ಬಳ್ಳೆಕೆರೆ ಸಂತೋಷ್, ಬಿಜೆಪಿ ಮುಖಂಡರಾದ ಜಗದೀಶ್, ಮೋಹನ್ ರೆಡ್ಡಿ, ಶಶಿಧರ್, ನಾಗರಾಜ್<br />ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>