‘ನಗರದಲ್ಲಿ ನಡೆದ ಸಂಕಲ್ಪ ಸಭೆಯಲ್ಲಿ ಈ ಬಗ್ಗೆ ಚರ್ಚೆ ನಡೆದಿದ್ದು, ದಿನಾಂಕ ಅಂತಿಮಗೊಂಡಿಲ್ಲ. ದೆಹಲಿಯಲ್ಲಿ ರೈತ ಹೋರಾಟ ಮುನ್ನಡೆಸುತ್ತಿರುವ ಸಂಯುಕ್ತ ಕಿಸಾನ್ ಮೋರ್ಚಾದ ಮುಖಂಡರಾದ ಡಾ.ದರ್ಶನ್ ಪಾಲ್, ಬಲ್ಬೀರ್ ಸಿಂಗ್ ರಾಜೇವಾಲ್ ಮತ್ತು ಬಿಕೆಯು ಮುಖ್ಯಸ್ಥ ರಾಕೇಶ್ ಟಿಕಾಯತ್ ಅವರನ್ನು ಆಹ್ವಾನಿಸಲು ತೀರ್ಮಾನಿಸಲಾಗಿದೆ. ರಾಜ್ಯ ರೈತ ಸಂಘದ ಮುಖಂಡರಾದ ಕೋಡಿಹಳ್ಳಿ ಚಂದ್ರಶೇಖರ್, ಬಡಗಲಪುರ ನಾಗೇಂದ್ರ ಸೇರಿ ವಿವಿಧ ರೈತ ಮುಖಂಡರು, ದಲಿತ ಮುಖಂಡರು, ಎಡಪಕ್ಷಗಳ ಮುಖಂಡರು, ಕಾರ್ಮಿಕ ಮುಖಂಡರು, ಮಹಿಳಾ ಮುಖಂಡರು ಪಾಲ್ಗೊಳ್ಳಲಿದ್ದಾರೆ’ ಎಂದು ರಾಜ್ಯ ರೈತ ಸಂಘದ ಗೌರವಾಧ್ಯಕ್ಷ ಎಚ್.ಆರ್. ಬಸವರಾಜಪ್ಪ ತಿಳಿಸಿದ್ದಾರೆ.