<p><strong>ಸಾಗರ: ಪಶ್ಚಿಮಘಟ್ಟ ಕಾರ್ಯಪಡೆ 2010ರಲ್ಲಿ ಜಾರಿಗೆ ತಂದ ಕಾನು ಅರಣ್ಯ ಯೋಜನೆಯಿಂದ 20,000 ಎಕರೆಯಷ್ಟು ಅರಣ್ಯ ಪ್ರದೇಶದ ರಕ್ಷಣೆ ಸಾಧ್ಯವಾಗಿದೆ ಎಂದು ಇಲ್ಲಿನ ಉಪ ಅರಣ್ಯ ಸಂರಕ್ಷಣಾಧಿಕಾರಿ ಮೋಹನ್ ಕುಮಾರ್ ಹೇಳಿದರು. </strong></p>.<p><strong>ತಾಲ್ಲೂಕಿನ ಹೆಗ್ಗೋಡು-ಸಂಪೆಕೈ ಗ್ರಾಮದಲ್ಲಿ ವೃಕ್ಷಲಕ್ಷ ಆಂದೋಲನ ಬುಧವಾರ ಏರ್ಪಡಿಸಿದ್ದ ಸುಸ್ಥಿರ ಅಭಿವೃದ್ಧಿ ಕುರಿತ ಜಾಗೃತಿ ಅಭಿಯಾನ ವೃಕ್ಷಾರೋಪಣ, ಪ್ರಕೃತಿ ವಂದನಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</strong></p>.<p><strong>ಅರಣ್ಯ ಪ್ರದೇಶವನ್ನು ಸಂರಕ್ಷಿಸುವ ನಿಟ್ಟಿನಲ್ಲಿ ನಿರ್ದಿಷ್ಟ ಯೋಜನೆಗಳನ್ನು ರೂಪಿಸಬೇಕು. ಅದನ್ನು ಕಾರ್ಯಗತಗೊಳಿಸುವ ಇಚ್ಛಾಶಕ್ತಿಯೂ ಇರಬೇಕು. ಪಶ್ಚಿಮಘಟ್ಟ ಅಭಿವೃದ್ಧಿ ಕಾರ್ಯಪಡೆಯಿಂದ ಈ ನಿಟ್ಟಿನಲ್ಲಿ ಸಕಾರಾತ್ಮಕ ಕೆಲಸಗಳು ನಡೆದಿವೆ. ಅರಣ್ಯ ಉಳಿಸುವ ಕಾರ್ಯಕ್ಕೆ ಪ್ರತಿಯೊಬ್ಬರೂ ಕೈ ಜೋಡಿಸಬೇಕು ಎಂದರು.</strong></p>.<p><strong>ಬೆಟ್ಟ, ಕಾನು ಸಂರಕ್ಷಣೆ ಅಭಿಯಾನ ಉತ್ತರಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಗ್ರಾಮ ಅರಣ್ಯ ಸಮಿತಿಯ ಸಹಕಾರದೊಂದಿಗೆ ನಡೆಯುತ್ತಿದೆ. ಈ ಮೂಲಕ ಸುಸ್ಥಿರ ಅಭಿವೃದ್ಧಿಯ ಮಹತ್ವವನ್ನು ಮನದಟ್ಟು ಮಾಡಲು ಒತ್ತು ನೀಡಲಾಗುತ್ತಿದೆ ಎಂದು ವೃಕ್ಷಲಕ್ಷ ಆಂದೋಲನ ಸಂಸ್ಥೆಯ ಅನಂತ ಹೆಗಡೆ ಅಶೀಸರ ತಿಳಿಸಿದರು.</strong></p>.<p><strong>ಪರಿಸರದಲ್ಲಿನ ಜೀವ ವೈವಿಧ್ಯವನ್ನು ಉಳಿಸಿಕೊಳ್ಳುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ. ಈ ಮೂಲಕ ಪರಿಸರದ ಸಮತೋಲನವನ್ನು ಕಾಪಾಡಿಕೊಳ್ಳುವ ಜವಾಬ್ದಾರಿಯನ್ನು ನಿರ್ವಹಿಸಬೇಕಿದೆ ಎಂದು ಪರಿಸರ ತಜ್ಞ ಆನೆಗುಳಿ ಸುಬ್ರಾವ್ ಹೇಳಿದರು.</strong></p>.<p><strong>ಪ್ರಮುಖರಾದ ಕೇಶವ ಸಂಪೆಕೈ, ಬಿ.ಎಚ್.ರಾಘವೇಂದ್ರ, ಶ್ರೀಪಾದ ಬಿಚ್ಚುಗತ್ತಿ, ಕವಲಕೋಡು ವೆಂಕಟೇಶ್, ಎಂ.ಜಿ.ರಾಮಚಂದ್ರ, ರಂಗನಾಥ್, ಅಣ್ಣಪ್ಪ, ಶ್ರೀಕಂಠ ಗೌಡ, ಗಣಪತಿ ಬಿಸಲಕೊಪ್ಪ ಇದ್ದರು.</strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಾಗರ: ಪಶ್ಚಿಮಘಟ್ಟ ಕಾರ್ಯಪಡೆ 2010ರಲ್ಲಿ ಜಾರಿಗೆ ತಂದ ಕಾನು ಅರಣ್ಯ ಯೋಜನೆಯಿಂದ 20,000 ಎಕರೆಯಷ್ಟು ಅರಣ್ಯ ಪ್ರದೇಶದ ರಕ್ಷಣೆ ಸಾಧ್ಯವಾಗಿದೆ ಎಂದು ಇಲ್ಲಿನ ಉಪ ಅರಣ್ಯ ಸಂರಕ್ಷಣಾಧಿಕಾರಿ ಮೋಹನ್ ಕುಮಾರ್ ಹೇಳಿದರು. </strong></p>.<p><strong>ತಾಲ್ಲೂಕಿನ ಹೆಗ್ಗೋಡು-ಸಂಪೆಕೈ ಗ್ರಾಮದಲ್ಲಿ ವೃಕ್ಷಲಕ್ಷ ಆಂದೋಲನ ಬುಧವಾರ ಏರ್ಪಡಿಸಿದ್ದ ಸುಸ್ಥಿರ ಅಭಿವೃದ್ಧಿ ಕುರಿತ ಜಾಗೃತಿ ಅಭಿಯಾನ ವೃಕ್ಷಾರೋಪಣ, ಪ್ರಕೃತಿ ವಂದನಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</strong></p>.<p><strong>ಅರಣ್ಯ ಪ್ರದೇಶವನ್ನು ಸಂರಕ್ಷಿಸುವ ನಿಟ್ಟಿನಲ್ಲಿ ನಿರ್ದಿಷ್ಟ ಯೋಜನೆಗಳನ್ನು ರೂಪಿಸಬೇಕು. ಅದನ್ನು ಕಾರ್ಯಗತಗೊಳಿಸುವ ಇಚ್ಛಾಶಕ್ತಿಯೂ ಇರಬೇಕು. ಪಶ್ಚಿಮಘಟ್ಟ ಅಭಿವೃದ್ಧಿ ಕಾರ್ಯಪಡೆಯಿಂದ ಈ ನಿಟ್ಟಿನಲ್ಲಿ ಸಕಾರಾತ್ಮಕ ಕೆಲಸಗಳು ನಡೆದಿವೆ. ಅರಣ್ಯ ಉಳಿಸುವ ಕಾರ್ಯಕ್ಕೆ ಪ್ರತಿಯೊಬ್ಬರೂ ಕೈ ಜೋಡಿಸಬೇಕು ಎಂದರು.</strong></p>.<p><strong>ಬೆಟ್ಟ, ಕಾನು ಸಂರಕ್ಷಣೆ ಅಭಿಯಾನ ಉತ್ತರಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಗ್ರಾಮ ಅರಣ್ಯ ಸಮಿತಿಯ ಸಹಕಾರದೊಂದಿಗೆ ನಡೆಯುತ್ತಿದೆ. ಈ ಮೂಲಕ ಸುಸ್ಥಿರ ಅಭಿವೃದ್ಧಿಯ ಮಹತ್ವವನ್ನು ಮನದಟ್ಟು ಮಾಡಲು ಒತ್ತು ನೀಡಲಾಗುತ್ತಿದೆ ಎಂದು ವೃಕ್ಷಲಕ್ಷ ಆಂದೋಲನ ಸಂಸ್ಥೆಯ ಅನಂತ ಹೆಗಡೆ ಅಶೀಸರ ತಿಳಿಸಿದರು.</strong></p>.<p><strong>ಪರಿಸರದಲ್ಲಿನ ಜೀವ ವೈವಿಧ್ಯವನ್ನು ಉಳಿಸಿಕೊಳ್ಳುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ. ಈ ಮೂಲಕ ಪರಿಸರದ ಸಮತೋಲನವನ್ನು ಕಾಪಾಡಿಕೊಳ್ಳುವ ಜವಾಬ್ದಾರಿಯನ್ನು ನಿರ್ವಹಿಸಬೇಕಿದೆ ಎಂದು ಪರಿಸರ ತಜ್ಞ ಆನೆಗುಳಿ ಸುಬ್ರಾವ್ ಹೇಳಿದರು.</strong></p>.<p><strong>ಪ್ರಮುಖರಾದ ಕೇಶವ ಸಂಪೆಕೈ, ಬಿ.ಎಚ್.ರಾಘವೇಂದ್ರ, ಶ್ರೀಪಾದ ಬಿಚ್ಚುಗತ್ತಿ, ಕವಲಕೋಡು ವೆಂಕಟೇಶ್, ಎಂ.ಜಿ.ರಾಮಚಂದ್ರ, ರಂಗನಾಥ್, ಅಣ್ಣಪ್ಪ, ಶ್ರೀಕಂಠ ಗೌಡ, ಗಣಪತಿ ಬಿಸಲಕೊಪ್ಪ ಇದ್ದರು.</strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>