ಚಿನ್ನಿಕಟ್ಟೆ ಪಶು ವೈದ್ಯಾಧಿಕಾರಿ ಡಾ.ಬಿ. ಸುರೇಶ್, ‘ಕುರಿಗಳ ಅನಾರೋಗ್ಯದ ಬಗ್ಗೆ ಮಾಹಿತಿ ಬಂದ ತಕ್ಷಣ 20 ಕುರಿಗಳಿಗೆ ಚಿಕಿತ್ಸೆ ನೀಡಿದರೂ ಅವುಗಳ ಸಾವಿನ ಸಂಖ್ಯೆ ಹೆಚ್ಚಾಯಿತು. ಅರಣ್ಯದಲ್ಲಿ ಬೆಳೆದ ಯಾವುದೋ ವಿಷದ ಸೊಪ್ಪು ಸೇವನೆ ಮಾಡಿರುವುದೇ ಇದಕ್ಕೆ ಕಾರಣವಾಗಿರಬಹುದು. ಮೃತಪಟ್ಟ ಕುರಿಗಳ ಕರುಳು, ಶ್ವಾಸಕೋಶ, ಹೃದಯ ಮತ್ತು ಕಿಡ್ನಿಯ ಮಾದರಿಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿಕೊಡಲಾಗಿದೆ. ಮರಣೋತ್ತರ ಪರೀಕ್ಷೆ ವರದಿ ಬಂದ ಕೂಡಲೇ ಸರ್ಕಾರದಿಂದ ಪರಿಹಾರ ಕೊಡಿಸಲು ಕ್ರಮ ಕೈಗೊಳ್ಳಲಾಗುವುದು’ ಎಂದು ‘ಪ್ರಜಾವಾಣಿ’ಗೆ ಮಾಹಿತಿ ನೀಡಿದರು.