<p><strong>ಶಿವಮೊಗ್ಗ: </strong>ಹಾನಿಗೊಳಗಾದ ಸ್ಮಾರಕ, ಕಟ್ಟಡಗಳ ಮರು ನಿರ್ಮಾಣಕ್ಕೆ 3ಡಿ ತಂತ್ರಜ್ಞಾನ ಸಹಕಾರಿ ಎಂದು ಜಿಲ್ಲಾ ಪಂಚಾಯಿತಿ ಸಿಇಒ ಎಂ.ಎಲ್. ವೈಶಾಲಿ ಹೇಳಿದರು.</p>.<p>ಇಲ್ಲಿನ ಶಿವಪ್ಪ ನಾಯಕ ಅರಮನೆಯಲ್ಲಿ ಪಾರಂಪರಿಕ ಕಟ್ಟಡಗಳು, ಸ್ಮಾರಕಗಳು, ಅರಮನೆ, ದೇವಸ್ಥಾನಗಳನ್ನು 3ಡಿ ಲೇಸರ್ ತಂತ್ರಜ್ಞಾನ ಬಳಸಿ ಡಿಜಿಟಲೀಕರಣಗೊಳಿಸುವ ಕಾರ್ಯಕ್ಕೆ ಬುಧವಾರ ಚಾಲನೆ ನೀಡಿ ಅವರು ಮಾತನಾಡಿದರು.</p>.<p>ಜಿಲ್ಲೆಯಲ್ಲಿ 12 ಪಾರಂಪರಿಕ ಕಟ್ಟಡ, ಅರಮನೆ, ಸ್ಮಾರಕಗಳನ್ನು ಈ ಕಾರ್ಯಕ್ಕಾಗಿ ಗುರುತಿಸಲಾಗಿದೆ. ಈ ತಂತ್ರಜ್ಞಾನ ಸ್ಮಾರಕಗಳ ಮೂಲ ಸ್ವರೂಪವನ್ನು ನಿರ್ಧರಿಸಲು ಮತ್ತು ಪಾರಂಪರಿಕ ತಾಣಗಳ ಸೌಲಭ್ಯಗಳನ್ನು ಸುಧಾರಿಸಲು ಸಹಕಾರಿಯಾಗಲಿದೆ. ಇದರಿಂದ ಡಿಜಿಟಲ್ ಪುನರ್ ನಿರ್ಮಾಣ ಮತ್ತು ಸ್ಮಾರಕಗಳ ಮಾಪನ ವಿಶ್ಲೇಷಣೆ ಮಾಡಬಹುದು ಎಂದರು.</p>.<p>ಶಿವಪ್ಪ ನಾಯಕ ಅರಮನೆ, ಕೋಟೆ ಆಂಜನೇಯ ದೇವಾಲಯ, ಭೀಮೇಶ್ವರ ದೇವಾಲಯ, ಕುಸ್ಕೂರಿನ ಭೀಮೇಶ್ವರ ದೇವಾಲಯ, ಭದ್ರಾವತಿಯ ಲಕ್ಷ್ಮೀ ನರಸಿಂಹ ದೇವಾಲಯ, ಹೊಸನಗರ ತಾಲ್ಲೂಕಿನ ಸಾಲಗೇರಿಯ ಉಮಾಪತಿ ದೇವಾಲಯ, ಶಿವಪ್ಪ ನಾಯಕನ ಗೋಪುರ, ಶಿಕಾರಿಪುರ-ಚಿಕ್ಕಮಾಗಡಿ ಜೈನಬಸ್ತಿ, ನರಸಾಪುರ ಬಸದಿ, ಸೊರಬ ತಾಲ್ಲೂಕಿನ ಪುರಗ್ರಾಮದ ಸೋಮೇಶ್ವರ ದೇವಾಲಯ, ದವನಿ ಭೈಲಿನ ಕಪಿಲೇಶ್ವರ ದೇವಾಲಯಗಳ 3ಡಿ ಡಿಜಿಟಲೀಕರಣ ಕಾರ್ಯ ಕೈಗೊಳ್ಳಲಾಗಿದೆ ಎಂದು ಅವರು ವಿವರಿಸಿದರು.</p>.<p>ಡಿಜಿಟಲೀಕರಣದ ಮೂಲಕ ಸ್ಮಾರಕಗಳ ಅಳತೆ, ಆಳ, ಅಗಲ, ಸ್ಮಾರಕಕ್ಕೆ ಬಳಸಲಾಗಿರುವ ಸಾಮಗ್ರಿ, ನಿರ್ಮಾಣಗೊಂಡ ವರ್ಷ, ಯಾರ ಕಾಲದಲ್ಲಿ ನಿರ್ಮಾಣಗೊಂಡಿದೆ, ವರ್ಷ ಮತ್ತು ಐತಿಹಾಸಿಕ ವಿವರಗಳು, ವಾಸ್ತು ಶಿಲ್ಪದ ಶೈಲಿಯನ್ನು ಸಹ ಕ್ರೋಢೀಕರಿಸಿ ಸಂಗ್ರಹಿಸಲಾಗುತ್ತದೆ. ಈ ಮಾಹಿತಿಯು ಸಂಶೋಧಕರಿಗೆ, ಇತಿಹಾಸಕಾರರಿಗೆ ಅನೇಕ ವಿವರಗಳೊಂದಿಗೆ ಇತಿಹಾಸವನ್ನು ಪುನರ್ ನಿರ್ಮಿಸಲು ಅವಕಾಶ ಕಲ್ಪಿಸುತ್ತದೆ ಎಂದು ಅಭಿಪ್ರಾಯ ಪಟ್ಟರು.</p>.<p>ಕರ್ನಾಟಕ ರಾಜ್ಯ ವಿಜ್ಞಾನ ಮತ್ತು ತಂತ್ರವಿದ್ಯಾ ಮಂಡಳಿಯ ರಾಜಶೇಖರ್, ಸಚಿನ್, ಎನ್ಆರ್ಡಿಎಂಎಸ್ ಸಂಸ್ಥೆಯ ಶಂಕರ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿವಮೊಗ್ಗ: </strong>ಹಾನಿಗೊಳಗಾದ ಸ್ಮಾರಕ, ಕಟ್ಟಡಗಳ ಮರು ನಿರ್ಮಾಣಕ್ಕೆ 3ಡಿ ತಂತ್ರಜ್ಞಾನ ಸಹಕಾರಿ ಎಂದು ಜಿಲ್ಲಾ ಪಂಚಾಯಿತಿ ಸಿಇಒ ಎಂ.ಎಲ್. ವೈಶಾಲಿ ಹೇಳಿದರು.</p>.<p>ಇಲ್ಲಿನ ಶಿವಪ್ಪ ನಾಯಕ ಅರಮನೆಯಲ್ಲಿ ಪಾರಂಪರಿಕ ಕಟ್ಟಡಗಳು, ಸ್ಮಾರಕಗಳು, ಅರಮನೆ, ದೇವಸ್ಥಾನಗಳನ್ನು 3ಡಿ ಲೇಸರ್ ತಂತ್ರಜ್ಞಾನ ಬಳಸಿ ಡಿಜಿಟಲೀಕರಣಗೊಳಿಸುವ ಕಾರ್ಯಕ್ಕೆ ಬುಧವಾರ ಚಾಲನೆ ನೀಡಿ ಅವರು ಮಾತನಾಡಿದರು.</p>.<p>ಜಿಲ್ಲೆಯಲ್ಲಿ 12 ಪಾರಂಪರಿಕ ಕಟ್ಟಡ, ಅರಮನೆ, ಸ್ಮಾರಕಗಳನ್ನು ಈ ಕಾರ್ಯಕ್ಕಾಗಿ ಗುರುತಿಸಲಾಗಿದೆ. ಈ ತಂತ್ರಜ್ಞಾನ ಸ್ಮಾರಕಗಳ ಮೂಲ ಸ್ವರೂಪವನ್ನು ನಿರ್ಧರಿಸಲು ಮತ್ತು ಪಾರಂಪರಿಕ ತಾಣಗಳ ಸೌಲಭ್ಯಗಳನ್ನು ಸುಧಾರಿಸಲು ಸಹಕಾರಿಯಾಗಲಿದೆ. ಇದರಿಂದ ಡಿಜಿಟಲ್ ಪುನರ್ ನಿರ್ಮಾಣ ಮತ್ತು ಸ್ಮಾರಕಗಳ ಮಾಪನ ವಿಶ್ಲೇಷಣೆ ಮಾಡಬಹುದು ಎಂದರು.</p>.<p>ಶಿವಪ್ಪ ನಾಯಕ ಅರಮನೆ, ಕೋಟೆ ಆಂಜನೇಯ ದೇವಾಲಯ, ಭೀಮೇಶ್ವರ ದೇವಾಲಯ, ಕುಸ್ಕೂರಿನ ಭೀಮೇಶ್ವರ ದೇವಾಲಯ, ಭದ್ರಾವತಿಯ ಲಕ್ಷ್ಮೀ ನರಸಿಂಹ ದೇವಾಲಯ, ಹೊಸನಗರ ತಾಲ್ಲೂಕಿನ ಸಾಲಗೇರಿಯ ಉಮಾಪತಿ ದೇವಾಲಯ, ಶಿವಪ್ಪ ನಾಯಕನ ಗೋಪುರ, ಶಿಕಾರಿಪುರ-ಚಿಕ್ಕಮಾಗಡಿ ಜೈನಬಸ್ತಿ, ನರಸಾಪುರ ಬಸದಿ, ಸೊರಬ ತಾಲ್ಲೂಕಿನ ಪುರಗ್ರಾಮದ ಸೋಮೇಶ್ವರ ದೇವಾಲಯ, ದವನಿ ಭೈಲಿನ ಕಪಿಲೇಶ್ವರ ದೇವಾಲಯಗಳ 3ಡಿ ಡಿಜಿಟಲೀಕರಣ ಕಾರ್ಯ ಕೈಗೊಳ್ಳಲಾಗಿದೆ ಎಂದು ಅವರು ವಿವರಿಸಿದರು.</p>.<p>ಡಿಜಿಟಲೀಕರಣದ ಮೂಲಕ ಸ್ಮಾರಕಗಳ ಅಳತೆ, ಆಳ, ಅಗಲ, ಸ್ಮಾರಕಕ್ಕೆ ಬಳಸಲಾಗಿರುವ ಸಾಮಗ್ರಿ, ನಿರ್ಮಾಣಗೊಂಡ ವರ್ಷ, ಯಾರ ಕಾಲದಲ್ಲಿ ನಿರ್ಮಾಣಗೊಂಡಿದೆ, ವರ್ಷ ಮತ್ತು ಐತಿಹಾಸಿಕ ವಿವರಗಳು, ವಾಸ್ತು ಶಿಲ್ಪದ ಶೈಲಿಯನ್ನು ಸಹ ಕ್ರೋಢೀಕರಿಸಿ ಸಂಗ್ರಹಿಸಲಾಗುತ್ತದೆ. ಈ ಮಾಹಿತಿಯು ಸಂಶೋಧಕರಿಗೆ, ಇತಿಹಾಸಕಾರರಿಗೆ ಅನೇಕ ವಿವರಗಳೊಂದಿಗೆ ಇತಿಹಾಸವನ್ನು ಪುನರ್ ನಿರ್ಮಿಸಲು ಅವಕಾಶ ಕಲ್ಪಿಸುತ್ತದೆ ಎಂದು ಅಭಿಪ್ರಾಯ ಪಟ್ಟರು.</p>.<p>ಕರ್ನಾಟಕ ರಾಜ್ಯ ವಿಜ್ಞಾನ ಮತ್ತು ತಂತ್ರವಿದ್ಯಾ ಮಂಡಳಿಯ ರಾಜಶೇಖರ್, ಸಚಿನ್, ಎನ್ಆರ್ಡಿಎಂಎಸ್ ಸಂಸ್ಥೆಯ ಶಂಕರ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>