<p><strong>ಭದ್ರಾವತಿ: </strong>ನಗರಸಭೆ 29ನೇ ವಾರ್ಡ್ನ ಉಪಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿ ನಾಗರತ್ನ ಅನಿಲಕುಮಾರ್ ವಿಜಯಿಯಾಗಿದ್ದಾರೆ.</p>.<p>ಅವರ ಪ್ರತಿಸ್ಪರ್ಧಿ ಕಾಂಗ್ರೆಸ್ನ ಲೋಹಿತಾ ನಂಜಪ್ಪ ಅವರನ್ನು 450 ಮತಗಳ ಅಂತರದ ಸೋಲಿಸಿರುವ ನಾಗರತ್ನ ಪ್ರಥಮ ಬಾರಿಗೆ ನಗರಸಭೆ ಪ್ರವೇಶ ಪಡೆದಿದ್ದಾರೆ. ಅವರ ಪತಿ ಅನಿಲಕುಮಾರ್ ಅದೇ ಕ್ಷೇತ್ರದಿಂದ ಕಳೆದ ಬಾರಿ ನಗರಸಭಾ ಸದಸ್ಯರಾಗಿದ್ದರು.</p>.<p>ಅಪ್ಪಾಜಿ ನಾಮಬಲದ ಶಕ್ತಿ ಹೊಂದಿರುವ ಈ ಕ್ಷೇತ್ರವನ್ನು ಉಳಿಸಿಕೊಳ್ಳುವಲ್ಲಿ ಜೆಡಿಎಸ್ ಯಶಸ್ವಿಯಾಗಿದೆ. ಪ್ರಥಮ ಸುತ್ತಿನಲ್ಲೇ ಪಕ್ಷದ ಅಭ್ಯರ್ಥಿ ಮುನ್ನಡೆ ಸಾಧಿಸಿರುವ ವಿಷಯ ತಿಳಿಯುತ್ತಿದ್ದಂತೆ ಕಾರ್ಯಕರ್ತರು ದ್ವಿಚಕ್ರ ವಾಹನದಲ್ಲಿ ಏಣಿಕಾ ಕೇಂದ್ರದ ಮುಂಚೆ ಜಮಾಯಿಸಿ ಸಂಭ್ರಮ ಆಚರಿಸಿದರು.</p>.<p>ನಾಗರತ್ನ ಅಧಿಕೃತ ಆಯ್ಕೆಯ ಘೋಷಣೆ ಸಂದರ್ಭದಲ್ಲಿ ಮಾಜಿ ಶಾಸಕ ಎಂ.ಜೆ.ಅಪ್ಪಾಜಿ ಪತ್ನಿ ಶಾರದಾ ಅಪ್ಪಾಜಿ, ಪುತ್ರ ಎಂ.ಎ.ಅಜಿತ್, ಪಕ್ಷದ ಮುಖಂಡರಾದ ಜೆ.ಪಿ.ಯೋಗೀಶ್, ಟಿ.ಡಿ.ಶ್ರೀಧರ್, ಮಾಜಿ ನಗರಸಭಾ ಸದಸ್ಯರಾದ ರಾಜು, ಬದರಿನಾರಾಯಣ, ಅನಿಲಕುಮಾರ್, ಎ.ಟಿ.ರವಿ, ಎಚ್.ಆರ್.ಲೋಕೇಶ್ವರರಾವ್ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಭದ್ರಾವತಿ: </strong>ನಗರಸಭೆ 29ನೇ ವಾರ್ಡ್ನ ಉಪಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿ ನಾಗರತ್ನ ಅನಿಲಕುಮಾರ್ ವಿಜಯಿಯಾಗಿದ್ದಾರೆ.</p>.<p>ಅವರ ಪ್ರತಿಸ್ಪರ್ಧಿ ಕಾಂಗ್ರೆಸ್ನ ಲೋಹಿತಾ ನಂಜಪ್ಪ ಅವರನ್ನು 450 ಮತಗಳ ಅಂತರದ ಸೋಲಿಸಿರುವ ನಾಗರತ್ನ ಪ್ರಥಮ ಬಾರಿಗೆ ನಗರಸಭೆ ಪ್ರವೇಶ ಪಡೆದಿದ್ದಾರೆ. ಅವರ ಪತಿ ಅನಿಲಕುಮಾರ್ ಅದೇ ಕ್ಷೇತ್ರದಿಂದ ಕಳೆದ ಬಾರಿ ನಗರಸಭಾ ಸದಸ್ಯರಾಗಿದ್ದರು.</p>.<p>ಅಪ್ಪಾಜಿ ನಾಮಬಲದ ಶಕ್ತಿ ಹೊಂದಿರುವ ಈ ಕ್ಷೇತ್ರವನ್ನು ಉಳಿಸಿಕೊಳ್ಳುವಲ್ಲಿ ಜೆಡಿಎಸ್ ಯಶಸ್ವಿಯಾಗಿದೆ. ಪ್ರಥಮ ಸುತ್ತಿನಲ್ಲೇ ಪಕ್ಷದ ಅಭ್ಯರ್ಥಿ ಮುನ್ನಡೆ ಸಾಧಿಸಿರುವ ವಿಷಯ ತಿಳಿಯುತ್ತಿದ್ದಂತೆ ಕಾರ್ಯಕರ್ತರು ದ್ವಿಚಕ್ರ ವಾಹನದಲ್ಲಿ ಏಣಿಕಾ ಕೇಂದ್ರದ ಮುಂಚೆ ಜಮಾಯಿಸಿ ಸಂಭ್ರಮ ಆಚರಿಸಿದರು.</p>.<p>ನಾಗರತ್ನ ಅಧಿಕೃತ ಆಯ್ಕೆಯ ಘೋಷಣೆ ಸಂದರ್ಭದಲ್ಲಿ ಮಾಜಿ ಶಾಸಕ ಎಂ.ಜೆ.ಅಪ್ಪಾಜಿ ಪತ್ನಿ ಶಾರದಾ ಅಪ್ಪಾಜಿ, ಪುತ್ರ ಎಂ.ಎ.ಅಜಿತ್, ಪಕ್ಷದ ಮುಖಂಡರಾದ ಜೆ.ಪಿ.ಯೋಗೀಶ್, ಟಿ.ಡಿ.ಶ್ರೀಧರ್, ಮಾಜಿ ನಗರಸಭಾ ಸದಸ್ಯರಾದ ರಾಜು, ಬದರಿನಾರಾಯಣ, ಅನಿಲಕುಮಾರ್, ಎ.ಟಿ.ರವಿ, ಎಚ್.ಆರ್.ಲೋಕೇಶ್ವರರಾವ್ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>