<p><strong>ಹೊಸನಗರ:</strong> ತಾಲ್ಲೂಕಿನಬಾಣಿಗ ಗ್ರಾಮದಲ್ಲಿ ಅಕ್ರಮವಾಗಿ ಬಾವಿಯೊಂದರಲ್ಲಿ ಬಚ್ಚಿಟ್ಟಿದ್ದ ₹ 3 ಲಕ್ಷ ಮೌಲ್ಯದ 38 ಕೆ.ಜಿ ಶ್ರೀಗಂಧ ವಶಕ್ಕೆ ಪಡೆದಿರುವ ಅರಣ್ಯ ಇಲಾಖೆ ಅಧಿಕಾರಿಗಳು ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ.</p>.<p>ಖಚಿತ ಮಾಹಿತಿ ಮೇಲೆ ದಾಳಿ ನಡೆಸಿದ ಶಿವಮೊಗ್ಗದ ಅರಣ್ಯ ಸಂಚಾರ ದಳ ಮತ್ತು ಹೊಸನಗರ ಅರಣ್ಯ ವಲಯ ಅಧಿಕಾರಿಗಳ ತಂಡ ಜಂಟಿ ಕಾರ್ಯಾಚರಣೆ ನಡೆಸಿ ಶ್ರೀಗಂಧದ ತುಂಡುಗಳನ್ನು ವಶಪಡಿಸಿಕೊಂಡಿದೆ.</p>.<p>ಬಾಣಿಗ ವಾಸಿ ಹನೀಫ್ ಸಾಬ್ ಅಕ್ರಮವಾಗಿ <strong>ಶ್ರೀಗಂಧದ ತುಂಡುಗಳನ್ನು</strong> ಸಂಗ್ರಹಿಸಿದ್ದರು. ಯಾರಿಗೂ ಗೊತ್ತಾಗದಂತೆ ಬಾವಿಯೊಳಗೆ ಪಂಪ್ಸೆಟ್ ಇಳಿಸುವಂತೆ ಶ್ರೀಗಂಧವನ್ನು ಚೀಲದೊಳಗೆ ತುಂಬಿ ಬಾವಿಯೊಳಗೆ ಬಚ್ಚಿಟ್ಟಿದ್ದರು.</p>.<p>ಕಳವಿಗೆ ಸಹಕರಿಸಿದ ಆರೋಪಿಗಳಾದ ದುಮ್ಮಾ ನಿವಾಸಿ ಮಂಜುನಾಥ್, ಹೊಸಕೆಸರೆ ನಿವಾಸಿ ಹಾಲೇಶ್ ಮತ್ತು ಸಾಗರದ ಶಿವಪ್ಪನಾಯಕ ರಸ್ತೆ ನಿವಾಸಿ ಮಂಜುನಾಥ್ ಅವರನ್ನು ಬಂಧಿಸಲಾಗಿದೆ.</p>.<p>ಕಾರ್ಯಾಚರಣೆಯಲ್ಲಿ ಶಿವಮೊಗ್ಗ ಅರಣ್ಯ ಸಂಚಾರ ದಳದ ಎಸಿಎಫ್ ಬಾಲಚಂದ್ರ, ಹೊಸನಗರ ಎಸಿಎಫ್ ಶಿವಮೂರ್ತಿ, ವಲಯ ಅರಣ್ಯಾಧಿಕಾರಿ ಕೃಷ್ಣಯ್ಯಗೌಡ, ಅರಣ್ಯ ಇಲಾಖೆ ಸಿಬ್ಬಂದಿ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೊಸನಗರ:</strong> ತಾಲ್ಲೂಕಿನಬಾಣಿಗ ಗ್ರಾಮದಲ್ಲಿ ಅಕ್ರಮವಾಗಿ ಬಾವಿಯೊಂದರಲ್ಲಿ ಬಚ್ಚಿಟ್ಟಿದ್ದ ₹ 3 ಲಕ್ಷ ಮೌಲ್ಯದ 38 ಕೆ.ಜಿ ಶ್ರೀಗಂಧ ವಶಕ್ಕೆ ಪಡೆದಿರುವ ಅರಣ್ಯ ಇಲಾಖೆ ಅಧಿಕಾರಿಗಳು ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ.</p>.<p>ಖಚಿತ ಮಾಹಿತಿ ಮೇಲೆ ದಾಳಿ ನಡೆಸಿದ ಶಿವಮೊಗ್ಗದ ಅರಣ್ಯ ಸಂಚಾರ ದಳ ಮತ್ತು ಹೊಸನಗರ ಅರಣ್ಯ ವಲಯ ಅಧಿಕಾರಿಗಳ ತಂಡ ಜಂಟಿ ಕಾರ್ಯಾಚರಣೆ ನಡೆಸಿ ಶ್ರೀಗಂಧದ ತುಂಡುಗಳನ್ನು ವಶಪಡಿಸಿಕೊಂಡಿದೆ.</p>.<p>ಬಾಣಿಗ ವಾಸಿ ಹನೀಫ್ ಸಾಬ್ ಅಕ್ರಮವಾಗಿ <strong>ಶ್ರೀಗಂಧದ ತುಂಡುಗಳನ್ನು</strong> ಸಂಗ್ರಹಿಸಿದ್ದರು. ಯಾರಿಗೂ ಗೊತ್ತಾಗದಂತೆ ಬಾವಿಯೊಳಗೆ ಪಂಪ್ಸೆಟ್ ಇಳಿಸುವಂತೆ ಶ್ರೀಗಂಧವನ್ನು ಚೀಲದೊಳಗೆ ತುಂಬಿ ಬಾವಿಯೊಳಗೆ ಬಚ್ಚಿಟ್ಟಿದ್ದರು.</p>.<p>ಕಳವಿಗೆ ಸಹಕರಿಸಿದ ಆರೋಪಿಗಳಾದ ದುಮ್ಮಾ ನಿವಾಸಿ ಮಂಜುನಾಥ್, ಹೊಸಕೆಸರೆ ನಿವಾಸಿ ಹಾಲೇಶ್ ಮತ್ತು ಸಾಗರದ ಶಿವಪ್ಪನಾಯಕ ರಸ್ತೆ ನಿವಾಸಿ ಮಂಜುನಾಥ್ ಅವರನ್ನು ಬಂಧಿಸಲಾಗಿದೆ.</p>.<p>ಕಾರ್ಯಾಚರಣೆಯಲ್ಲಿ ಶಿವಮೊಗ್ಗ ಅರಣ್ಯ ಸಂಚಾರ ದಳದ ಎಸಿಎಫ್ ಬಾಲಚಂದ್ರ, ಹೊಸನಗರ ಎಸಿಎಫ್ ಶಿವಮೂರ್ತಿ, ವಲಯ ಅರಣ್ಯಾಧಿಕಾರಿ ಕೃಷ್ಣಯ್ಯಗೌಡ, ಅರಣ್ಯ ಇಲಾಖೆ ಸಿಬ್ಬಂದಿ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>