<p><strong>ಶಿವಮೊಗ್ಗ: </strong>ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಜೆಡಿಯು ಪಕ್ಷದಿಂದ 100 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಾಗುವುದು ಎಂದು ಜೆಡಿಯು ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಮಹಿಮ ಪಟೇಲ್ ಹೇಳಿದರು.</p>.<p>‘ಚುನಾವಣೆಯಲ್ಲಿ ಸ್ಪರ್ಧಿಸಲು ಜೆಡಿಯುನಿಂದ ಈಗಾಗಲೇ 20 ಅಭ್ಯರ್ಥಿಗಳನ್ನು ಗುರುತಿಸಲಾಗಿದೆ. ಸಾಗರ, ಸೊರಬ ಮತ್ತು ಶಿವಮೊಗ್ಗ ನಗರ ಕ್ಷೇತ್ರದಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ಉದ್ದೇಶಿಸಲಾಗಿದ್ದು, ಶೂನ್ಯದಿಂದ ಹೊರಟಿರುವ ತಮಗೆ ಈ ಬಾರಿ ಎಷ್ಟು ಸೀಟು ಲಭಿಸಿದರೂ ಅದು ಲಾಭವೇ. ರಾಜ್ಯದಲ್ಲಿ ಯಾವುದೇ ಸರ್ಕಾರಕ್ಕೆ ಬೆಂಬಲ ನೀಡುವ ಪರಿಸ್ಥಿತಿ ಎದುರಾದರೆ ಆದ್ಯತೆ ಮೇರೆಗೆ ಮೈತ್ರಿ ಮಾಡಿಕೊಳ್ಳಲಿದ್ದೇವೆ’ ಎಂದು ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.</p>.<p>‘ಚುನಾವಣಾ ಆಯೋಗ ನಿಗದಿಪಡಿಸಿದ ₹ 28 ಲಕ್ಷ ವೆಚ್ಚದ ಮಿತಿಯಲ್ಲಿ ಚುನಾವಣೆ ನಡೆಸುತ್ತೇವೆ. ಹಣ, ಹೆಂಡ ಹಂಚಿ ಚುನಾವಣೆ ಮಾಡುವುದಕ್ಕೆ ನಮ್ಮ ವಿರೋಧವಿದ್ದು, ಕೆಲಸ ಮಾಡುವ ಭರವಸೆ ಮೂಡಿಸಿ ಜನರ ಮತ ಪಡೆಯುತ್ತೇವೆ ಎಂದರು.</p>.<p>‘ಪಕ್ಷದ ರಾಷ್ಟ್ರೀಯ ಅಧ್ಯಕ್ಷ ನಿತೀಶ್ ಕುಮಾರ್ ಅವರ ಸೂಚನೆ ಮೇರೆಗೆ ರಾಜ್ಯದಲ್ಲಿ ಜೆಡಿಯು ಸಂಘಟನೆಯ ಜವಾಬ್ದಾರಿ ಹೊತ್ತಿದ್ದೇನೆ. ರಾಜ್ಯದಲ್ಲಿ<br /> ಪಕ್ಷ ಬೆಳೆಸಲು ಸಂಪೂರ್ಣ ಸ್ವಾತಂತ್ರ್ಯವನ್ನು ಅವರು ನೀಡಿರುವುದರಿಂದ ಮೂಲ ಜನತಾ ಪಕ್ಷದ ಆದರ್ಶಗಳನ್ನಿಟ್ಟುಕೊಂಡು ಪಕ್ಷ ಸಂಘಟನೆ ಮಾಡುತ್ತೇನೆ’ ಎಂದರು.</p>.<p>ಪತ್ರಿಕಾಗೋಷ್ಠಿಯಲ್ಲಿ ಪಕ್ಷದ ಜಿಲ್ಲಾ ಸಂಚಾಲಕ ಸೋಮಶೇಖರ್, ಪ್ರಮುಖರಾದ ಜಯಪ್ರಕಾಶ್, ತ್ಯಾಜವಳ್ಳಿ ಮಂಜುನಾಥ್, ಲೋಕಪಾಲ್ ಜೈನ್, ನವೀನ ದಳವಾಯಿ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿವಮೊಗ್ಗ: </strong>ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಜೆಡಿಯು ಪಕ್ಷದಿಂದ 100 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಾಗುವುದು ಎಂದು ಜೆಡಿಯು ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಮಹಿಮ ಪಟೇಲ್ ಹೇಳಿದರು.</p>.<p>‘ಚುನಾವಣೆಯಲ್ಲಿ ಸ್ಪರ್ಧಿಸಲು ಜೆಡಿಯುನಿಂದ ಈಗಾಗಲೇ 20 ಅಭ್ಯರ್ಥಿಗಳನ್ನು ಗುರುತಿಸಲಾಗಿದೆ. ಸಾಗರ, ಸೊರಬ ಮತ್ತು ಶಿವಮೊಗ್ಗ ನಗರ ಕ್ಷೇತ್ರದಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ಉದ್ದೇಶಿಸಲಾಗಿದ್ದು, ಶೂನ್ಯದಿಂದ ಹೊರಟಿರುವ ತಮಗೆ ಈ ಬಾರಿ ಎಷ್ಟು ಸೀಟು ಲಭಿಸಿದರೂ ಅದು ಲಾಭವೇ. ರಾಜ್ಯದಲ್ಲಿ ಯಾವುದೇ ಸರ್ಕಾರಕ್ಕೆ ಬೆಂಬಲ ನೀಡುವ ಪರಿಸ್ಥಿತಿ ಎದುರಾದರೆ ಆದ್ಯತೆ ಮೇರೆಗೆ ಮೈತ್ರಿ ಮಾಡಿಕೊಳ್ಳಲಿದ್ದೇವೆ’ ಎಂದು ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.</p>.<p>‘ಚುನಾವಣಾ ಆಯೋಗ ನಿಗದಿಪಡಿಸಿದ ₹ 28 ಲಕ್ಷ ವೆಚ್ಚದ ಮಿತಿಯಲ್ಲಿ ಚುನಾವಣೆ ನಡೆಸುತ್ತೇವೆ. ಹಣ, ಹೆಂಡ ಹಂಚಿ ಚುನಾವಣೆ ಮಾಡುವುದಕ್ಕೆ ನಮ್ಮ ವಿರೋಧವಿದ್ದು, ಕೆಲಸ ಮಾಡುವ ಭರವಸೆ ಮೂಡಿಸಿ ಜನರ ಮತ ಪಡೆಯುತ್ತೇವೆ ಎಂದರು.</p>.<p>‘ಪಕ್ಷದ ರಾಷ್ಟ್ರೀಯ ಅಧ್ಯಕ್ಷ ನಿತೀಶ್ ಕುಮಾರ್ ಅವರ ಸೂಚನೆ ಮೇರೆಗೆ ರಾಜ್ಯದಲ್ಲಿ ಜೆಡಿಯು ಸಂಘಟನೆಯ ಜವಾಬ್ದಾರಿ ಹೊತ್ತಿದ್ದೇನೆ. ರಾಜ್ಯದಲ್ಲಿ<br /> ಪಕ್ಷ ಬೆಳೆಸಲು ಸಂಪೂರ್ಣ ಸ್ವಾತಂತ್ರ್ಯವನ್ನು ಅವರು ನೀಡಿರುವುದರಿಂದ ಮೂಲ ಜನತಾ ಪಕ್ಷದ ಆದರ್ಶಗಳನ್ನಿಟ್ಟುಕೊಂಡು ಪಕ್ಷ ಸಂಘಟನೆ ಮಾಡುತ್ತೇನೆ’ ಎಂದರು.</p>.<p>ಪತ್ರಿಕಾಗೋಷ್ಠಿಯಲ್ಲಿ ಪಕ್ಷದ ಜಿಲ್ಲಾ ಸಂಚಾಲಕ ಸೋಮಶೇಖರ್, ಪ್ರಮುಖರಾದ ಜಯಪ್ರಕಾಶ್, ತ್ಯಾಜವಳ್ಳಿ ಮಂಜುನಾಥ್, ಲೋಕಪಾಲ್ ಜೈನ್, ನವೀನ ದಳವಾಯಿ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>