ಸಾಗರ: ಇಲ್ಲಿನ ಎಸ್.ಎನ್. ನಗರ ಬಡಾವಣೆಯಲ್ಲಿ ಮಂಜುನಾಥ ಎಂಬುವವರು ಮನೆಯೊಂದರಲ್ಲಿ ಅಕ್ರಮವಾಗಿ ಸಂಗ್ರಹಿಸಿದ್ದ ₹ 5 ಲಕ್ಷ ಮೌಲ್ಯದ ಶ್ರೀಗಂಧದ ತುಂಡುಗಳನ್ನು ಪೊಲೀಸ್ ಅರಣ್ಯ ಸಂಚಾರ ದಳದ ಸಿಬ್ಬಂದಿ ಬುಧವಾರ ವಶಪಡಿಸಿಕೊಂಡಿದ್ದಾರೆ.
ಸಿಬ್ಬಂದಿ ದಾಳಿ ನಡೆಸಿದಾಗ ಮಂಜುನಾಥ ಅವರ ಮನೆಯ ಮಹಡಿ ಮೆಟ್ಟಿಲಿನ ಕೆಳಗೆ ಶ್ರೀಗಂಧದ ತುಂಡುಗಳನ್ನು ಸಂಗ್ರಹಿಸಿಟ್ಟಿರುವುದು ಪತ್ತೆಯಾಗಿದೆ. ಆರೋಪಿಯನ್ನು ಬಂಧಿಸಲಾಗಿದೆ.
ಪೊಲೀಸ್ ಅರಣ್ಯ ಸಂಚಾರ ದಳದ ಸಬ್ ಇನ್ಸ್ಪೆಕ್ಟರ್ ಮಲ್ಲಿಕಾರ್ಜುನ ಬಿ., ಸಿಬ್ಬಂದಿ ರಂಗನಾಥ, ರತ್ನಾಕರ, ಗಿರೀಶ್, ವಿಶ್ವನಾಥ, ಮಂಜುನಾಥ ಕಾರ್ಯಾಚರಣೆ ಕೈಗೊಂಡಿದ್ದರು.