<p><strong>ಶಿವಮೊಗ್ಗ: </strong>ಮುಖ್ಯಮಂತ್ರಿ ಸಿದ್ದರಾಮಯ್ಯ ಜಾರಿಗೊಳಿಸಿದ ಅನೇಕ ಭಾಗ್ಯಗಳು ಜನರಿಗೆ ತಲುಪದೆ ಆ ಯೋಜನೆಗಳು ವಿಫಲವಾಗಿವೆ ಎಂದು ಶಾಸಕಿ ಶಾರದಾ ಪೂರ್ಯಾನಾಯ್ಕ ಹೇಳಿದರು.</p>.<p>ಅಂಬೇಡ್ಕರ್ ಭವನದಲ್ಲಿ ಭಾನುವಾರ ಆಯೋಜಿಸಿದ್ದ ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಪರಿಶಿಷ್ಟ ಪಂಗಡ ವಿಭಾಗದ ಪದಾಧಿಕಾರಿಗಳ ಅಧಿಕಾರ ಸ್ವೀಕಾರ ಮತ್ತು ಕಾರ್ಯಕರ್ತರ ಸಭೆ ಉದ್ಘಾಟಿಸಿ ಅವರು ಮಾತನಾಡಿದರು.</p>.<p>ರಾಜ್ಯದ ಕಾಂಗ್ರೆಸ್ ಸರ್ಕಾರದ ಬಹುತೇಕ ನೀರಾವರಿ ಯೋಜನೆಗಳು ವಿಫಲಗೊಂಡಿವೆ. ರೈತರಿಗೆ ಅಗತ್ಯವಿರುವ ಯಾವುದೇ ಯೋಜನೆಗಳನ್ನು ಅನುಷ್ಠಾನಗೊಳಿಸಿಲ್ಲ. ಸರ್ಕಾರದಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದೆ ಎಂದು ದೂರಿದರು.</p>.<p>ನೀರಾವರಿ ಸಚಿವರು ಹಾಗೂ ಸಂಬಂಧಪಟ್ಟವರ ಮೇಲೆ ಜೆಡಿಎಸ್ ನಿರಂತರವಾಗಿ ಒತ್ತಡ ಹಾಕಿದ ಪರಿಣಾಮ ತುಂಗಾ ಏತ ನೀರಾವರಿ ಯೋಜನೆಯ ಮೂಲಕ ಗೌಡನಕೆರೆಗೆ ನೀರು ಹರಿದಿದೆ. ಆದರೆ, ‘ನಮ್ಮಿಂದಲೇ ಅದು ಸಾಧ್ಯವಾಗಿದೆ’ ಎಂದು ಬೇರೆ ಪಕ್ಷದ ಪ್ರತಿನಿಧಿಗಳು ಹೇಳಿಕೊಳ್ಳುತ್ತಿದ್ದಾರೆ ಎಂದು ಟೀಕಿಸಿದರು.</p>.<p>ವಾಲ್ಮೀಕಿ ಸಮಾಜದ ಅಭಿವೃದ್ಧಿಯಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷಗಳು ನಿರ್ಲಕ್ಷ್ಯ ವಹಿಸಿವೆ. ಪರಿಶಿಷ್ಟ ಪಂಗಡಕ್ಕೆ ಸಮಾಜವನ್ನು ಸೇರಿಸುವಲ್ಲಿ ಮಾಜಿ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡರ ಪಾತ್ರಮುಖ್ಯವಾಗಿದೆ. ಜನಪರ ಯೋಜನೆಗಳಜಾರಿಗೊಳಿಸಲು ಜೆಡಿಎಸ್ ಪಕ್ಷಅಧಿಕಾರಕ್ಕೆ ಬರಬೇಕಿದೆ’ ಎಂದರು.</p>.<p>ಜೆಡಿಎಸ್ ಮುಖಂಡ ಎಚ್.ಟಿ.ಬಳಿಗಾರ್ ಮಾತನಾಡಿ, ‘ಕಾಂಗ್ರೆಸ್ ಜಾರಿಗೊಳಿಸಿರುವ ಎಲ್ಲಾ ಭಾಗ್ಯಗಳು ದೌರ್ಭಾಗ್ಯಗಳಾಗಿವೆ. ಕಾಂಗ್ರೆಸ್, ಬಿಜೆಪಿಯಿಂದ ಯಾವುದೇ ಅಭಿವೃದ್ಧಿ ಸಾಧ್ಯವಿಲ್ಲ. ಆದ್ದರಿಂದ ಜೆಡಿಎಸ್ ಅನ್ನು ಜನರು ಬಯಸುತ್ತಿದ್ದಾರೆ’ ಎಂದರು.</p>.<p>ಜೆಡಿಎಸ್ ಎಸ್.ಟಿ ಘಟಕದ ರವಿಕುಮಾರ್, ಗ್ರಾಮಾಂತರ ಘಟಕದ ಕ್ಷೇತ್ರದ ಕಾರ್ಯಾಧ್ಯಕ್ಷ ಕಾಂತರಾಜು, ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ದಾದಾಪೀರ್, ಪ್ರಮುಖರಾದ ಗೀತಾ, ಸತೀಶ್, ನೇತ್ರಾ, ಹನುಮಂತಪ್ಪ, ಹೀರಾನಾಯ್ಕ, ಬಸವರಾಜ್, ಲಿಂಗರಾಜು, ಸದಾಶಿವಪ್ಪ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿವಮೊಗ್ಗ: </strong>ಮುಖ್ಯಮಂತ್ರಿ ಸಿದ್ದರಾಮಯ್ಯ ಜಾರಿಗೊಳಿಸಿದ ಅನೇಕ ಭಾಗ್ಯಗಳು ಜನರಿಗೆ ತಲುಪದೆ ಆ ಯೋಜನೆಗಳು ವಿಫಲವಾಗಿವೆ ಎಂದು ಶಾಸಕಿ ಶಾರದಾ ಪೂರ್ಯಾನಾಯ್ಕ ಹೇಳಿದರು.</p>.<p>ಅಂಬೇಡ್ಕರ್ ಭವನದಲ್ಲಿ ಭಾನುವಾರ ಆಯೋಜಿಸಿದ್ದ ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಪರಿಶಿಷ್ಟ ಪಂಗಡ ವಿಭಾಗದ ಪದಾಧಿಕಾರಿಗಳ ಅಧಿಕಾರ ಸ್ವೀಕಾರ ಮತ್ತು ಕಾರ್ಯಕರ್ತರ ಸಭೆ ಉದ್ಘಾಟಿಸಿ ಅವರು ಮಾತನಾಡಿದರು.</p>.<p>ರಾಜ್ಯದ ಕಾಂಗ್ರೆಸ್ ಸರ್ಕಾರದ ಬಹುತೇಕ ನೀರಾವರಿ ಯೋಜನೆಗಳು ವಿಫಲಗೊಂಡಿವೆ. ರೈತರಿಗೆ ಅಗತ್ಯವಿರುವ ಯಾವುದೇ ಯೋಜನೆಗಳನ್ನು ಅನುಷ್ಠಾನಗೊಳಿಸಿಲ್ಲ. ಸರ್ಕಾರದಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದೆ ಎಂದು ದೂರಿದರು.</p>.<p>ನೀರಾವರಿ ಸಚಿವರು ಹಾಗೂ ಸಂಬಂಧಪಟ್ಟವರ ಮೇಲೆ ಜೆಡಿಎಸ್ ನಿರಂತರವಾಗಿ ಒತ್ತಡ ಹಾಕಿದ ಪರಿಣಾಮ ತುಂಗಾ ಏತ ನೀರಾವರಿ ಯೋಜನೆಯ ಮೂಲಕ ಗೌಡನಕೆರೆಗೆ ನೀರು ಹರಿದಿದೆ. ಆದರೆ, ‘ನಮ್ಮಿಂದಲೇ ಅದು ಸಾಧ್ಯವಾಗಿದೆ’ ಎಂದು ಬೇರೆ ಪಕ್ಷದ ಪ್ರತಿನಿಧಿಗಳು ಹೇಳಿಕೊಳ್ಳುತ್ತಿದ್ದಾರೆ ಎಂದು ಟೀಕಿಸಿದರು.</p>.<p>ವಾಲ್ಮೀಕಿ ಸಮಾಜದ ಅಭಿವೃದ್ಧಿಯಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷಗಳು ನಿರ್ಲಕ್ಷ್ಯ ವಹಿಸಿವೆ. ಪರಿಶಿಷ್ಟ ಪಂಗಡಕ್ಕೆ ಸಮಾಜವನ್ನು ಸೇರಿಸುವಲ್ಲಿ ಮಾಜಿ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡರ ಪಾತ್ರಮುಖ್ಯವಾಗಿದೆ. ಜನಪರ ಯೋಜನೆಗಳಜಾರಿಗೊಳಿಸಲು ಜೆಡಿಎಸ್ ಪಕ್ಷಅಧಿಕಾರಕ್ಕೆ ಬರಬೇಕಿದೆ’ ಎಂದರು.</p>.<p>ಜೆಡಿಎಸ್ ಮುಖಂಡ ಎಚ್.ಟಿ.ಬಳಿಗಾರ್ ಮಾತನಾಡಿ, ‘ಕಾಂಗ್ರೆಸ್ ಜಾರಿಗೊಳಿಸಿರುವ ಎಲ್ಲಾ ಭಾಗ್ಯಗಳು ದೌರ್ಭಾಗ್ಯಗಳಾಗಿವೆ. ಕಾಂಗ್ರೆಸ್, ಬಿಜೆಪಿಯಿಂದ ಯಾವುದೇ ಅಭಿವೃದ್ಧಿ ಸಾಧ್ಯವಿಲ್ಲ. ಆದ್ದರಿಂದ ಜೆಡಿಎಸ್ ಅನ್ನು ಜನರು ಬಯಸುತ್ತಿದ್ದಾರೆ’ ಎಂದರು.</p>.<p>ಜೆಡಿಎಸ್ ಎಸ್.ಟಿ ಘಟಕದ ರವಿಕುಮಾರ್, ಗ್ರಾಮಾಂತರ ಘಟಕದ ಕ್ಷೇತ್ರದ ಕಾರ್ಯಾಧ್ಯಕ್ಷ ಕಾಂತರಾಜು, ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ದಾದಾಪೀರ್, ಪ್ರಮುಖರಾದ ಗೀತಾ, ಸತೀಶ್, ನೇತ್ರಾ, ಹನುಮಂತಪ್ಪ, ಹೀರಾನಾಯ್ಕ, ಬಸವರಾಜ್, ಲಿಂಗರಾಜು, ಸದಾಶಿವಪ್ಪ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>