ಶಿವಮೊಗ್ಗ: ಕುವೆಂಪು ರಂಗಮಂದಿರದಲ್ಲಿಡಿ.20ರ ಸಂಜೆ 6ಕ್ಕೆಬಸವ ಕೇಂದ್ರದ 252ನೇ ಶರಣ ಸಂಗಮ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಹುಣಸಘಟ್ಟದ ಎಚ್.ಎಂ.ಮಲ್ಲಿಕಾರ್ಜುನಪ್ಪ, ಲಿಂಗಮ್ಮ ಮಲ್ಲಿಕಾರ್ಜುನಪ್ಪ,ಶಾರದಾ ಎಚ್.ಎಂ.ಚಂದ್ರಶೇಖರಪ್ಪ ದತ್ತಿ ನೆರವಿನಲ್ಲಿ ಈ ಕಾರ್ಯಕ್ರಮ ಆಯೋಜಿಸಲಾಗಿದೆ.ಸಾಣೇಹಳ್ಳಿ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ, ಬಸವಕೇಂದ್ರದ ಬಸವ ಮರುಳಸಿದ್ದ ಸ್ವಾಮೀಜಿ ಸಾನಿಧ್ಯ ವಹಿಸುವರು. ಹಿರಿಯ ಸಾಹಿತಿ ಗೊ.ರು.ಚನ್ನಬಸಪ್ಪ ಉಪನ್ಯಾಸ ನೀಡುವರು ಎಂದು ಬಸವ ಕೇಂದ್ರದ ಅಧ್ಯಕ್ಷ ಜಿ.ಬೆನಕಪ್ಪಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.
ಮಾಜಿ ಶಾಸಕ ಕೋಣಂದೂರು ಲಿಂಗಪ್ಪ ಅವರ ಪುತ್ರಿ, ಇಸ್ರೋ ವಿಜ್ಞಾನಿ ಕೆ.ಎಲ್.ಶಿವಾನಿ, ಬೆಳಗಾವಿ ಡಿವೈಎಸ್ಪಿ ಪ್ರಿಯದರ್ಶಿನಿ ಈಶ್ವರ್, ಅಂತರರಾಷ್ಟ್ರೀಯ ವೇಟ್ಲಿಫ್ಟರ್ಸಿ.ಸುಲೋಚನಾ, ಯುಪಿಎಸ್ಸಿಪರೀಕ್ಷೆಯಲ್ಲಿ ದೇಶಕ್ಕೇ ಪ್ರಥಮ ಸ್ಥಾನ ಪಡೆದ ಕೆ.ಆರ್.ನಂದಿನಿ ಅವರನ್ನು ಸನ್ಮಾನಿಸಲಾಗುವುದು. ಕಾರ್ಯಕ್ರಮದ ನಂತರ ಅಕ್ಕನ ಬಳಗ ವಚನಗಾಯನನಡೆಸಿಕೊಡಲಿದೆ ಎಂದರು.
ಹುಣಸಘಟ್ಟದ ಸಾಹುಕಾರ ಮಲ್ಲಪ್ಪನವರ ವಂಶಸ್ಥರು ಕಾರ್ಯಕ್ರಮಕ್ಕೆ ನೆರವು ನೀಡುವರು. ಸಾಧಕರು ತಮ್ಮ ಅನುಭವಗಳನ್ನು ಹಂಚಿಕೊಂಡರೆ ಮುಂದಿನ ಪೀಳಿಗೆಗೆ ಅನುಕೂಲವಾಗಲಿದೆ ಎಂಬ ಕಾರಣಕ್ಕೆ ಈ ಕಾರ್ಯಕ್ರಮ ಆಯೋಜಿಸಲಾಗುತ್ತಿದೆ ಎಂದು ಮಾಜಿ ಶಾಸಕ ಎಚ್.ಎಂ.ಚಂದ್ರಶೇಖರಪ್ಪ ಹೇಳಿದರು.